ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ ಗೆ ಬೀದರ್ ಬೆಡಗಿ ನಿಶಾ
ಬೀದರ್, ಅಕ್ಟೋಬರ್ 12; ಗಡಿ ಜಿಲ್ಲೆ ಬೀದರ್ ಗೆ ಹಿಂದುಳಿದ ಜಿಲ್ಲೆ ಅನ್ನುವ ಪಟ್ಟವಿದೆ. ಆದರೆ ಅದೇ ಜಿಲ್ಲೆಯ ಚಿಕ್ಕ ಗ್ರಾಮದ ಯುವತಿಯೊಬ್ಬಳು 2019ರ ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದು, ಜಿಲ್ಲೆಯ ಹೆಸರನ್ನು ಪ್ರತಿನಿಧಿಸಿದ್ದಾಳೆ.
ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ ಗ್ರಾಮದ ಯುವತಿ ನಿಶಾ ತಾಳಂಪಳ್ಳಿ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 2019ರ ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ ಗೆ ಆಯ್ಕೆಯಾಗಿದ್ದಾರೆ. ಇದೇ 18ರಂದು ಮಿಸ್ ಇಂಟರ್ ನ್ಯಾಷನಲ್ ಸ್ಪರ್ಧೆ ನಡೆಯಲಿದ್ದು ಕರ್ನಾಟಕದಿಂದ ಆಯ್ಕೆಯಾದ ಏಕೈಕ ಮಹಿಳೆ ಅನ್ನುವ ಹೆಗ್ಗಳಿಕೆಗೆ ನಿಶಾ ಪಾತ್ರವಾಗಿದ್ದಾರೆ.
ಪದವಿಯವರೆಗೂ ಶಿಕ್ಷಣವನ್ನು ಬೀದರ್ ನಲ್ಲೇ ಪೂರೈಸಿರುವ ನಿಶಾ, ಮುಂದೆ ಉನ್ನತ ವ್ಯಾಸಂಗಕ್ಕೆ ಹೈದರಾಬಾದ್ ಗೆ ತೆರಳಿ ಡಿಪ್ಲೋಮಾ ಇನ್ ಏವಿಏಷನ್ ಪದವಿ ಪಡೆದು, ಖಾಸಗಿ ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರಿಗೆ ಈ ಅವಕಾಶದ ಬಾಗಿಲು ತೆರೆದಿದೆ.

ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ ಗೆ ಆಯ್ಕೆಯಾಗಿದ್ದು ಹೇಗೆ?: ನಿಶಾ ಮಿಸ್ ಇಂಡಿಯಾ ಮಿಸ್ ಇಂಟರ್ ನ್ಯಾಷನಲ್ ಗೆ ಆಯ್ಕೆ ಆಗಿದ್ದು, ಹೈದರಾಬಾದ್ ನಲ್ಲಿ ಫ್ಯಾಷನ್ ಫಿಸ್ತಾ ವತಿಯಿಂದ. ಆಡಿಷನ್ ನಲ್ಲಿ 90 ಜನ ಸ್ಪರ್ಧಾಳುಗಳು ಭಾಗವಹಿಸಿದ್ದರು. ಒಂದೂವರೆ ತಿಂಗಳ ಕಾಲ ನಡೆದ ಆಡಿಷನ್ ನಲ್ಲಿ ನಿಶಾ ತಮ್ಮ ವ್ಯಕ್ತಿತ್ವ, ಸೌಂದರ್ಯ, ಮಾತಿನ ಕೌಶಲ್ಯದಿಂದ ಆಯ್ಕೆಯಾದರು.
ಇದೇ ಮೊದಲ ಬಾರಿಗೆ ಬೀದರ್ ನ ಯುವತಿಯೊಬ್ಬಳು ಸೌಂದರ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದು, ನಿಶಾ ಸ್ಪರ್ಧೆಯಲ್ಲಿ ಗೆದ್ದು ಬರಲಿ ಎಂದು ಜಿಲ್ಲೆಯ ಜನ ಶುಭ ಹಾರೈಸುತಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications