ಬೀದರ್ : ಬಾನಂಗಳದಲ್ಲಿ ಚಿತ್ತಾರ ಮೂಡಿಸಿದ ಲೋಹದ ಹಕ್ಕಿಗಳು
ಬೀದರ್, ಜುಲೈ 25 : ಬೀದರ್ ವಾಯುನೆಯಲ್ಲಿ ನಡೆದ ವೈಮಾನಿಕ ಪ್ರದರ್ಶನ ಜನರ ಕಣ್ಮನ ಸೆಳೆಯಿತು.
ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳು ಚಿತ್ತಾರವನ್ನು ಮೂಡಿಸಿದವು.
ಜುಲೈ 24ರಂದು ನಡೆದ ವೈಮಾನಿಕ ಪ್ರದರ್ಶನ ಮೈನವಿರೇಳಿಸುವಂತಿತ್ತು. ವೈಮಾನಿಕ ಪ್ರದರ್ಶನಕ್ಕೆ ಶಾಲಾ ವಿದ್ಯಾರ್ಥಿಗಳು, ಪಾಲಕರು, ವಾಯುನೆಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಕ್ಷಿಯಾದರು.

ಬಾನಂಗಳದಲ್ಲಿ ವಿಮಾನಗಳ ಹಾರಾಟ ವೀಕ್ಷಿಸಿದ ವಿದ್ಯಾರ್ಥಿಗಳು ಜಯಘೋಷಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು. ವಿಮಾನಗಳ ಹಾರಾಟವನ್ನು ಕಣ್ಣು ಮಿಟುಕಿಸದೇ ನೋಡುತ್ತಾ ಜೈ ಹಿಂದ್, ವಂದೇ ಮಾತರಂ ಎನ್ನುವ ಘೋಷಣೆಗಳನ್ನು ಕೂಗಿದರು.
ಏರ್ ಫೋರ್ಸ್ ಶಾಲೆ, ಕೇಂದ್ರೀಯ ವಿದ್ಯಾಲಯ, ಸಂಸ್ಕಾರ ಸ್ಕೂಲ್, ಗುರುನಾನಕ್, ಗ್ಲೋಬಲ್ ಸೈನಿಕ್ ಪಬ್ಲಿಕ್ ಶಾಲೆಗಳ ಒಟ್ಟು 600 ವಿದ್ಯಾರ್ಥಿಗಳು ವೈಮಾನಿಕ ಪ್ರದರ್ಶನವನ್ನು ಕಣ್ತುಂಬಿಕೊಂಡರು.

ದೊಡ್ಡ ಪರದೆಯಲ್ಲಿ ಕಾರ್ಗಿಲ್ ಯುದ್ದದ ಸನ್ನಿವೇಶಗಳನ್ನು ಬಿತ್ತರಿಸಲಾಗುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಗಿಲ್ ವಿಜಯೋತ್ಸವ : ಕಾರ್ಗಿಲ್ ಯುದ್ಧ 1999ರ ಮೇನಲ್ಲಿ ಆರಂಭವಾಗಿ ಎರಡು ತಿಂಗಳ ಕಾಲ ನಡೆಯಿತು. ಲೇಹ್ ಹೆದ್ದಾರಿ ತನಕ ಬಂದಿದ್ದ ಪಾಕಿಸ್ತಾನದ ಸೇನೆಯನ್ನು ಭಾರತೀಯ ಯೋಧರು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಯುದ್ಧದಲ್ಲಿ 527 ಭಾರತೀಯ ಯೋಧರ ಬಲಿದಾನವಾಯಿತು.
ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಭಾರತೀಯ ಸೇನೆ ಜುಲೈ 26ರಂದು 'ಆಪರೇಷನ್ ವಿಜಯ್' ಯಶಸ್ವಿ ಎಂದು ಘೋಷಣೆ ಮಾಡಿತು. ಅಂದಿನಿಂದ ಕಾರ್ಗಿಲ್ ವಿಜಯೋತ್ಸವ ಆಚರನೆ ಮಾಡಲಾಗುತ್ತಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications