ಬೀದರ್: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ನಮಾಜ್
ಬೀದರ್, ಮೇ 29: ಲಾಕ್ಡೌನ್ ನಿಯಮ ಉಲ್ಲಂಘಿಸಿ ಬೀದರ್ ಜಿಲ್ಲೆ ಹುಲಸೂರು ತಾಲ್ಲೂಕು ಕೇಂದ್ರದ ಮಸೀದಿಯೊಂದರಲ್ಲಿ ಸಾಮೂಹಿಕ ನಮಾಜ್(ಪ್ರಾರ್ಥನೆ) ಮಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಬಸವಕಲ್ಯಾಣ ತಹಶೀಲ್ದಾರ ನೇತೃತ್ವದ ತಂಡ ಮಸೀದಿ ಮೇಲೆ ದಾಳಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಹುಲಸೂರು ಪಟ್ಟಣದ ಖುರೇಶಿ ಗಲ್ಲಿಯಲ್ಲಿರುವ ಮಸಿದಿಯಲ್ಲಿ ಸುಮಾರು 50ಕ್ಕೂ ಅಧಿಕ ಜನ ಸಾಮೂಹಿಕ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ ಶಿವಾನಂದ ಮೇತ್ರೆ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ಮಧ್ಯಾಹ್ನ ಮಸೀದಿ ಮೇಲೆ ದಿಢೀರನೆ ದಾಳಿ ನಡೆಸಿದರು.
ಅಧಿಕಾರಿಗಳ ತಂಡವು ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ಲಾಕ್ಡೌನ್ ನಿಯಮ ಉಲ್ಲಂಘಿಸಿ ನಮಾಜ್ನಲ್ಲಿ ನಿರತವಾಗಿದ್ದವರನ್ನು ತರಾಟೆಗೆ ತಗೆದುಕೊಂಡ ಪ್ರಸಂಗ ಜರುಗಿತು.

ಹುಲಸೂರು ಪಟ್ಟಣ ಸೇರಿದಂತೆ ದೇಶದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೊನಾ ಸೋಂಕಿನಿಂದ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದಿಂದ ಲಾಕ್ಡೌನ್ ಜಾರಿಗೊಳಿಸಿ, ನಮಾಜ್ ಸೇರಿದಂತೆ ಎಲ್ಲಾ ಧಾರ್ಮಿಕ ಸಭೆ-ಸಮಾರಂಗಳನ್ನು ರದ್ದುಪಡಿಸಿದೆ.
ಜನರನ್ನು ಸೇರಿಸಿ ನಮಾಜ್ ಮಾಡಬಾರದು ಎನ್ನುವುದು ಗೊತ್ತಿದ್ದರೂ ಹತ್ತಾರು ಜನರೊಂದಿಗೆ ಸೇರಿ ನಮಾಜ್ ಮಾಡುತ್ತಿರುವುದು ಯಾಕೆ ಎಂದು ಮಸೀದಿ ಇಮಾಮ್ರನ್ನು ತಹಶೀಲ್ದಾರರು ಪ್ರಶ್ನಿಸಿದರು.

Recommended Video
ಇದೆ ರೀತಿ ಮತ್ತೊಮ್ಮೆ ನಮಾಜ್ ಮಾಡುವುದನ್ನು ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಮಾಜ್ ಮಾಡುವಾಗ ತಹಶೀಲ್ದಾರ ಸೇರಿದಂತೆ ಅಧಿಕಾರಿಗಳು ಮಸೀದಿಗೆ ಪ್ರವೇಶಿಸಿದರೂ ಸಹ ಕ್ಯಾರೆ ಎನ್ನದ ಜನರು, ನಮಾಜ್ನಲ್ಲಿ ನಿರತವಾಗಿದ್ದರು. ಕೆಲ ಕ್ಷಣ ಇದನ್ನು ಗಮನಿಸಿದ ತಹಶೀಲ್ದಾರ ಶಿವಾನಂದ ಮೇತ್ರೆ, ಪ್ರಥಮ ಸಾಲಿನಲ್ಲಿ ನಮಾಜ್ ಮಾಡುತ್ತಿದ್ದ ಮಸೀದಿ ಇಮಾಮ್ ಬಳಿ ತೆರಳಿ ತರಾಟೆಗೆ ತಗೆದುಕೊಳ್ಳುವುದನ್ನು ಗಮನಿಸಿದ ಇತರರು ಸ್ಥಳದಿಂದ ನಿರ್ಗಮಿಸಿದರು. ತಾ.ಪಂ ಇಒ ಖಾಲೇದ್ ಅಲಿ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications