ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಣ್ಣನ ಐಕ್ಯಸ್ಥಳದಲ್ಲಿನ ಇಷ್ಟಲಿಂಗದಲ್ಲಿ ಬಿರುಕು

|
Google Oneindia Kannada News

ಬೀದರ್, ಫೆಬ್ರವರಿ 19 : ಕೂಡಲ ಸಂಗಮದಲ್ಲಿರುವ ಬಸವಣ್ಣನ ಐಕ್ಯ ಮಂಟಪದ ಐಕ್ಯಸ್ಥಳದಲ್ಲಿನ ಲಿಂಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಲಿಂಗದ ಸುತ್ತಲೂ ಗಾಜಿನ ಗೋಡೆಯನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ.

ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದಲ್ಲಿ ಬಸವಣ್ಣನ ಐಕ್ಯ ಮಂಟಪವಿದೆ. ಈ ಸ್ಥಳದಲ್ಲಿರುವ ಲಿಂಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಐಕ್ಯಸ್ಥಳಕ್ಕೆ ಆಗಮಿಸುವ ಜನರು ನಾಣ್ಯಗಳನ್ನು ಎಸೆಯುತ್ತಾರೆ. ಆದ್ದರಿಂದ, ಬಿರುಕು ಉಂಟಾಗಿರಬಹುದು ಎಂದು ಶಂಕಿಸಲಾಗಿದೆ.

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?

ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಕಾಣಿಕೆಯನ್ನು ಹುಂಡಿಯಲ್ಲಿ ಹಾಕಿ, ನಾಣ್ಯವನ್ನು ಎಸೆಯಬಾರದು ಎಂದು ಫಲಕವನ್ನು ಅಳವಡಿಸಿದೆ. ಆದರೆ, ಕೆಲವು ಭಕ್ತರು ನಾಣ್ಯವನ್ನು ಲಿಂಗದ ಮೇಲೆ ಎಸೆಯುವುದು ಇನ್ನೂ ಕಡಿಮೆಯಾಗಿಲ್ಲ.

Ishta Linga at Kudala Sangama developed cracks

'ಐಕ್ಯ ಸ್ಥಳದಲ್ಲಿರುವ ಲಿಂಗವನ್ನು ರಕ್ಷಣೆ ಮಾಡುವ ಕೆಲವನ್ನು ಮಾಡುತ್ತೇವೆ. ಲಿಂಗದ ಸುತ್ತಲೂ ಗಾಜಿನ ಗೋಡೆಯನ್ನು ನಿರ್ಮಿಸಿ ನಾಣ್ಯ ಎಸೆಯದಂತೆ ತಡೆಯಲು ಚಿಂತನೆ ನಡೆಸಲಾಗಿದೆ' ಎಂದು ತಹಶೀಲ್ದಾರ್ ಆರ್.ಎಸ್.ಹಿರೇಮಠ ಹೇಳಿದ್ದಾರೆ.

ಸುಪ್ರೀಂ ಅಂಗಳಕ್ಕೆ 'ಪ್ರತ್ಯೇಕ ಲಿಂಗಾಯತ ಧರ್ಮ' ಹೋರಾಟಸುಪ್ರೀಂ ಅಂಗಳಕ್ಕೆ 'ಪ್ರತ್ಯೇಕ ಲಿಂಗಾಯತ ಧರ್ಮ' ಹೋರಾಟ

'ಮುಗ್ಧ ಭಕ್ತರ ಧಾರ್ಮಿಕ ಆಚರಣೆಯಿಂದಾಗಿ ಮೂಲ ಐಕ್ಯಮಂಟಪ ತನ್ನ ಸ್ವರೂಪ ಕಳೆದುಕೊಳ್ಳುತ್ತಿದೆ. ಧಕ್ಕೆ ಆಗದಂತೆ ತಡೆಯುವ ಕೆಲಸ ತುರ್ತಾಗಿ ಆಗಬೇಕು' ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

English summary
The Ishta Linga at Aikya Mantap at the Kudala Sangama has developed cracks. According local people the cracks have occurred as devotees throw coins at the Ishta Linga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X