ಬಸವಕಲ್ಯಾಣ ಉಪ ಚುನಾವಣೆ; ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ
ಬೀದರ್, ಫೆಬ್ರವರಿ 25: ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ತಯಾರಿ ಜೋರಾಗಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.
ಬೆಂಗಳೂರಿನಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಬಯಸಿರುವ ಆಕಾಂಕ್ಷಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಬೀದರ್ ಸಂಸದ ಭಗವಂತ ಖೂಬ ಮುಂತಾದವರು ಪಾಲ್ಗೊಂಡಿದ್ದರು.
ಬಿಜೆಪಿಯಿಂದ ಟಿಕೆಟ್ ಪಡೆಯಲು 18ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲರೂ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ಉಸ್ತುವಾರಿಗಳ ಮುಂದೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಚುನಾವಣಾ ಆಯೋಗ ಇನ್ನೂ ಉಪ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ.
ಎಲ್ಲಾ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಹೈಕಮಾಂಡ್ಗೆ ಕಳಿಸಲಾಗುತ್ತದೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಸಹ ಉಪ ಚುನಾವಣೆ ಸಿದ್ಧತೆಯನ್ನು ಕೈಗೊಂಡಿದೆ.

ಡಿಸಿಎಂ ಲಕ್ಷ್ಮಣ ಸವದಿ ಸೂಚನೆ
ಸಭೆಯಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, "ಎಲ್ಲರೂ ಸಹಮತದಿಂದ ವರಿಷ್ಠರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ" ಎಂದು ಹೇಳಿದರು.

ಪ್ರಚಾರದ ರೂಪುರೇಷೆ ಚರ್ಚೆ
ಬಸವಕಲ್ಯಾಣ ಕ್ಷೇತ್ರದಲ್ಲಿ ಉಪ ಚುನಾವಣೆ ಪ್ರಚಾರ ಹೇಗೆ ನಡೆಸಬೇಕು? ಎಂದು ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕಾಂಗ್ರೆಸ್ ಗೆದ್ದಿರುವ ಕ್ಷೇತ್ರ
2018ರಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಪಕ್ಷದ ಅಭ್ಯರ್ಥಿಯಾಗಿದ್ದ ಬಿ. ನಾರಾಯಣ ರಾವ್ 61,425 ಮತ ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153, ಜೆಡಿಎಸ್ನ ಪಿ. ಜಿ. ಆರ್. ಸಿಂಧ್ಯಾ 31,414 ಮತ ಪಡೆದಿದ್ದರು. ನಾರಾಯಣರಾವ್ ನಿಧನದಿಂದ ಉಪ ಚುನಾವಣೆ ಎದುರಾಗಿದೆ.
Recommended Video

ಡಿ. ಕೆ. ಶಿವಕುಮಾರ್ ಭೇಟಿ
ಬಸವಕಲ್ಯಾಣ ಉಪ ಚುನಾವಣೆಗೆ ಕಾಂಗ್ರೆಸ್ ಸಹ ತಯಾರಿ ಮಾಡಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕೆಲವು ದಿನಗಳ ಹಿಂದೆ ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದರು. ಬಿ. ನಾರಾಯಣರಾವ್ ಸಮಾಧಿಗೆ ನಮನ ಸಲ್ಲಿಸಿದ್ದರು. ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದರು. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications