ಎನ್ಆರ್ಸಿ ಗೆ ಬೆಂಬಲ ಇಲ್ಲ ಎಂದ ನವೀನ್ ಪಟ್ನಾಯಕ್, ಬಿಜೆಪಿಗೆ ಆಘಾತ
ಭುವನೇಶ್ವರ್, ಡಿಸೆಂಬರ್ 18: ಎನ್ಆರ್ಸಿ ಗೆ ಬೆಂಬಲ ನೀಡುವುದಿಲ್ಲ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.
ಪೌರತ್ವ ಕಾಯ್ದೆಯನ್ನು ಬಿಜೆಪಿಯು ಲೋಕಸಭೆಯಲ್ಲಿ ಮಂಡಿಸಿದ್ದಾಗ ನವೀನ್ ಪಟ್ನಾಯಕ್ ಮುಖಂಡತ್ವದ ಬಿಜು ಜನತಾ ದಳದ ಸದಸ್ಯರು ಮಸೂದೆಗೆ ಬೆಂಬಲ ನೀಡಿದ್ದರು. ಆದರೆ ಈಗ ನವೀನ್ ಪಟ್ನಾಯಕ್ ಎನ್ಆರ್ಸಿ ಗೆ ಬೆಂಬಲ ನೀಡುವುದಿಲ್ಲ ಎನ್ನುವ ಮೂಲಕ ಬಿಜೆಪಿಗೆ ಆಘಾತ ಮೂಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ನವೀನ್ ಪಟ್ನಾಯಕ್ ಅವರು, 'ನಮ್ಮ ಸಂಸದರು ಸಿಎಬಿ ಗೆ ಬೆಂಬಲ ನೀಡಿದ್ದರು. ಪೌರತ್ವ ಕಾಯ್ದೆಯು ವಿದೇಶಿಗರ ಮೇಲೆ ಪರಿಣಾಮ ಬೀರುತ್ತದೆ, ಭಾರತದವರ ಮೇಲೆ ಅಲ್ಲ, ಆದರೆ ನಾವು ಎನ್ಆರ್ಸಿ ಯನ್ನು ಬೆಂಬಲಿಸುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಒಡಿಶಾ ರಾಜ್ಯದಲ್ಲಿ ಸಹ ಎನ್ಆರ್ಸಿ ಮತ್ತು ಪೌರತ್ವ ಕಾಯ್ದೆಯ ವಿರುದ್ಧ ಸತತ ಪ್ರತಿಭಟನೆಗಳು ನಡೆಯುತ್ತಿದ್ದವು. ಹಾಗಾಗಿ ನವೀನ್ ಪಟ್ನಾಯಕ್ ಅವರು ಈ ನಿರ್ಧಾರ ತಳೆದಿದ್ದಾರೆ.
ಪಟ್ನಾಯಕ್ ಅವರ ಬಿಜೆಡಿ ಯು ಬಿಜೆಪಿ ನೇತೃತ್ವದ ಎನ್ಡಿಎ ಗುಂಪಿನಲ್ಲಿತ್ತು. ಆದರೆ ನಂತರ ಅದರಿಂದ ಹೊರಬಂದಿತ್ತಾದರೂ, ಲೋಕಸಭೆಯಲ್ಲಿ ಬಿಜೆಪಿ ಗೆ ಬೆಂಬಲ ಸೂಚಿಸುತ್ತಲೇ ಬಂದಿತ್ತು. ಆದರೆ ಈಗ ಏಕಾ-ಏಕಿ ಬಿಜೆಪಿ ಯ ಮಹಾತ್ವಾಕಾಂಕ್ಷೆಯ ಎನ್ಆರ್ಸಿ ವಿರುದ್ಧ ನಿಂತಿರುವುದು ಬಿಜೆಪಿ ಗೆ ಆಘಾತ ತಂದಿದೆ.
ದೇಶದ ನಾಗರೀಕರನ್ನು ಪತ್ತೆ ಹಚ್ಚಲು ರಾಷ್ಟ್ರೀಯ ನಾಗರೀಕ ನೊಂದಣಿ (ಎನ್ಆರ್ಸಿ) ಯನ್ನು ಕೇಂದ್ರ ಸರ್ಕಾರ ಜಾರಿಗೆ ನಿಶ್ಚಯಿಸಿದೆ. ಆದರೆ ಇದರ ವಿರುದ್ಧ ತೀವ್ರ ಅಸಮಾಧಾನ ಕೇಳಿಬರುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications