ಕೊರೊನಾ ನಿರ್ವಹಣೆಗೆ ಮಾದರಿಯಾದ ಒಡಿಶಾ ಸರ್ಕಾರ
ಭುವನೇಶ್ವರ, ಜೂನ್ 05: ಒಡಿಶಾ ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಮಹತ್ತರ ಕ್ರಮಗಳನ್ನು ತೆಗೆದುಕೊಂಡಿದೆ. ಇದರಿಂದಾಗಿ ಒಡಿಶಾದಲ್ಲೀಗ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ.
ದೇಶದಲ್ಲಿ ಕೊರೊನಾ ಪ್ರವೇಶಕ್ಕೂ ಮುನ್ನವೇ, ಅಗತ್ಯ ಕಾನೂನು ಮಾರ್ಪಾಡು, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದೇಶದಲ್ಲಿ ಅತಿ ದೊಡ್ಡ ಕೊರೊನಾ ಆಸ್ಪತ್ರೆಯನ್ನು ಭುವನೇಶ್ವರದಲ್ಲಿ ತೆರೆಯುವ ಮೂಲಕ ಯಾವುದೇ ತುರ್ತು ಆರೋಗ್ಯ ಸೇವೆಗೆ ನೆರವಾಗುವ ನಿಟ್ಟಿನಲ್ಲಿ ಒಡಿಶಾ ಸರ್ಕಾರ ಕ್ರಮ ಕೈಗೊಂಡಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ, ಮುಂಜಾಗ್ರತಾ ಕ್ರಮದಿಂದಾಗಿ ರಾಜ್ಯದಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಲು ಸಾಧ್ಯವಾಗಿದೆ.
ತಂತ್ರಜ್ಞಾನದ ನೆರವನ್ನೂ ಪಡೆದು ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ದೊಡ್ಡ ಹೆಜ್ಜೆಗಳನ್ನು ಇಡಲಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಈಗ 3300 ಐಸಿಯು ಬೆಡ್ಗಳಿದ್ದರೆ, ಸುಮಾರು 17000 ಸಾವಿರ ಹಾಸಿಗೆಗಳು ರಾಜ್ಯಾದ್ಯಂತ ಲಭ್ಯವಿದೆ.
ಜತೆಗೆ ಪೂರಕ ವೆಂಟಿಲೇಟರ್ ವ್ಯವಸ್ಥೆಯೂ ಕೂಡ ಇದೆ. ಹಾಸಿಗೆಗಳ ಲಭ್ಯತೆ ಜತೆಗೆ ಗ್ರಾಮ ಗ್ರಾಮಗಳಲ್ಲೂ ಮುಂಜಾಗ್ರತೆಯನ್ನು ಮೂಡಿಸಲಾಗುತ್ತಿದೆ. ಹಾಗೆಯೇ ಸ್ಥಳೀಯ ನೌಕರರನ್ನು ಬಳಸಿಕೊಂಡು ಸ್ಥಳೀಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಕೊರೊನಾ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಗ್ರಾಮ ಮಟ್ಟದ ಅಧಿಕಾರಿಗಳವರೆಗೂ ಜಾಗೃತಿ ಮೂಡಿಸಲಾಗಿದೆ ಇದರಿಂದ ಕೊರೊನಾ ನಿಯಂತ್ರಣವು ಗ್ರಾಮದಿಂದ ನಗರದವರೆಗೂ ಸುಲಭವಾಗಿ ಆಗುತ್ತಿದೆ.
ಇದಲ್ಲದೆ ಕೊರೊನಾ ಲಸಿಕೆ ವಿತರಣೆಯಲ್ಲೂ ರಾಜ್ಯ ಮುಂದಡಿ ಇಟ್ಟಿದ್ದು, ಈಗಾಗಲೇ ರಾಜ್ಯ 17 ಲಕ್ಷ ಡೋಸ್ಗಳನ್ನು ಜನರಿಗೆ ನೀಡಿದೆ.
ಗ್ರಾಮೀಣ ಭಾಗದಲ್ಲಿ ಸುಮಾರು 7 ಸಾವಿ ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಗ್ರಾಮ ಮಟ್ಟದಲ್ಲಿ ಕೊರೊನಾ ನಿರ್ವಹಣೆಯನ್ನು ಸುಲಭವಾಗಿ ರಾಜ್ಯ ಸರ್ಕಾರ ಮಾಡುತ್ತಿದೆ.
ಸಚೇತಕ್ ಮೊಬೈಲ್ ಅಪ್ಲಿಕೇಷನ್ ಮೂಲಕ ವಲಸೆ ಕಾರ್ಮಿಕರ ನೆರವಿಗೆ ಧಾವಿಸಲಾಗುತ್ತಿದೆ, ವಲಸೆ ಕಾರ್ಮಿಕರ ಸಮಸ್ಯೆ ಹಾಗೂ ಅವರನ್ನು ಟ್ರ್ಯಾಕ್ ಮಾಡಲು ಇದರಿಂದ ಸುಲಭವಾಗುತ್ತಿದೆ. ಹೀಗಾಗಿ ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಕೊರೊನಾ ಹಬ್ಬುವುದನ್ನು ತಡೆಯಲು ಸಾಧ್ಯವಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications