ಕಲಬುರಗಿ ಮೂಲಕ ಬೀದರ್-ಯಶವಂತಪುರ ರೈಲು ಸಂಚಾರ
ಬೀದರ್, ಮಾರ್ಚ್ 03 : ಬೀದರ್ ಜಿಲ್ಲೆಯ ಜನರ ಬಹು ದಿನದ ಬೇಡಿಕೆ ಈಡೇರಿದೆ. ಬೀದರ್ ಮತ್ತು ಯಶವಂತಪುರ ನಡುವಿನ ರೈಲು ಕಲಬುರಗಿ ಮೂಲಕ ಸಂಚಾರ ನಡೆಸಲು ಒಪ್ಪಿಗೆ ನೀಡಲಾಗಿದೆ.
ಬೀದರ್ ಕ್ಷೇತ್ರದ ಬಿಜೆಪಿ ಸಂಸದ ಭಗವಂತ ಖೂಬಾ ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭೇಟಿ ಮಾಡಿ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಯಶವಂತಪುರ-ವಾಸ್ಕೋ ರೈಲು ಸಂಚಾರಕ್ಕೆ ಮುಹೂರ್ತ ನಿಗದಿ
ಬೀದರ್ ಮತ್ತು ಬೆಂಗಳೂರಿನ ಯಶವಂತಪುರ ನಡುವಿನ ರೈಲು ಕಲಬುರಗಿ ಮೂಲಕ ಸಂಚಾರ ನಡೆಸಲು ನೈಋತ್ಯ ರೈಲ್ವೆ ಒಪ್ಪಿಗೆ ಕೊಟ್ಟಿದೆ. ಈ ಮೊದಲು ತೆಲಂಗಾಣದ ಸಿಕಂದರಾಬಾದ್ ಮಾರ್ಗವಾಗಿ ಬೀದರ್-ಯಶವಂತಪುರ ರೈಲು ಸಂಚಾರ ನಡೆಸುತ್ತಿತ್ತು.
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ಮೊದಲ ಹೆಜ್ಜೆ
ಬೀದರ್-ಯಶವಂತಪುರ ರೈಲು ಕಲಬುರಗಿ ಮೂಲಕ ಸಂಚಾರ ನಡೆಸಿದರೆ ಸಮಯ ಉಳಿತಾಯವಾಗಲಿದೆ. ಆದ್ದರಿಂದ, ಬೀದರ್ ಜಿಲ್ಲೆಯ ಜನರು ಕಲಬುರಗಿ ಮೂಲಕ ರೈಲು ಸಂಚಾರಕ್ಕೆ ಬೇಡಿಕೆ ಇಟ್ಟಿದ್ದರು.
ಬೀದರ್-ಯಶವಂತಪುರ ರೈಲು ಕಲಬುರಗಿ ಮೂಲಕ ಸಂಚಾರ ನಡೆಸಲು ಒಪ್ಪಿಗೆ ಸಿಕ್ಕಿದೆ. ಆದರೆ, ದಿನಾಂಕ ಮಾತ್ರ ನಿಗದಿಯಾಗಿಲ್ಲ. ಶೀಘ್ರವೇ ಈ ಕುರಿತು ಅಧಿಕೃತ ಆದೇಶ ಮತ್ತು ರೈಲು ಸಂಚಾರದ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.
ಭಗವಂತ ಖೂಬಾ ಮಾಡಿರುವ ಟ್ವೀಟ್
Met to Hon'ble Railway Minster for State Shri. @SureshAngadi_ ji & thanked him for sanctioning the train diversion of Bidar- Yesvantpur via kalburgi. This train service will start shortly, & also I thanks to our beloved PM Shri. @narendramodi ji & our RM Shri.@PiyushGoyal ji pic.twitter.com/59ggDKsktz
— Bhagwant Khuba (@bhagwantkhuba) March 2, 2020