ಬಸವಕಲ್ಯಾಣ: ಇದುವರೆಗಿನ 14 ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಒಂದೇ ಒಂದು ಬಾರಿ: ಅಬ್ ಕೀ ಬಾರ್?
ಆಪರೇಶನ್ ಕಮಲದ ಮೂಲಕ ಬಿಜೆಪಿಗೆ ಬಂದ ಮುಖಂಡರನ್ನು ಮತ್ತೆ ಚುನಾವಣೆಗೆ ನಿಲ್ಲಿಸುವಾಗ, ಸಿಎಂ ಯಡಿಯೂರಪ್ಪನವರಿಗೆ ಗೆಲ್ಲುವ ಚಾನ್ಸ್ ಕಮ್ಮಿ ಎಂದು ಲೆಕ್ಕಾಚಾರ ಹಾಕಿದ್ದ ಕ್ಷೇತ್ರಗಳೆಂದರೆ, ಹುಣಸೂರು, ಶಿವಾಜಿನಗರ ಮತ್ತು ಕೆ.ಆರ್.ಪೇಟೆ. ಬಿಎಸ್ವೈ ಲೆಕ್ಕಾಚಾರದಂತೆ ಹುಣಸೂರು ಮತ್ತು ಶಿವಾಜಿನಗರದಲ್ಲಿ ಬಿಜೆಪಿ ಸೋತಿತ್ತು.
ಆದರೆ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮೊದಮೊದಲು ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಎನ್ನುವ ಚಿತ್ರಣ, ಬಿ.ವೈ.ವಿಜಯೇಂದ್ರ, ಡಾ.ಅಶ್ವಥ್ ನಾರಾಯಣ ಮತ್ತು ಹಾಸನ ಶಾಸಕ ಪ್ರೀತಂ ಗೌಡ ಎಂಟ್ರಿಯ ನಂತರ ಬದಲಾಗಿತ್ತು. ಕ್ಷೇತ್ರದಲ್ಲಿ ಬಿಜೆಪಿ ಮೊದಲ ಬಾರಿ ಜಯ ಸಾಧಿಸಿತ್ತು.
ಇದೇ ರೀತಿಯ ಚುನಾವಣಾಪೂರ್ವ ವಾತಾವರಣ ತುಮಕೂರು ಜಿಲ್ಲೆಯ ಶಿರಾದಲ್ಲೂ ಇತ್ತು. ಕೆ.ಆರ್.ಪೇಟೆಯಲ್ಲಿ ವರ್ಕ್ ಮಾಡಿದ್ದ ಟೀಂ ಮತ್ತು ಕಾರ್ಯತಂತ್ರವನ್ನು, ವಿಜಯೇಂದ್ರ ಎಂಡ್ ಕೋ, ಇಲ್ಲೂ ಪ್ರಯೋಗಿಸಿತ್ತು. ಇಲ್ಲೂ, ಚುನಾವಣೆ ಗೆದ್ದಿದ್ದು ಗೊತ್ತಿರುವ ವಿಚಾರ.
ಈಗ, ಕಾಂಗ್ರೆಸ್ ಶಾಸಕರಾಗಿದ್ದ ಬಿ.ನಾರಾಯಣ ರಾವ್ ನಿಧನದ ನಂತರ ತೆರವಾಗಿರುವ ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗಬಹುದು. ಈ ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ ಗೆದ್ದದ್ದು ಒಂದೇ ಬಾರಿ. ಮುಂದೆ ಓದಿ...

ಬಿ.ವೈ.ವಿಜಯೇಂದ್ರ ಈಗಲೇ ಒಂದು ರೌಂಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ
ಬಸವಕಲ್ಯಾಣ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಯಾರನ್ನು ಬಿಜೆಪಿ ವರಿಷ್ಠರು ನೇಮಿಸುತ್ತಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಒಂದು ರೌಂಡ್ ಕ್ಷೇತ್ರಕ್ಕೆ ಭೇಟಿ ನೀಡಿ, ಪ್ರಮುಖವಾಗಿ ಮರಾಠ ಸಮುದಾಯದ ಸಭೆ ನಡೆಸಿದ್ದಾರೆ. ಈ ಚರ್ಚೆ ಮುಗಿಯುತ್ತಿದ್ದಂತೆಯೇ ಮರಾಠ ಅಭಿವೃದ್ದಿ ಪ್ರಾಧಿಕಾರ ನೇಮಕದ ಘೋಷಣೆಯನ್ನು ಸಿಎಂ ಯಡಿಯೂರಪ್ಪ ಮಾಡಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ
ಅಂದಿನ ಮೈಸೂರು ಸಂಸ್ಥಾನದ ಚುನಾವಣೆಯಿಂದ ಹಿಡಿದು ಕಳೆದ ಅಸೆಂಬ್ಲಿ ಇಲೆಕ್ಷನ್ ವರೆಗೆ ನಡೆದ ಬೀದರ್ ಜಿಲ್ಲಾ ವ್ಯಾಪ್ತಿಯ ಬಸವಕಲ್ಯಾಣದಲ್ಲಿ ಬಿಜೆಪಿ ಒಮ್ಮೆ ಮಾತ್ರ ಗೆದ್ದಿದ್ದು. ಇಲ್ಲಿ ಏನಿದ್ದರೂ, ಕಾಂಗ್ರೆಸ್ ಮತ್ತು ಅಂದಿನ ಜನತಾ ಪರಿವಾರ ಮತ್ತು ಈಗಿನ ಜೆಡಿಎಸ್ ನಡುವೆ ನೇರ ಫೈಟ್ ನಡೆದದ್ದು. ಈಗ, ಉಪಚುನಾವಣೆ ಇಲ್ಲಿ ಎದುರಾಗಿದೆ. ಇದುವರೆಗಿನ ಚುನಾವಣೆಯಲ್ಲಿ ಗೆದ್ದವರಾರು, ಮುಂದಿನ ಸ್ಲೈಡಿನಲ್ಲಿ

ಕಾಂಗ್ರೆಸ್ ಮತ್ತು ಜನತಾ ಪರಿವಾರದ್ದೇ ಹವಾ
1957 ಮತ್ತು 1962 ಕಾಂಗ್ರೆಸ್ಸಿನ ಅನುಪಮಾ ಬಾಯಿ
1967 ಪಕ್ಷೇತರ ಅಭ್ಯರ್ಥಿ ಎಸ್.ಸಂಗಬಸಪ್ಪ
1972ರಲ್ಲಿ ಕಾಂಗ್ರೆಸ್ಸಿನ ಬಾಪೂರಾವ್ ಆನಂದ್ ರಾವ್
1978ರಲ್ಲಿ ಮತ್ತೆ ಕಾಂಗ್ರೆಸ್ಸಿನ ಬಾಪೂರಾವ್ ಹುಲ್ಸೂರ್ಕರ್
1983ರಲ್ಲಿ ಜನತಾ ಪಾರ್ಟಿಯ ಬಸವರಾಜ್ ಶಂಕರಪ್ಪ ಪಾಟೀಲ್
Recommended Video

ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅಟ್ಟೂರು
1985, 1989, 1994ರಲ್ಲಿ ಸತತವಾಗಿ ಜನತಾ ಪಾರ್ಟಿಯ ಬಸವರಾಜ ಪಾಟೀಲ್ ಅಟ್ಟೂರು
1999ರಲ್ಲಿ ಜೆಡಿಎಸ್ಸಿನ ಎಂ.ಜಿ.ಮುಲೆ
2004ರಲ್ಲಿ ಜೆಡಿಎಸ್ಸಿನ ಮಲ್ಲಿಕಾರ್ಜುನ ಸಿದ್ದರಾಮಪ್ಪ ಖೂಬಾ
2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅಟ್ಟೂರು
2013ರಲ್ಲಿ ಜೆಡಿಎಸ್ಸಿನ ಮಲ್ಲಿಕಾರ್ಜುನ ಸಿದ್ದರಾಮಪ್ಪ ಖೂಬಾ
2018ರಲ್ಲಿ ಕಾಂಗ್ರೆಸ್ಸಿನ ಬಿ.ನಾರಾಯಣ ರಾವ್ (ಚಿತ್ರದಲ್ಲಿ ಬಸವರಾಜ ಪಾಟೀಲ್ ಅಟ್ಟೂರು)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications