ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ.
ಆಹಾರವನ್ನು ಮಕ್ಕಳು ಮುಟ್ಟುತ್ತಿಲ್ಲ, ನಾವು ಸಹ ತಿನ್ನುತ್ತಿಲ್ಲ. ಅದು ತಿನ್ನುವುದಕ್ಕೆ ಬಾರದಂತಿದೆ ಎಂಬ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ.
ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ ಅಲೆಮಾರಿ ಜನಾಂಗದ ಮಹಿಳೆಯರು, ನಿಮ್ಮ ಆಹಾರ ಚೆನ್ನಾಗಿದೆ, ಪ್ರಭು ಚವ್ಹಾಣ ಅವರು ಹಂಚುತ್ತಿರುವ ಆಹಾರ ಚೆನ್ನಾಗಿಲ್ಲ ಎಂದಿದ್ದಾರೆ.

ಅದು ದಪ್ಪ ಅಕ್ಕಿಯಿಂದ ಕೂಡಿರುವುದು ಅಲ್ಲದೆ ಉಪ್ಪು, ಖಾರ ಹೆಚ್ಚಾಗಿರುವುದರಿಂದ ಮತ್ತು ರುಚಿಕರವಾಗಿ ಇಲ್ಲ. ಹಾಗಾಗಿ, ಮಕ್ಕಳು ಅದಕ್ಕೆ ನೋಡುತ್ತಿಲ್ಲ ಹಾಗೂ ಮುಟ್ಟುತ್ತಿಲ್ಲ. ಆದುದರಿಂದ ಅವರ ಆಹಾರ ಹಾಗೆಯೇ ಉಳಿದುಬಿಡುತ್ತದೆ. ಬೇಕಾದರೆ ನೀವು ಒಂದು ಸಲ ನೋಡಿ ಎಂದು ಅಲ್ಲಿದ್ದ ಮಕ್ಕಳಿಗೆ ಪ್ರಭು ಚವ್ಹಾಣ್ ಹಂಚಿದ ಆಹಾರವನ್ನು ಪ್ರದರ್ಶಿಸಿದರು.
ಅಲ್ಲದೆ ಸಚಿವ ಪ್ರಭು ಚವ್ಹಾಣ್ ಅವರು ದಿನಾಲು ಎರಡು ಹೊತ್ತು ಊಟ ಹಂಚುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಊಟದ ವಿತರಣೆ ಮಾಡುತ್ತಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಮತ್ತು ಸಾಯಂಕಾಲ ನಾಲ್ಕರಿಂದ 5 ಗಂಟೆವರೆಗೆ. ಅವರು ಎರಡು ಹೊತ್ತು ಊಟ ಹಂಚುತ್ತಿದ್ದು, ಅದು ತಿನ್ನಲಿಕ್ಕೆ ಆಗುತ್ತಿಲ್ಲ ಈಗ ಅದು ಅಲ್ಲೇ ಸಂಗ್ರಹವಾಗಿ ಬೀಳುತ್ತಿದೆ ಎಂದು ಬೊಟ್ಟು ಮಾಡಿ ತೋರಿಸಿದ್ದಾರೆ.

ಬೇರೆ ಸಂಘಟನೆಯವರು ಊಟ ಹಂಚುವ ಸಂದರ್ಭದಲ್ಲಿ ತಮ್ಮ ಊಟ ಹೇಗಿದೆ ಎಂದು ವಿಚಾರಿಸಿದಾಗ, ಅಲೆಮಾರಿ ಜನಾಂಗದ ಮಹಿಳೆ, ನಿಮ್ಮ ಊಟ ಸಣ್ಣ ಅಕ್ಕಿಯಿಂದ ರುಚಿಕರವಾಗಿ ಮಾಡಲ್ಪಟ್ಟಿದೆ. ಹಾಗಾಗಿ ಮಕ್ಕಳು ಇಷ್ಟಪಟ್ಟು ತಿನ್ನುತ್ತಿದ್ದಾರೆ ನೋಡಿ ಎಂದು ಮಕ್ಕಳು ಊಟ ಮಾಡುತ್ತಿರುವುದನ್ನು ತೋರಿಸಿದ್ದಾರೆ.
ಊಟ ಹಂಚಿದರೆ ಉತ್ತಮ ಗುಣಮಟ್ಟದ ಆಹಾರ ಹಂಚಬೇಕು. ಹಾಗಿದ್ದಾಗ ಮಾತ್ರ ನಾವೆಲ್ಲರೂ ತಿನ್ನುವುದಕ್ಕೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಚಿವ ಪ್ರಭು ಚೌಹಾಣ್ ಅವರು ಕಳೆದ 15 ದಿನಗಳಿಂದ ತಮ್ಮ ಕ್ಷೇತ್ರವಾಗಿರುವ ಔರಾದ್ ಹಾಗೂ ಕಮಲನಗರ್ ಪಟ್ಟಣಗಳಲ್ಲಿ ಬಡವರಿಗೆ ಅನಾಥರಿಗೆ ಮತ್ತು ಕಾರ್ಮಿಕರಿಗೆ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications