Video: ಬೀದರ್ನಲ್ಲಿ ದಸರಾ ಆಚರಿಸಲು ಮದರಸಾಗೆ ನುಗ್ಗಿದ ಗುಂಪು!
ಬೀದರ್, ಅಕ್ಟೋಬರ್ 06: ಕರ್ನಾಟಕದ ಬೀದರ್ ಜಿಲ್ಲೆಯ ಪಾರಂಪರಿಕ ಮದರಸಾವೊಂದಕ್ಕೆ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುಂಪೊಂದು ನುಗ್ಗಿರುವ ಘಟನೆ ಬಗ್ಗೆ ವರದಿಯಾಗಿದೆ. ಈ ಸಂಬಂಧ ಒಂಬತ್ತು ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಗೊತ್ತಾಗಿದೆ.
ಕಳೆದ 1460ರ ದಶಕದಲ್ಲಿ ನಿರ್ಮಿಸಲಾದ ಬೀದರ್ನಲ್ಲಿರುವ ಮಹ್ಮದ್ ಗವಾನ್ ಮದರಸಾ ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಬರುತ್ತದೆ. ಪರಂಪರೆಯ ರಚನೆಯು ಪ್ರಮುಖ ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಲ್ಲಿದೆ. ಈ ಮದರಸಾಗೆ ನುಗ್ಗಿದ ಗುಂಪು ಘೋಷಣೆಗಳನ್ನು ಕೂಗುತ್ತಾ ಕಟ್ಟಡದ ಮೂಲೆಯೊಂದರಲ್ಲಿ ಪೂಜೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ಬುಧವಾರ ಸಂಜೆ ಉದ್ರಿಕ್ತರ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಆರೋಪಿಗಳನ್ನು ನಾಳೆಯೊಳಗೆ ಬಂಧಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಹಿಂದು ಧರ್ಮದ ಪರ ಘೋಷಣೆ:
ಪೂಜೆ ಮಾಡುವುದಕ್ಕಾಗಿ ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತ ಗುಂಪಿನ ಜನರು "ಜೈ ಶ್ರೀರಾಮ್" ಮತ್ತು "ಹಿಂದೂ ಧರ್ಮಕ್ಕೆ ಜೈ" ಎನ್ನುವ ಘೋಷಣೆಗಳನ್ನು ಕೂಗಿದರು. ಆನ್ಲೈನ್ನಲ್ಲಿ ಓಡಾಡುತ್ತಿರುವ ವಿಡಿಯೋದಲ್ಲಿ ಮೆಟ್ಟಿಲುಗಳ ಮೇಲೆ ನಿಂತಿರುವ ಜನರ ಗುಂಪು ಕಟ್ಟಡದ ಒಳಗೆ ನುಗ್ಗಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಈ ಸಂಬಂಧ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೀದರ್ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿವೆ. ಆರೋಪಿಗಳನ್ನು ಬಂಧಿಸದಿದ್ದಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. "ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ" ಇಂತಹ ಘಟನೆಗಳನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದರು.
Visuals from historic Mahmud Gawan masjid & madrasa, Bidar, #Karnataka (5th October). Extremists broke the gate lock & attempted to desecrate. @bidar_police @BSBommai how can you allow this to happen? BJP is promoting such activity only to demean Muslims pic.twitter.com/WDw1Gd1b93
— Asaduddin Owaisi (@asadowaisi) October 6, 2022
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications