ಪುರಿ ಜಗನ್ನಾಥ ರಥಯಾತ್ರೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ
ದೆಹಲಿ, ಜೂನ್ 22: ಕೆಲವು ನಿರ್ಬಂಧಗಳೊಂದಿಗೆ ಒಡಿಶಾದ ಪುರಿಯಲ್ಲಿ ಜಗನ್ನಾಥ ಸ್ವಾಮಿಯ ವಾರ್ಷಿಕ ರಥಯಾತ್ರೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆರೋಗ್ಯ ಸಮಸ್ಯೆಯಲ್ಲಿ ರಾಜಿ ಮಾಡಿಕೊಳ್ಳದೆ ದೇವಾಲಯ ಸಮಿತಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಮನ್ವಯದೊಂದಿಗೆ ಪುರಿ ರಥಯಾತ್ರೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Recommended Video
ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ರವೀಂದ್ರ ಮೂರ್ತಿ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು. ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಯಿಂದ ಅರ್ಜಿದಾರರು ಮತ್ತು ಸಂಸ್ಥೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತು. ನಂತರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು ರಥಯಾತ್ರೆ ನಡೆಸಿ ಎಂದು ಅನುಮತಿ ನೀಡಿದೆ.
ಇದರ ನಡುವೆ ಒಡಿಶಾ ರಾಜ್ಯ ಸರ್ಕಾರಕ್ಕೆ ಹಬ್ಬ ಅಥವಾ ರಥಯಾತ್ರೆಯನ್ನು ಕೈ ಬಿಡಬೇಕು ಎನ್ನಿಸಿದರೆ ಅದನ್ನು ನಿಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದಕ್ಕೂ ಮೊದಲು ಜೂನ್ 18 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಸಾಂಕ್ರಾಮಿಕ ರೋಗ ಹರಡುವಿಕೆಯ ಸಮಯದಲ್ಲಿ ಇಂತಹ ರಥಯಾತ್ರೆ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿತ್ತು.
''ನಾವು ರಥಯಾತ್ರೆಗೆ ನಿಲ್ಲಿಸಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುತ್ತಾರೆ. ಸಾಂಕ್ರಾಮಿಕ ಸಮಯದಲ್ಲಿ ಇಂತಹ ಘಟನೆಗಳು ಸಂಭವಿಸದಿರಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಈ ಆದೇಶ ಅಗತ್ಯವಾಗಿದೆ'' ಎಂದು ಸುಪ್ರೀಂಕೋರ್ಟ್ ಹೇಳಿತ್ತು.
ಕೊರೊನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಒಡಿಶಾ ಡೆವಲಪ್ಮೆಂಟ್ ಕೌನ್ಸಿಲ್ ಎಂಬ ಎನ್ಜಿಒ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು ಮತ್ತು ಈ ವರ್ಷ ರಥಯಾತ್ರೆಗೆ ತಡೆಯಾಜ್ಞೆ ನೀಡುವಂತೆ ಕೋರಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications