ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆ
ಬೀದರ್, ಮಾರ್ಚ್ 30; ಮಾಜಿ ಸಚಿವ, ಜೆಡಿಎಸ್ ನಾಯಕ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆಗೊಂಡರು. 2018ರ ವಿಧಾನಸಭೆ ಚುನಾವಣೆ ಬಳಿಕ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.
ಮಂಗಳವಾರ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಚುನಾವಣೆ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಉಪಸ್ಥಿತರಿದ್ದರು.

ಬಸವ ಕಲ್ಯಾಣದಲ್ಲಿ ನಡೆದ ಈ ಪ್ರಚಾರ ಸಭೆಯಲ್ಲಿಯೇ ಮಾಜಿ ಸಚಿವ, ಜೆಡಿಎಸ್ ನಾಯಕ ಪಿಜಿಆರ್ ಸಿಂಧ್ಯಾ ಅವರು ಕಾಂಗ್ರೆಸ್ಸಿಗೆ ಸೇರ್ಪಡೆ ಆದರು. 2018ರ ಚುನಾವಣೆಯಲ್ಲಿ ಸಿಂಧ್ಯಾ ಅವರು ಬಸವಕಲ್ಯಾಣದಿಂದಲೇ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಬಸವ ಕಲ್ಯಾಣ ಉಪ ಚುನಾವಣೆ ಸಂದರ್ಭದಲ್ಲಿಯೇ ಪಿಜಿಆರ್ ಸಿಂಧ್ಯಾ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಏಪ್ರಿಲ್ 17ರಂದು ನಡೆಯುವ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಯಸ್ರಬ್ ಅಲಿ ಖಾದ್ರಿ ಅಭ್ಯರ್ಥಿಯಾಗಿದ್ದಾರೆ.
2018ರ ಚುನಾವಣೆಯಲ್ಲಿ ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಿಜಿಆರ್ ಸಿಂಧ್ಯಾ 31,414 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಚುನಾವಣೆ ಬಳಿಕ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.
ಕೆಲವು ದಿನಗಳ ಹಿಂದೆ ಮಾತನಾಡಿದ್ದ ಅವರು, "ರಾಜಕಾರಣದಿಂದ ದೂರವಿದ್ದೇನೆ. ಜನರ ಅಪೇಕ್ಷೆಯಂತೆ ರಾಜಕೀಯದಲ್ಲಿ ಸಕ್ರಿಯನಾಗುತ್ತೇನೆ. 2021ರಿಂದ ರಾಜಕೀಯದಲ್ಲಿ ಸಕ್ರಿಯಗೊಳ್ಳುತ್ತೇನೆ" ಎಂದುದ ಹೇಳಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications