''ಕಾಂಗ್ರೆಸ್ ಮತ್ತು ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಗಿರಾಕಿಗಳು''
ಬೀದರ್, ಏಪ್ರಿಲ್ 4: "ಕರ್ನಾಟಕ ರಾಜ್ಯಕ್ಕೆ ಒಳ್ಳೆಯದಾಗಬೇಕು ಅಂದರೆ ಎರಡು ರಾಷ್ಟ್ರೀಯ ಪಕ್ಷಗಳು ಮನೆಗೆ ಹೋಗಬೇಕು. ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕು" ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ರವರು ಹೇಳಿದ್ದಾರೆ.
ಬಸವಕಲ್ಯಾಣ ಕ್ಷೇತ್ರದ ಬಸವಕಲ್ಯಾಣ, ಹತ್ಯಾಳ, ಹಾರಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ ಕಾಶೆಂಪೂರ್ ಮಾತನಾಡುತ್ತಿದ್ದರು.
"ರಾಜ್ಯದಿಂದ ಆಯ್ಕೆಯಾದ ಅಷ್ಟು ಬಿಜೆಪಿ ಎಂಪಿಗಳು ರಾಜ್ಯದ ಪರವಾಗಿ ರಾಜ್ಯದ ಜನತೆಯ ಪರವಾಗಿ ಕೇಂದ್ರದಲ್ಲಿ ಯಾವತ್ತಾದರೂ ಧ್ವನಿ ಎತ್ತಿದ್ದಾರಾ" ಎಂದು ಪ್ರಶ್ನಿಸಿರುವ ಕಾಶೆಂಪೂರ್, ಬಸವಕಲ್ಯಾಣದಲ್ಲಿ ಸಾಹೇಬ್, ಬೀದರ್ ನಲ್ಲಿ ಬಂಡೆಪ್ಪ ಕಾಶೆಂಪೂರ್, ಬೆಂಗಳೂರಿನಲ್ಲಿ ಕುಮಾರಣ್ಣ ಯಾವಾಗಲೂ ನಿಮ್ಮ ಕೆಲಸ ಮಾಡಲು ತಯಾರಿದ್ದೇವೆ" ಎನ್ನುವ ಭರವಸೆಯನ್ನು ನೀಡಿದರು.

"ಕಾಂಗ್ರೆಸ್ನವರು ಬಿಜೆಪಿಯವರು ಮ್ಯಾಚ್ ಫಿಕ್ಸಿಂಗ್ ಗಿರಾಕಿಗಳು. ಕಾಂಗ್ರೆಸ್ನವರು ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಆದರೆ, ಯಾವತ್ತಾದರೂ ರಾಜ್ಯ ಸರ್ಕಾರದ ಒಂದೇ ಒಂದು ಹಗರಣವನ್ನು ಬಯಲಿಗೆಳೆದಿದ್ದಾರಾ. ಅವರೆಲ್ಲಾ ಬರೀ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತಾರೆ" ಎಂದು ಕಾಶೆಂಪೂರ್ ಟೀಕಿಸಿದರು .
ಬಸವಣ್ಣನ ನಾಡಾದ ಬಸವಕಲ್ಯಾಣದಲ್ಲಿ ಜಾತ್ಯತೀತವಾಗಿ ಎಲ್ಲರೂ ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳಕ್ಕೆ ಮತ ನೀಡಬೇಕೆಂದು ಶಾಸಕ ಬಂಡೆಪ್ಪ ಕಾಶೆಂಪೂರ್ರವರು ಮನವಿ ಮಾಡಿದರು.
ಇದೇ ವೇಳೆ ತಮ್ಮ ಪಕ್ಷ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಂಡ ಅವರು, "ನಮ್ಮದು ರೈತರ ಪಾರ್ಟಿ, ನಾನು ಸಹಕಾರ ಸಚಿವನಾಗಿದ್ದಾಗ ರಾಜ್ಯದ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಕೃಷಿ ಸಚಿವನಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೆ. ಮೋದಿಯವರು ರೈತರಿಗೆ ಎರಡು ಸಾವಿರ ರೂಪಾಯಿ ಕೊಡಲು ಹರಸಾಹಸ ಪಡುತ್ತಿದ್ದಾರೆ" ಎಂದು ಕಾಶೆಂಪೂರ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications