ಒಡಿಶಾ ಅಧಿಕಾರ ರಾಷ್ಟ್ರೀಯ ಪಕ್ಷಕ್ಕೆ ಸಿಕ್ಕರೆ, ಮೂಲ ಆಶಯಕ್ಕೆ ಸೋಲು: ನವೀನ್ ಪಟ್ನಾಯಕ್
ಭುವನೇಶ್ವರ, ಡಿಸೆಂಬರ್ 19: ಒಡಿಶಾದಲ್ಲಿ ಕೇವಲ ಪ್ರಾದೇಶಿಕ ಪಕ್ಷಗಳೇ ಸರಿಯಾಗಿ ಹೊಂದುತ್ತದೆ. ಒಂದೊಮ್ಮೆ ರಾಜ್ಯವನ್ನು ರಾಷ್ಟ್ರೀಯ ಪಕ್ಷಗಳು ಮುನ್ನಡೆಸಿಕೊಂಡು ಹೋದರೆ ನಮ್ಮ ಮೂಲ ಆಶಯವೇ ನಾಶವಾಗಿಬಿಡುತ್ತದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಒಡಿಶಾವನ್ನು ಭಾಷೆಯ ಆಧಾರದ ಮೇಲೆ ಬೇರೆ ರಾಜ್ಯವನ್ನಾಗಿ ವಿಂಗಡಿಸಲಾಗಿದೆ. ಒಡಿಶಾವನ್ನು ಬೇರೆ ರಾಜ್ಯವನ್ನಾಗಿ ಮಾಡುವ ಉದ್ದೇಶವೇ ನಮ್ಮ ರಾಜ್ಯದ, ಸಂಸ್ಕೃತಿ, ವಿಶೇಷತೆ ಉಳಿಯಲಿ ಎಂದು ಶುಕ್ರವಾರ ಬಿಜು ಯುವ ಜನತಾ ದಳದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಡಿಸೆಂಬರ್ 26ರಂದು ಪಕ್ಷದ ಸಂಸ್ಥಾಪನಾ ದಿನಾಚರಣೆ ಇದೆ. ಅದಕ್ಕೂ ಮುನ್ನ ಮುಖ್ಯಮಂತ್ರಿ ಪಟ್ನಾಯಕ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬಿಜೆಡಿ ಅಧ್ಯಕ್ಷ ಮಾತನಾಡಿ, ಯಾವ ಪಕ್ಷದ ರಾಜ್ಯದ ಜತೆ ಹಾಗೂ ರಾಜ್ಯದ ಜನತೆ ಜತೆ ಸಂಪರ್ಕದಲ್ಲಿರಿವುದೋ ಅಂತಹ ಪಕ್ಷ ಮಾತ್ರ ಒಡಿಶಾ ಪರ ಯುದ್ಧ ಮಾಡಲಿದೆ.
ಬಿಜೆಪಿಡಿ ಒಂದು ಸ್ಥಳೀಯ ಪಕ್ಷವಾಗಿದೆ. ಹಾಗೆಯೇ ಯಾವ ಕಾರಣದಿಂದ ಒಡಿಶಾ ರಾಜ್ಯ ನಿರ್ಮಾಣವಾಗಿತ್ತೋ ಆ ಕಾರಣವನ್ನು ಮುಂದುವರೆಸಿಕೊಂಡು ಹೋಗುವುದೇ ಪಕ್ಷದ ಉದ್ದೇಶವಾಗಿದೆ. 1936ರಲ್ಲಿ ಭಾಷೆಯ ಆಧಾರದ ಮೇಲೆ ಒಡಿಶಾ ಪ್ರಾಂತ್ಯವನ್ನು ನಿರ್ಮಾಣ ಮಾಡಿದ್ದರು.
ನವೀನ್ ಪಟ್ನಾಯಕ್ ಅವರು ಐದನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.ರಾಷ್ಟ್ರೀಯ ಪಕ್ಷಗಳು ಇಡೀ ದೇಶದ ತುಂಬಾ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ನಿಮಗೆ ಹಿಂದಿಗಿಂತ ಒಡಿಯಾ ಭಾಷೆಯೇ ಮುಖ್ಯ, ಮಹಾನದೀ ಬೇರೆಲ್ಲಾ ನದಿಗಳಿಗಿಂತ ಪವಿತ್ರವಾದದ್ದು ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications