ಬೀದರ್; ಡಿಸಿ ಸ್ಪಂದನೆ, ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ
ಬೀದರ್, ಏಪ್ರಿಲ್ 20; ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಸ್ಪಂದನೆಯಿಂದಾಗಿ ಬೀದರ್ ನಗರದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಚಿಕಿತ್ಸೆಗಾಗಿ ಧಾರವಾಡದ ಮಾನಸಿಕ ರೋಗಿಗಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಪ್ರಿಲ್ 17ರಂದು ಬಸವಕಲ್ಯಾಣ ಉಪ ಚುನಾವಣೆ ದಿನ ಜಿಲ್ಲಾಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಚಿದ್ರಿ ರಸ್ತೆ ಮುಖಾಂತರ ತೆರಳುವಾಗ ನ್ಯೂ ಆದರ್ಶ ಕಾಲೋನಿಯ ಸುಮಾರು 35 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆ ಮಾಧುರಿ ಎನ್ನುವವರು ರಸ್ತೆಯ ಬದಿಯಲ್ಲಿ ಓಡಾಡುತ್ತಿದ್ದರು.
ಇದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಮಹಿಳೆಯ ಬಗ್ಗೆ ಮಾಹಿತಿ ನೀಡಿದ್ದರು. ತುರ್ತಾಗಿ ಮಹಿಳೆಗೆ ಸಹಾಯ ಮಾಡಿ, ವರದಿ ನೀಡುವಂತೆ ಸೂಚನೆಯನ್ನು ನೀಡಿದ್ದರು.

ಮಹಿಳಾ ಶಕ್ತಿ ಕೇಂದ್ರದ ಕಲ್ಯಾಣ ಅಧಿಕಾರಿ ಶಾರದಾ, ಜಿಲ್ಲಾ ಸಂಯೋಜಕರಾದ ಗೀತಾಂಜಲಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಗೌರಿಶಂಕರ ಪರತಾಪೂರೆ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದರು.
ಮಹಿಳೆಗೆ ಬೀದರ ನಗರದ ಬಸವಕಾರ್ಯ ಸಮಿತಿ ಸ್ವಧಾರ ಗೃಹದಲ್ಲಿ ಆಶ್ರಯ ನೀಡಿ, ಸ್ನಾನ ಮಾಡಿಸಿ, ಹೊಸ ಬಟ್ಟೆ ಕೊಡಿಸಿ, ಊಟೋಪಚಾರ ಮಾಡಿಸಿದ್ದರು. ನಂತರ ಜಿಲ್ಲಾ ಬ್ರಿಮ್ಸ್ ಆಸ್ಪತ್ರೆಯ ಮನೋರೋಗ ವಿಭಾಗಕ್ಕೆ ಕರೆದೊಯ್ದು ಅಲ್ಲಿನ ಮನೋವೈದ್ಯಾಧಿಕಾರಿಗಳ ಹತ್ತಿರ ವೈದ್ಯಕೀಯ ತಪಾಸಣೆ ಮಾಡಿಸಿದ್ದರು.
ತಪಾಸಣೆ ಬಳಿಕ ಮಹಿಳೆಯು ಸ್ಕಿಜೋಫ್ರೇನಿಯ ಕಾಯಿಲೆಗೆ ಒಳಗಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ್ದು, ಮಹಿಳೆಗೆ ದೀರ್ಘಾವಧಿಯ ಮಾನಸಿಕ ಆರೈಕೆ ಬೇಕಾಗಿದ್ದು, ಧಾರವಾಡದ ಆಸ್ಪತ್ರೆಗೆ ದಾಖಲಿಸುವಂತೆ ವರದಿ ನೀಡಿದ್ದರು.
ವೈದ್ಯಾಧಿಕಾರಿಗಳ ವರದಿಯನ್ವಯ ಮಹಿಳೆಯನ್ನು ಧಾರವಾಡಕ್ಕೆ ಕಳಹಿಸಿಕೊಡಲಾಗಿದೆ. ಮಹಿಳೆಯ ಕೋವಿಡ್ ಪರೀಕ್ಷೆ ಮಾಡಿಸಲಾಗಿದ್ದು, ವರದಿ ನೆಗೆಟೀವ್ ವರದಿ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications