ಮುಚ್ಚುವ ಹಂತ ತಲುಪಿದ ಕರ್ನಾಟಕದ ಈ ವಿಮಾನ ನಿಲ್ದಾಣ
ಬೀದರ್, ಫೆಬ್ರವರಿ 01: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಜ್ಜಾಗುತ್ತಿದೆ. ಹಾಸನದಲ್ಲಿ ವಿಮಾನ ನಿಲ್ದಾಣದ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕು? ಎಂದು ಚರ್ಚೆಗಳು ಸಾಗಿದೆ. ಇಂತಹ ಹೊತ್ತಿನಲ್ಲಿಯೇ ಕರ್ನಾಟಕದ ವಿಮಾನ ನಿಲ್ದಾಣವೊಂದು ಬಾಗಿಲು ಮುಚ್ಚುವ ಹಂತಕ್ಕೆ ಬಂದಿದೆ. ಸದ್ಯ ಈ ವಿಮಾನ ನಿಲ್ದಾಣಕ್ಕೆ ಯಾವುದೇ ವಿಮಾನ ಆಗಮಿಸುತ್ತಿಲ್ಲ.
ಹೌದು, ಪ್ರಯಾಣಿಕರ ಕೊರತೆ, ವಿಮಾನಗಳ ಸಂಪರ್ಕವಿಲ್ಲ, ಆರ್ಥಿಕ ನಷ್ಟ ಮುಂತಾದ ಕಾರಣಕ್ಕೆ ಬೀದರ್ ವಿಮಾನ ನಿಲ್ದಾಣ ಮುಚ್ಚುವ ಹಂತಕ್ಕೆ ಬಂದಿದೆ. ಬೀದರ್ನಿಂದ ಬೆಂಗಳೂರು, ದೆಹಲಿ ಮುಂತಾದ ನಗರಗಳಿಗೆ ಹಾರಾಟ ನಡೆಸಬೇಕು ಎಂಬ ಜನರ ಕನಸು ನನಸಾಗುತ್ತಿಲ್ಲ.

2020ರ ಫೆಬ್ರವರಿ 7ರಂದು ಅಂದಿನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೀದರ್ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದರು. 5 ವರ್ಷಗಳಲ್ಲಿ ಎರಡು ವಿಮಾನಯಾನ ಸಂಸ್ಥೆಗಳು ವಿಮಾನ ನಿಲ್ದಾಣಕ್ಕೆ ವಿಮಾನ ಸೇವೆ ಸ್ಥಗಿತಗೊಳಿಸಿವೆ. ಸದ್ಯ ಬೀದರ್ಗೆ ಯಾವುದೇ ವಿಮಾನವಿಲ್ಲ.
ವಿಮಾನ ಸೇವೆ ಸ್ಥಗಿತ: ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ಬಳಿಕ ಬೀದರ್-ಬೆಂಗಳೂರು ನಡುವೆ ಟ್ರೂ ಜೆಟ್ 72 ಸೀಟುಗಳ ವಿಮಾನ ಸೇವೆಯನ್ನು ಆರಂಭಿಸಿತ್ತು. ಆದರೆ ಕೆಲವೇ ತಿಂಗಳಿನಲ್ಲಿ ಪ್ರಯಾಣಿಕರ ಕೊರತೆಯ ಕಾರಣ ವಿಮಾನ ಸೇವೆ ರದ್ದುಗೊಳಿಸಿತು.
ಬಳಿಕ ಬೀದರ್ನ ಜನರು ಹೈದರಾಬಾದ್ಗೆ ತೆರಳಿ ಅಲ್ಲಿಂದ ವಿಮಾನವೇರಿ ಸಂಚಾರ ನಡೆಬೇಕಾಯಿತು. ಬಳಿಕ ಬೀದರ್ಗೆ ಮತ್ತೆ ವಿಮಾನ ಸೇವೆ ಆರಂಭಿಸಬೇಕು ಎಂಬ ಒತ್ತಾಯ ಕೇಳಿಬಂದಿತು. 2022ರ ಜೂನ್ನಲ್ಲಿ ಸ್ಟಾರ್ ಏರ್ ವಿಮಾನ ಸೇವೆಯನ್ನು ಆರಂಭಿಸಿತು.
ಆದರೆ ಒಂದು ವರ್ಷದ ಹಿಂದೆ ಆರ್ಥಿಕ ನಷ್ಟದ ನೆಪ ಹೇಳಿ ಈ ವಿಮಾನ ಸೇವೆ ಸಹ ರದ್ದುಗೊಳಿಸಲಾಗಿದೆ. ಆದ್ದರಿಂದ ಸುಸಜ್ಜಿತವಾದ ಏರ್ಪೋರ್ಟ್ ಇದ್ದರೂ ಸಹ ಬೀದರ್ಗೆ ವಿಮಾನ ಸೇವೆ ಇಲ್ಲ. ಬೀದರ್-ಬೆಂಗಳೂರು ನಡುವೆ ವಿಮಾನ ಸೇವೆ ಪುನಃ ಆರಂಭವಾಗಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಸದ್ಯ ಬೀದರ್ಗೆ ಯಾವುದೇ ವಿಮಾನ ಸೇವೆ ಇಲ್ಲದ ಕಾರಣ ಜನರು ಕಲಬುರಗಿ ಅಥವ ಹೈದರಾಬಾದ್ ಹೋಗಿ ಅಲ್ಲಿಂದ ವಿಮಾನ ಏರಿ ಬೇರೆ ನಗರಕ್ಕೆ ಸಂಚಾರವನ್ನು ನಡೆಸಬೇಕಿದೆ. ಕಲಬುರಗಿಯಿಂದ ದಿನಕ್ಕೆ 5-6 ವಿಮಾನಗಳು ಸಂಚಾರವನ್ನು ನಡೆಸುತ್ತವೆ. ಆದರೆ ಬೀದರ್ಗೆ ಒಂದು ವಿಮಾನ ಕೂಡಾ ಸಂಚಾರ ನಡೆಸುವುದಿಲ್ಲ.
ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ನಿಲ್ದಾಣ ಉದ್ಘಾಟನೆಗೊಂಡು 5 ವರ್ಷಗಳು ಕಳೆದಿವೆ. ಎರಡು ಕಂಪನಿಗಳು ವಿಮಾನ ಸೇವೆ ರದ್ದುಗೊಳಿಸಿವೆ. ವಿಮಾನ ನಿಲ್ದಾಣ ಮುಚ್ಚಿಲ್ಲ. ಹೊಸ ವಿಮಾನ ಸೇವೆ ಆರಂಭಕ್ಕೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೀದರ್ ವಿಮಾನ ನಿಲ್ದಾಣದ ಭದ್ರತೆಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿ, ಸಿಬ್ಬಂದಿ ಸೇರಿ 45 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಆದರೆ ವಿಮಾನ ನಿಲ್ದಾಣಕ್ಕೆ ಒಂದು ವಿಮಾನ ಸಹ ಬರುವುದಿಲ್ಲ. 2023ರ ಡಿಸೆಂಬರ್ 26ರ ಬಳಿಕ ಯಾವುದೇ ವಿಮಾನ ಸೇವೆ ಬೀದರ್ಗೆ ಇಲ್ಲ. ಈಗ 40 ಸಿಬ್ಬಂದಿಗಳನ್ನು ಲೋಕಾರ್ಪಣೆಗೆ ಸಜ್ಜಾಗುತ್ತಿರುವ ವಿಜಯಪುರ ನಿಲ್ದಾಣಕ್ಕೆ ನಿಯೋಜನೆ ಮಾಡಲು ಸರ್ಕಾರ ಮುಂದಾಗಿದೆ.
ಬೀದರ್ ಸಂಸದ ಸಾಗರ್ ಖಂಡ್ರೆ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕೆ. ರಾಮಮೋಹನ್ ನಾಯ್ಡು ಭೇಟಿಯಾಗಿ ಬೀದರ್ಗೆ ಹೊಸದಾಗಿ ವಿಮಾನ ಸೇವೆ ಆರಂಭಿಸಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಇನ್ನೂ ಯಾವುದೇ ಕಂಪನಿಗಳು ಬೀದರ್ಗೆ ವಾಯುಯಾನ ಸಂಪರ್ಕ ಕಲ್ಪಿಸಲು ಆಸಕ್ತಿ ತೋರಿಲ್ಲ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications