ಅಧಿಕಾರಿ ದರ್ಪ: ಪಿಂಚಣಿ ಹಣಕ್ಕಾಗಿ ನಡೆದ ಕರುಣಾಜನಕ ಘಟನೆ
ಭುವನೇಶ್ವರ, ಜೂನ್ 16: ಪಿಂಚಣಿ ಹಣ ಪಡೆಯಲು ಬಂದ ಮಹಿಳೆಯ ಮೇಲೆ ಒಡಿಶಾದ ಅಧಿಕಾರಿ ದರ್ಪ ತೋರಿಸಿದ್ದಾನೆ. ಹೀಗಾಗಿ ಸಾರ್ವಜನಿಕರಿಂದ ಅಧಿಕಾರಿ ಮೇಲೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Recommended Video
ಒಡಿಶಾದ ನುವಾಪಾಸ ಜಿಲ್ಲೆಯ ಬರಗನ್ ಎಂಬ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಲಾಭ್ ಭಾಗೆಲ್ ಎಂಬ 100 ವರ್ಷದ ವೃದ್ಧೆ ತಮ್ಮ ಜನ್ ಧನ್ ಖಾತೆಯಲ್ಲಿರುವ 1500 ರೂಪಾಯಿಗಳನ್ನು ಪಡೆಯಬೇಕಾಗುತ್ತಿತ್ತು. ಹೀಗಾಗಿ, ತನ್ನ 70 ವರ್ಷದ ಮಗಳು ಗುಂಜಾ ದೇವಿಗೆ ತಾನೇ ಹೋಗಿ ತೆಗೆದುಕೊಂಡುಬರುವಂತೆ ಹೇಳಿದ್ದರು.
100 ವರ್ಷದ ವೃದ್ಧೆ ಹಾಸಿಗೆ ಹಿಡಿದಿದ್ದು, ಆಕೆಯ ಬದಲಿಗೆ ಮಗಳು ಬ್ಯಾಂಕ್ಗೆ ಹೋಗಿ ಹಣ ನೀಡುವಂತೆ ತಿಳಿಸಿದ್ದರು. ಆದರೆ, ಬ್ಯಾಂಕ್ ಅಧಿಕಾರಿ ಆಕೆಯ ತಾಯಿಯೇ ಬರಬೇಕು ಆಗ ಮಾತ್ರ ಹಣ ನೀಡಲು ಸಾಧ್ಯ ಎಂದು ಹೇಳಿದ. ಬ್ಯಾಂಕ್ ಅಧಿಕಾರಿ ಏನೇ ಹೇಳಿದರೂ ಒಪ್ಪದ ಕಾರಣ ಆ ಮಹಿಳೆ ತನ್ನ ತಾಯಿಯನ್ನು ಕರೆದುಕೊಂಡು ಬ್ಯಾಂಕ್ಗೆ ಬಂದಿದ್ದಾರೆ.

ಹಾಸಿಗೆ ಹಿಡಿದ 100 ವರ್ಷದ ವೃದ್ಧೆ ಎದ್ದು ನಡೆಯುವುದು ಹೇಗೆ, ಹೀಗಾಗಿ, ಹಾಸಿಗೆ ಸಮೇತ ತನ್ನ ತಾಯಿಯನ್ನು ಬ್ಯಾಂಕ್ಗೆ ಕರೆದುಕೊಂಡು ಬಂದಿದ್ದಾರೆ. ಆಗ ಅಧಿಕಾರಿ ಹಣ ನೀಡಿದ್ದಾರೆ. ತನ್ನ ಮನೆಯಿಂದ ಮಹಿಳೆ ಮಂಚದ ಮೇಲೆ ತಾಯಿಯನ್ನು ಮಲಗಿಸಿಕೊಂಡು ಎಳೆದುಕೊಂಡೇ ಬಂದಿದ್ದಾರೆ. ಅಧಿಕಾರಿಯ ಇಂತಹ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
Odisha: In a video that surfaced recently, a woman was seen dragging her centenarian mother on a cot, to a bank in Nuapada district to withdraw her pension money allegedly after the bank asked for physical verification. pic.twitter.com/XPs55ElINA
— ANI (@ANI) June 15, 2020
ನುವಾಪಾದ ಶಾಸಕ ರಾಜು ದೊಲ್ಕಿಯಾ ಈ ಬಗ್ಗೆ ಮಾತನಾಡಿದ್ದು ''ಇದು ಅಮಾನವೀಯ ಘಟನೆಯಾಗಿದ್ದು, ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯನ್ನು ಸರಕಾರವು ತಕ್ಷಣವೇ ತನಿಖೆ ನಡೆಸುವಂತೆ ಒತ್ತಾಯಿಸುತ್ತೇನೆ'' ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications