ಬೀದರ್ನಲ್ಲಿ 11 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್
ಬೀದರ್, ಏಪ್ರಿಲ್ 2: ಬೀದರ್ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Recommended Video
ಬೀದರ್ನಿಂದ ದೆಹಲಿಗೆ ತೆರಳಿದ್ದ 22 ಜನರ ಪೈಕಿ 11 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆ ಜಿಲ್ಲೆಯ 19 ಜನರನ್ನು ಜಿಲ್ಲಾಡಳಿತವು ಕ್ವಾರಂಟೈನ್ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಲು ಕ್ರಮಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಸಾಮೂಹಿಕ ಪ್ರಾರ್ಥನೆ ಯಲ್ಲಿ ಬಾಗಲಕೋಟೆ ಜಿಲ್ಲೆ ಮೂಲದ 19 ಜನ ಭಾಗವಹಿಸಿದ್ದರ ಬಗ್ಗೆ ಈವರೆಗೆ ವಿವಿಧ ಮೂಲಗಳಿಂದ ಪತ್ತೆ ಹಚ್ಚಲಾಗಿದೆ.300 ಜನ ಭಾಗವಹಿಸಿದ್ದರು ಎಂಬ ಆತಂಕಕಾರಿ ಸಂಗತಿ ಬಹಿರಂಗಗೊಂಡಿದೆ.
ದೆಹಲಿ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ್ದರ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಸದ್ಯ ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತಿದೆ. ಇದರಲ್ಲಿ 12 ಜನರ ಪರೀಕ್ಷೆ ವರದಿ ನೆಗಟಿವ್ ಬಂದಿದೆ ಎಂದು ತಿಳಿಸಿದ್ದಾರೆ.












Click it and Unblock the Notifications