ಗ್ರಾಮ ವಾಸ್ತವ್ಯ ಅಧಿಕಾರಿಗಳಿಗೆ ಒಂದು ಹೊಸ ಅನುಭವ, ಪಾಠ: ಕುಮಾರಸ್ವಾಮಿ
ಬೀದರ್, ಜೂನ್ 28: ಗ್ರಾಮ ವಾಸ್ತವ್ಯ ಎನ್ನುವುದು ಅಧಿಕಾರಿಗಳಿಗೆ ಹೊಸ ಅನುಭವ ನೀಡುವುದಲ್ಲದೆ ಒಂದು ಪಾಠವಾಗಿದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದರು.
ಉಜಳಂಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದು ಅವರು ತಿಳಿಸಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದರು.ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.

ಯಾದಗಿರಿ, ರಾಯಚೂರ ಹಾಗೂ ಬೀದರ ಜಿಲ್ಲೆಗಳಲ್ಲಿ ಮಾಡಿದ ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ. ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ತಿಳಿಸಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿಸಿಎಂ ಕಚೇರಿಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಾಯಿ ಹೃದಯದಿಂದ ಕೆಲಸ ಮಾಡಿರುವುದು ಕೂಡ ನಮ್ಮ ಬಲವಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಎಂ ಕಚೇರಿಯಿಂದ ನೇರವಾಗಿ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು.
2006ರಲ್ಲಿ ಇಷ್ಟು ದೊಡ್ಡಮಟ್ಟದ ಗ್ರಾಮವಾಸ್ತವ್ಯ ನಡೆದಿರಲಿಲ್ಲ. ಈ ಹಿಂದೆ ನಾವು ಹಳ್ಳಿಗೆ ಹೋಗೋದೇ ರಾತ್ರಿ 1 ಗಂಟೆಯಾಗುತ್ತಿತ್ತು. ಬರೀ ಅಧಿಕಾರಿಗಳೇ ಅರ್ಜಿ ಪಡೆಯುತ್ತಿದ್ದರು. ಈ ಹಿಂದೆ ನಡೆದ ಗ್ರಾಮವಾಸ್ತವ್ಯ ವೇಳೆ ಪರಿಹಾರ ಪಡೆದುಕೊಂಡವರು ಅದನ್ನು ಈಗಲೂ ನೆನಪಿಸುವುದು ಈಗ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದ ವೇಳೆ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಸಚಿವರಾದ ಬಂಡೆಪ್ಪ ಕಾಶೆಂಪೂರ, ರಾಜಶೇಖರ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್ ಇದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications