ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ
ಬೀದರ್, ಜುಲೈ 3: ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ಕಬ್ಬಿನ ಬಾಕಿ ಪಾವತಿಸದೆ ಇರುವುದು ನೋಟಿಸ್ ಜಾರಿ ಮಾಡಿರುವ ಕಾರಣವಾಗಿದೆ.
Recommended Video
15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada
ಕಳೆದ 2019-20 ಸಾಲಿಗೆ ಸಕ್ಕರೆ ಕಾರ್ಖಾನೆಗಳಿಗೆ ರೈತರು ತಾವು ಬೆಳೆದ ಕಬ್ಬುಗಳನ್ನು ಪೂರೈಸಿದ್ದರು. ಆದರೆ, ರೈತರಿಗೆ ಕಬ್ಬಿನ ಬಾಕಿ ಹಣ ನೀಡಿರಲಿಲ್ಲ. ಹಣ ಪಾವತಿಸದ ಹಿನ್ನಲೆ ಜಿಲ್ಲೆಯ ಎರಡೂ ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಿದೆ.
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಇಮಾಮಪೂರ್ 484.75 ಲಕ್ಷ ಬಾಕಿ ಇದೆ. ಬೀದರ್ ಕಿಸಾನ ಸಹಕಾರ ಸಕ್ಕರೆ ಕಾರ್ಖಾನೆ ಮೊಗದಾಳ 746.75 ಲಕ್ಷ ಬಾಕಿ ಉಳಿಸಿಕೊಂಡಿದೆ. ಎರಡು ಸಕ್ಕರೆ ಕಾರ್ಖಾನೆಗಳಿಗೆ ಹಲವು ಬಾರಿ ಸಭೆಯಲ್ಲಿ ಸೂಚಿಸಿದ್ದರು ಬಾಕಿ ಪಾವತಿಸ ಹಿನ್ನಲೆ ನೋಟಿಸ್ ಜಾರಿಯಾಗಿದೆ.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ 15 ದಿವಸಗಳಲ್ಲಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ. 1964 ರ ಕಲಂ 190ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ












Click it and Unblock the Notifications