ಸರ್ವತೋಮುಖ ಅಭಿವೃದ್ಧಿ ಬಿಜೆಪಿ ಸರ್ಕಾರದ ಮೂಲಕ ಈಡೇರುತ್ತಿದೆ: ಪ್ರಭು ಚೌಹಾಣ್
ಬೀದರ್, ಅಕ್ಟೋಬರ್, 18: ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ ಮತ್ತು ಅಭಿವೃದ್ಧಿ ಪರ್ವವು ಬಿಜೆಪಿ ಸರ್ಕಾರದ ಮೂಲಕ ಈಡೇರುತ್ತಿದೆ ಎಂದು ಸಚಿವ ಪ್ರಭು ಚೌಹಾಣ್ ಬೀದರ್ನಲ್ಲಿ ತಿಳಿಸಿದರು.
ಬೀದರ್ ಜಿಲ್ಲೆಯ ಔರಾದ್ನಲ್ಲಿ 'ಜನಸಂಕಲ್ಪ'ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಬೊಮ್ಮಾಯಿಯವರು ಈಡೇರಿಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ರಾಜ್ಯವು ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಅನೇಕ ಯೋಜನೆಗಳನ್ನು ಮುಖ್ಯಮಂತ್ರಿ ಅವರು ಕೈಗೊಂಡಿದ್ದಾರೆ. ಮಹಿಳಾ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗರಿಷ್ಠ ಅನುದಾನವನ್ನು ಔರಾದ್ಗೆ ನೀಡಿವೆ. ಪ್ರತಿ ಮನೆಗೆ ನಲ್ಲಿಯ ಮೂಲಕ ನೀರು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯದ ಅಭಿವೃದ್ಧಿಗೆ ಸದಾ ಸಿದ್ಧ
ಕಿಸಾನ್ ಸಮ್ಮಾನ್ ಸೇರಿ ಅನೇಕ ಯೋಜನೆಗಳ ಮೂಲಕ ಕೇಂದ್ರ ಸರ್ಕಾರವು ದೇಶದ ಎಲ್ಲ ಸಮುದಾಯದವರ ಅಭಿವೃದ್ಧಿಗೆ ಶ್ರಮಿಸಿದೆ. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕಾರಂಜಾದಿಂದ ಔರಾದ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಕೊಡಿ ಎಂದು ಅವರು ಮನವಿ ಮಾಡಿದ್ದರು. ಪುರಸಭೆಯನ್ನಾಗಿ ಪ್ರಕಟಿಸಿ ಎಂದು ವಿನಂತಿಸಿದ್ದರು. ಮರಾಠ ಮೀಸಲಾತಿಯನ್ನು 2 ಎಗೆ ಬದಲಿಸಿ ಎಂದು ಮನವಿ ಮಾಡಿದ್ದರು. ಗೋಶಾಲೆಗಳಿಗೆ ಸಂಬಂಧಿಸಿದಂತೆ 100 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ್ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications