ಪ್ರತಿಷ್ಠಿತರ ಸಕ್ಕರೆ ಕಾರ್ಖಾನೆ ವಶಕ್ಕೆ ಪಡೆದು ಸರ್ಕಾರ ಅನುಕೂಲ ಮಾಡಿಕೊಡಲು ಆಗ್ರಹ
ಬೀದರ್, ಜನವರಿ 29: ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಕ್ಕರೆ ಕಾರ್ಖಾನೆಗಳು, ಅವುಗಳ ವ್ಯವಹಾರಗಳ ಕುರಿತು ರಾಜ್ಯ ಸರ್ಕಾರ ತನಿಖೆ ಮಾಡಬೇಕು. ಕಾರ್ಖಾನೆಗಳನ್ನು ವಶಕ್ಕೆ ಪಡೆದು ಕಾರ್ಮಿಕರಿಗೆ ಕೆಲಸ ಕೊಡಬೇಕು. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.
ಹೌದು, ಬೀದರ್ ಜಿಲ್ಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಆಗ್ರಹಿಸಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು, ಸರ್ಕಾರ ಕಾರಂಜಿ ಯೋಜನೆ ಹಲವು ದಶಕಗಳಿಂದ ಹಳ್ಳ ಹಿಡಿದಿದೆ. ಕಾಲುವೆ ಇದೆ, ಗುತ್ತಿಗೆದಾರರಿಗೆ ಹಣ ಸಿಕ್ಕಿದೆ ಆದರೆ ಜನರಿಗೆ ಏನು ಲಾಭವಾಗಿದೆ ಎಂದರು.

ಕೋ ಆಪರೇಟಿವ್ ವಿಭಾಗದಲ್ಲಿ ಮೂರು ಸಕ್ಕರೆ ಕಾರ್ಖಾನೆಗಳು ಇದ್ದವು, ಈಗ ಎರಡು ಮಾತ್ರ ಚಾಲನೆಯಲ್ಲಿದೆ, ಒಂದನ್ನು ಮುಚ್ಚಲಾಗಿದೆ. ಯಾವ ಸರ್ಕಾರ ಬಂದರೂ ಇವುಗಳಿಗೆ ಜೀವ ಕೊಡುವ ಕೆಲಸ ಮಾಡುತ್ತಿಲ್ಲ. 1500 ಕಾರ್ಮಿಕರು ಬೀದಿ ಪಾಲಾಗಿದ್ದಾರೆ, ರೈತರಿಗೆ ಸಮಸ್ಯೆಯಾಗಿದೆ ಇದಕ್ಕೆಲ್ಲಾ ಯಾರು ಹೊಣೆ ಎಂದು ಅವರು ಪ್ರಶ್ನೆ ಮಾಡಿದರು.
ಎಎಪಿ ಯೋಜನೆ ಕದ್ದು ಗ್ಯಾರೆಂಟಿ ಎಂದು ಜಾರಿ
ಇಡೀ ದೇಶದಲ್ಲಿ ನೋಡಿದರೆ ಆಮ್ ಆದ್ಮಿ ಪಕ್ಷ ಮಾತ್ರ ₹8 ಸಾವಿರ ಕೋಟಿ ಉಳಿತಾಯ ಬಜೆಟ್ ನೀಡಿದೆ. ಉಚಿತ ಶಿಕ್ಷಣ, ನೀರು, ಆರೋಗ್ಯ ಎಲ್ಲಾ ನೀಡಿ, ಇಷ್ಟು ಉಳಿತಾಯ ಮಾಡಲಾಗಿದೆ. ಭ್ರಷ್ಟಾಚಾರವನ್ನು ಮಟ್ಟಹಾಕಿದರೆ ಮಾತ್ರ ಇದು ಸಾಧ್ಯ. ಸಿದ್ದರಾಮಯ್ಯ ಅವರ ಸರ್ಕಾರ ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕದ್ದು ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಯೋಜನೆಗಳನ್ನು ಕೊಟ್ಟಿದೆ ಎಂದು ಅವರು ಆರೋಪಿಸಿದರು.
ಎಸ್ಸಿ ಎಸ್ಟಿ ಅನುದಾನ ದುರ್ಬಳಕೆ ಆರೋಪ
ಗ್ಯಾರೆಂಟಿ ಯೋಜನೆಗಳಿಗಾಗಿ ಸರ್ಕಾರ ಎಸ್ಸಿ ಎಸ್ಟಿ ವರ್ಗಕ್ಕೆ ಮೀಸಲಿಟ್ಟಿದ್ದ ₹30 ಸಾವಿರ ಕೋಟಿ ಹಣದಲ್ಲಿ ₹11 ಸಾವಿರ ಕೋಟಿಯನ್ನು ಬಳಸಿಕೊಂಡಿದೆ. ಗ್ಯಾರಂಟಿ ಅನುಷ್ಠಾನಕ್ಕೆ ಬಜೆಟ್ನಲ್ಲಿ ಹಣ ಮೀಸಲಿಟ್ಟಿಲ್ಲ, ಬೇರೆ ಬೇರೆ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣ ಕಿತ್ತು ಇದಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ಅವರು ದೂರಿದರು.

ಪ್ರತಾಪ್ ರೆಡ್ಡಿ 7 ಜಿಲ್ಲೆಯನ್ನೊಳಗೊಂಡ ಪದವೀಧರರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಲಿದ್ದು, ಅವರಿಗೆ ನಾವು ಬೆಂಬಲ ನೀಡುತ್ತಿದ್ದೇನೆ. ಜೂನ್ನಲ್ಲಿ ಚುನಾವಣೆ ನಡೆಯಲಿದೆ. ಜಿಲ್ಲಾಧ್ಯಕ್ಷರ ಜೊತೆ ಚರ್ಚೆ ಮಾಡಿ, ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಹನುಮಧ್ವಜ ವಿಚಾರ ಎಎಪಿ ರಾಜ್ಯಾಧ್ಯಕ್ಷರ ಪ್ರತಿಕ್ರಿಯೆ
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಹನುಮಧ್ವಜ ವಿಚಾರಗಳನ್ನು ರಾಜಕೀಯಗೊಳಿಸಬಾರದು. ಶಾಂತಿಯುತವಾಗಿ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಕಾರಣ ರಾಜಕೀಯ ಲಾಭಕ್ಕಾಗಿ ಇಂತಹ ವಿವಾದಗಳನ್ನು ದೊಡ್ಡದು ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಈಗಾಗಲೇ 15 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗಾಗಿ ಪ್ರವಾಸ ಮಾಡಿದ್ದೇವೆ. ಅರಳಿಕಟ್ಟೆ ಎನ್ನುವ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳನ್ನು ಕೇಳಿದ್ದೇವೆ, ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಬಳಿ ಹಣ ಬಲ ಇಲ್ಲ ಜಂಗಮರಂತೆ ಊರೂರು ಸುತ್ತಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದರು.
ಮಾಧ್ಯಮ ಗೋಷ್ಠಿ ಬಳಿಕ ಬೀದರ್ ಜಿಲ್ಲೆಯ ಸಿಖ್ಖರ ಪವಿತ್ರ ಗುರುದ್ವಾರ ಗುರುನಾನಕ್ ಮಂದಿರಕ್ಕೆ ಭೇಟಿ ನೀಡಿದ ಡಾ. ಮುಖ್ಯ ಮಂತ್ರಿ ಚಂದ್ರು ಪ್ರಾರ್ಥನೆ ಸಲ್ಲಿಸಿದರು. ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ನಸೀಮ್ ಪಟೇಲ್, ಬೀದರ್ ಜಿಲ್ಲಾಧ್ಯಕ್ಷ ಬ್ಯಾಂಕ್ ರೆಡ್ಡಿ, ಜಿಲ್ಲಾ ಮುಖಂಡರಾದ ಗುಲಾಮ್ ಅಲಿ, ಅವಿನಾಶ್ ಕಮಲಾಪುರ್ ಭಾಗವಹಿಸಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications