ಬಸವ ಕಲ್ಯಾಣ; ಉಪ ಚುನಾವಣೆ ಟಿಕೆಟ್ ಬೇಡ ಎಂದ ಖೇಣಿ!
ಬೀದರ್, ಜನವರಿ 24: ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದಾಗಿ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಉಪ ಚುನಾವಣೆ ಸಿದ್ಧತೆಯನ್ನು ನಡೆಸುತ್ತಿವೆ.
ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್ ಖೇಣಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಬಸವಕಲ್ಯಾಣ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ವರಿಷ್ಠರು ಮನವಿ ಮಾಡಿದರು" ಎಂದು ಹೇಳಿದರು.
"ಸ್ವಕ್ಷೇತ್ರ ಬೀದರ್ ದಕ್ಷಿಣ ಬಿಟ್ಟು ಬೇಡೆ ಕಡೆಯಿಂದ ಸ್ಪರ್ಧಿಸಲಾರೆ ಎಂದು ನಯವಾಗಿ ನಿರಾಕರಿಸಿದ್ದೇನೆ. ಬಿ. ನಾರಾಯಣರಾವ್ ಪತ್ನಿ, ಪುತ್ರನಿಗೆ ಟಿಕೆಟ್ ನೀಡುವುದು ಪಕ್ಷದ ವರಿಷ್ಠರು, ಸ್ಪರ್ಧಿಸಲು ಇಚ್ಛಿಸುವವರಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ" ಎಂದು ಅಶೋಕ್ ಖೇಣಿ ಸ್ಪಷ್ಟಪಡಿಸಿದರು.

"ಬಸವಕಲ್ಯಾಣದಲ್ಲಿ ಅದೇ ಕ್ಷೇತ್ರದವರು ಸ್ಪರ್ಧಿಸಬೇಕು. ಹೊರಗಿನವರು ಸ್ಪರ್ಧಿಸಿದರೆ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು ಆಗುವುದಿಲ್ಲ. ಮತದಾರರ ಚುನಾಯಿತ ಪ್ರತಿನಿಧಿಯನ್ನು ಸುಲಭವಾಗಿ ಸಂಪರ್ಕಿಸಲು ಆಗುವುದಿಲ್ಲ" ಎಂದು ಅಶೋಕ್ ಖೇಣಿ ಹೇಳಿದರು.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಚುನಾವಣಾ ದಿನಾಂಕವನ್ನು ಇನ್ನು ಆಯೋಗ ಘೋಷಣೆ ಮಾಡಿಲ್ಲ. 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ನ ಬಿ.ನಾರಾಯಣರಾವ್ (67) ಸೆಪ್ಟೆಂಬರ್ನಲ್ಲಿ ನಿಧನ ಹೊಂದಿದ್ದು. ಉಪ ಚುನಾವಣೆ ಎದುರಾಗಿದೆ.
2018ರಲ್ಲಿ ಬಸವಕಲ್ಯಾಣದಲ್ಲಿ ಬಿ. ನಾರಾಯಣ ರಾವ್ 61,425 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಪಿ. ಜಿ. ಆರ್. ಸಿಂಧ್ಯಾ 31,414 ಮತ ಪಡೆದಿದ್ದರು.
ಬಿಜೆಪಿ ಉಪ ಚುನಾವಣೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಕ್ಷೇತ್ರದ ನಾಯಕರ ಜೊತೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications