ಉಪ ಚುನಾವಣೆ: ದಳಪತಿಗೆ ಒಲಿಯದ 'ಕಲ್ಯಾಣ' ನಾಡಿನ ಮತದಾರ
ಬೀದರ್, ಮೇ 2: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಕೈ ಹಾಕಲು ಅಲ್ಪಸಂಖ್ಯಾತ ಅಭ್ಯರ್ಥಿಗೆ ಮಣೆ ಹಾಕುವ ಮೂಲಕ ತಂತ್ರಗಾರಿಕೆ ರೂಪಿಸಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ತಂತ್ರ ತೀವ್ರ ಹಿನ್ನಡೆ ಅನುಭವಿಸಿದಂತೆ ಕಾಣುತ್ತಿದೆ.
ಬಸವಕಲ್ಯಾಣ ಕ್ಷೇತ್ರದಲ್ಲೇ ಠಿಕಾಣಿ ಹೊಡೆದು ವಾರ ಕಾಲ ಹಳ್ಳಿಹಳ್ಳಿಗೂ ತೆರಳಿ ಪ್ರಚಾರ ನಡೆಸಿದ ದಳಪತಿಗೆ ಮತದಾರ ಕೈಹಿಡಿದ ಹಾಗೇ ಕಾಣುತ್ತಿಲ್ಲ. 7 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಸೈಯದ್ ಯಾಸ್ರಬ್ ಖಾದ್ರಿಗೆ ಲಭಿಸಿದ್ದು, ಕೇವಲ 1418 ಮತಗಳು.
ಕಾಂಗ್ರೆಸ್ ಈ ವಿಷಯದಲ್ಲಿ ಸಾಕಷ್ಟು ಟೀಕೆಗಳು ಮಾಡಿತ್ತು. ಬಿಜೆಪಿಗೆ ಲಾಭ ಮಾಡುವುದಕ್ಕಾಗಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ನೇರವಾಗಿ ಟೀಕಿಸಿದ್ದರು.

ಇದ್ಯಾವುದನ್ನು ಲೆಕ್ಕಿಸದ ಮಾಜಿ ಸಿಎಮ ಎಚ್.ಡಿ ಕುಮಾರಸ್ವಾಮಿ ತಮ್ಮ ಮುಖಂಡರೊಂದಿಗೆ ಪ್ರಚಾರ ನಡೆಸಿದರು. ಮೈತ್ರಿ ಸರ್ಕಾರದಲ್ಲಿ ಬಸವಕಲ್ಯಾಣದಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು.
ಸಾಲ ಮನ್ನಾ ಬಗ್ಗೆ ಮಾಡಿದ ಭಾಷಣಗಳೂ ಫಲಕೊಟ್ಟ ಹಾಗೇ ಕಾಣುತ್ತಿಲ್ಲ. ಇದೇ ಕ್ಷೇತ್ರದಿಂದ ಹಿಂದೆ ಜನತಾ ಪರಿವಾರದ ೭ ಅಭ್ಯರ್ಥಿಗಳು ಗೆದ್ದು ಬಂದಿದ್ದು ಇತಿಹಾಸ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications