ಬೀದರ್ ಜಿಲ್ಲೆಯಲ್ಲಿ ಒಂದೇ ದಿನ ಎರಡು ಬಾರಿ ಭೂಕಂಪ: ಬೆಚ್ಚಿಬಿದ್ದ ಜನ
ಬೀದರ್, ನವೆಂಬರ್ 06 : ಬೀದರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಲಘು ಭೂಕಂಪನ ಸಂಭವಿಸಿದೆ. ಜಿಲ್ಲೆಯಲ್ಲಿ 1.9 ಮತ್ತು 2.1 ತೀವ್ರತೆಯ ಎರಡು ಭೂಕಂಪಗಳು ದಾಖಲಾಗಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಭೂಕಂಪನ ವಿಭಾಗ ತಿಳಿಸಿದೆ.
ಭೂಕಂಪ ಸಂಭವಿಸಿದ ಕೇಂದ್ರದಿಂದ 25 ಕಿಲೋಮೀಟರ್ ವ್ಯಾಪ್ತಿಯಲ್ಲಿ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ. ಬೀದರ್ ಜಿಲ್ಲೆಯ ಮದರಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡನಕೇರಾ ಗ್ರಾಮದಲ್ಲಿ ಮೊದಲಿಗೆ ಕಂಪನದ ಅನುಭವವಾಗಿದ್ದು, 1.9 ತೀವ್ರತೆಯ ಭೂಕಂಪನ ದಾಖಲಾಗಿದೆ. ಬಳಿಕ ಎರಡು ಗಂಟೆಗಳ ನಂತರ, ಅದೇ ಸ್ಥಳದಲ್ಲಿ 2.1 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿತ ಪ್ರಕೃತಿ ವಿಕೋಪ ಕೇಂದ್ರ ಮಾಹಿತಿ ನೀಡಿದ್ದು, 'ಬೀದರ್ನಲ್ಲಿ ಲಘು ಭೂ ಕಂಪನ ಉಂಟಾಗಿದೆ. ಅಷ್ಟೇನೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಈ ರೀತಿಯ ಘಟನೆಗಳು ಅಪರೂಪ. ತೀವ್ರತರವಾದಂತಹ ಭೂ ಕಂಪನ ಉಂಟಾಗಿಲ್ಲ. ಈ ಭೂಕಂಪಗಳು ಅತ್ಯಂತ ಕಡಿಮೆ ತೀವ್ರತೆಯನ್ನು ಹೊಂದಿವೆ. ಜನರು ಹೆದರುವ ಅವಶ್ಯಕತೆ ಇಲ್ಲ' ಎಂದು ತಿಳಿಸಿದೆ.
'ಈ ಬಗ್ಗೆ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ತೀವ್ರತೆಯು ತುಂಬಾ ಕಡಿಮೆ ಇದೆ. ಭೂಕಂಪದ ಕೇಂದ್ರದಿಂದ 20-25 ಕಿಮೀ ರೇಡಿಯಲ್ ದೂರದವರೆಗೆ ಕಂಪನ ಅನುಭವ ಕಂಡುಬಂದಿದೆ. ಈ ರೀತಿಯ ಭೂಕಂಪಗಳು ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ' ಎಂದು ಕರ್ನಾಟಕ ರಾಜ್ಯ ನೈಸರ್ಗಿತ ಪ್ರಕೃತಿ ವಿಕೋಪ ಕೇಂದ್ರದ ಅಧಿಕಾರಿಗಳು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ನೇಪಾಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, 128ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯಲ್ಲಿ ಈ ಭೂಕಂಪನ ಸಂಭವಿಸಿತ್ತು. ಇದರಿಂದ ಕಂಪನದ ಕೇಂದ್ರ ಸ್ಥಾನದಿಂದ ಅಂದಾಜು 500 ಕಿ.ಮೀ. ದೂರವಿರುವ ಭಾರತದ ರಾಜಧಾನಿ ದೆಹಲಿಯಲ್ಲೂ ಭೂಕಂಪನದ ಅನುಭವಗಳಾಗಿತ್ತು. ಇನ್ನು ಭಾರತದಲ್ಲಿ ಇತ್ತೀಚಿಗೆ ಭೂಕಂಪದ ಘಟನೆಗಳು ಹೆಚ್ಚುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications