ಗ್ರಾಮ ವಾಸ್ತವ್ಯ ಅಧಿಕಾರಿಗಳಿಗೆ ಒಂದು ಹೊಸ ಅನುಭವ, ಪಾಠ: ಕುಮಾರಸ್ವಾಮಿ
ಬೀದರ್, ಜೂನ್ 28: ಗ್ರಾಮ ವಾಸ್ತವ್ಯ ಎನ್ನುವುದು ಅಧಿಕಾರಿಗಳಿಗೆ ಹೊಸ ಅನುಭವ ನೀಡುವುದಲ್ಲದೆ ಒಂದು ಪಾಠವಾಗಿದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದರು.
ಉಜಳಂಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದು ಅವರು ತಿಳಿಸಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದರು.ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.

ಯಾದಗಿರಿ, ರಾಯಚೂರ ಹಾಗೂ ಬೀದರ ಜಿಲ್ಲೆಗಳಲ್ಲಿ ಮಾಡಿದ ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ. ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ತಿಳಿಸಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿಸಿಎಂ ಕಚೇರಿಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಾಯಿ ಹೃದಯದಿಂದ ಕೆಲಸ ಮಾಡಿರುವುದು ಕೂಡ ನಮ್ಮ ಬಲವಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಎಂ ಕಚೇರಿಯಿಂದ ನೇರವಾಗಿ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು.
2006ರಲ್ಲಿ ಇಷ್ಟು ದೊಡ್ಡಮಟ್ಟದ ಗ್ರಾಮವಾಸ್ತವ್ಯ ನಡೆದಿರಲಿಲ್ಲ. ಈ ಹಿಂದೆ ನಾವು ಹಳ್ಳಿಗೆ ಹೋಗೋದೇ ರಾತ್ರಿ 1 ಗಂಟೆಯಾಗುತ್ತಿತ್ತು. ಬರೀ ಅಧಿಕಾರಿಗಳೇ ಅರ್ಜಿ ಪಡೆಯುತ್ತಿದ್ದರು. ಈ ಹಿಂದೆ ನಡೆದ ಗ್ರಾಮವಾಸ್ತವ್ಯ ವೇಳೆ ಪರಿಹಾರ ಪಡೆದುಕೊಂಡವರು ಅದನ್ನು ಈಗಲೂ ನೆನಪಿಸುವುದು ಈಗ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದ ವೇಳೆ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಸಚಿವರಾದ ಬಂಡೆಪ್ಪ ಕಾಶೆಂಪೂರ, ರಾಜಶೇಖರ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್ ಇದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications