ಬೀದರ್: ಕೋವಿಡ್ ಸೋಂಕಿನಿಂದ ಗೆದ್ದು ನಗೆ ಬೀರಿದ ಶತಾಯುಷಿ
ಬೀದರ್, ಮೇ 25: ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಶತಾಯುಷಿ ಶಿವಲಿಂಗಪ್ಪ ಮಲಶೆಟ್ಟೆಪ್ಪ (101) ಅವರ ಮನೋಬಲವು ಈಗ ಅಕ್ಷರಶಃ ಎಲ್ಲರಿಗೂ ಮಾದರಿಯಾಗಿದೆ.
ಮೇ 15ರಂದು ಕೋವಿಡ್ ಸೋಂಕಿತರಾಗಿ ಭಾಲ್ಕಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಶಿವಲಿಂಗಪ್ಪ, ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಬಿಡುಗಡೆಯಾಗಿದ್ದಾರೆ.
ಭಾಲ್ಕಿ ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಅಬ್ದುಲ್ ಖಾದರ್, ಶಿವಲಿಂಗಪ್ಪರ ಬಿಡುಗಡೆಗೆ ವ್ಯವಸ್ಥೆ ಕಲ್ಪಿಸಿದರು. ಕೋವಿಡ್ ಪಾಸಿಟಿವ್ ಎಂದಾಕ್ಷಣವೇ ಕೆಲವರು ಭಯಭೀತರಾಗುತ್ತಾರೆ. ಆದರೆ, ಇಳಿವಯಸ್ಸಿನ ಶಿವಲಿಂಗಪ್ಪ ಅವರು, ತಮಗೆ ಕೊವಿಡ್ ಬಂದಿದೆ ಎಂದು ಗೊತ್ತಾದರೂ ಅದನ್ನು ಧೈರ್ಯದಿಂದ ಎದುರಿಸಿ, ಸಕಾಲಕ್ಕೆ ಚಿಕಿತ್ಸೆ ಪಡೆದು, ಕೋವಿಡ್ನಿಂದ ಗುಣಮುಖರಾದ ಶತಾಯುಷಿ ವ್ಯಕ್ತಿ ಎಂದೇ ಗಮನ ಸೆಳೆದಿದ್ದಾರೆ.

ವೈದ್ಯರ ಶ್ರಮಕ್ಕೆ ಜಿಲ್ಲಾಧಿಕಾರಿ ಮೆಚ್ಚುಗೆ
ಬೀದರ್ ಜಿಲ್ಲೆಯಲ್ಲಿ ಕಳೆದ ವಾರದಿಂದೀಚೆಗೆ ಬಹಳಷ್ಟು ಕೋವಿಡ್ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಶಿವಲಿಂಗಪ್ಪ ಅವರಂತಹ ಶತಾಯುಷಿಗಳು ಕೋವಿಡ್ದಿಂದ ಗುಣಮುಖರಾಗಿದ್ದು, ಕೋವಿಡ್ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವಂತಹ ಪ್ರಕರಣವಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೇಳಿದ್ದಾರೆ.
Recommended Video
ಸಾರ್ವಜನಿಕರು ಕೊವಿಡ್ ಲಕ್ಷಣಗಳು ಕಂಡು ಬಂದಕೂಡಲೇ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆಗ ವೈದ್ಯರಿಗೆ ಬೇಗನೇ ಚಿಕಿತ್ಸೆ ಆರಂಭಿಸಲು ಅನುಕೂಲವಾಗಲಿದೆ. ಬೇಗನೇ ಚಿಕಿತ್ಸೆ ಪಡೆದುಕೊಂಡರೆ ಎಂತದ್ದೇ ಕಾಯಿಲೆ ಇರಲಿ ಗುಣಮುಖರಾಗಲು ಸಾಧ್ಯವಿದೆ ಎಂಬುದಕ್ಕೆ ಭಾಲ್ಕಿ ತಾಲೂಕಿನ ಶಿವಲಿಂಗಪ್ಪ ಜೀವಂತ ಉದಾಹರಣೆಯಾಗಿದ್ದಾರೆ ಎಂದು ಇದೆ ವೇಳೆ ಭಾಲ್ಕಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತಾಲೂಕು ಆರೋಗ್ಯಾಧಿಕಾರಿ ಡಾ.ಗ್ಯಾನೇಶ್ವರ ನೀರಗುಡೆ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications