ಬೀದರ್: ಬಸ್ ಸೀಟಿಗಾಗಿ ಚಪ್ಪಲಿಯಲ್ಲೆ ಹೊಡೆದಾಡಿಕೊಂಡ ನಾರಿಯರು!
ಬೀದರ್, ಮೇ. 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ತಾನು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತಂದ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಈ ಯೋಜನೆ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರು ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ.
ಈ ಯೋಜನೆ ಜಾರಿಗೆ ಬಂದ ಬಳಿಕ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಪ್ರಯಾಣ ಮಾಡುವುದು ಹೆಚ್ಚಾಗಿದೆ. ಹೀಗಾಗಿ ಮಹಿಳೆಯರಿಗಿರುವ ಸೀಟ್ಗಳು ಯಾವಾಗಲು ತುಂಬಿರುತ್ತವೆ. ಸೀಟ್ಗಾಗಿ ಆಗ್ಗಾಗೆ ಜಗಳ ಕೂಡ ಆಗುತ್ತದೆ. ಇಂತಹದ್ದೆ ಘಟನೆ ಬೀದರ್ನಲ್ಲಿ ನಡೆದಿದೆ. ಆದರೆ, ಇದು ಬರಿ ಜಗಳ ಮಾತ್ರವಲ್ಲ.... ಚಪ್ಪಲಿಯಲ್ಲೇ ಹೊಡೆದಾಡಿಕೊಂಡಿದ್ದಾರೆ.

ಚಪ್ಪಲಿಯಲ್ಲಿ ಹೊಡೆದಾಡಿದ ನಾರಿಯರು!
ಬೀದರ್ ಜಿಲ್ಲೆಯಲ್ಲಿ ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಜೊತೆಗೆ ಬಟ್ಟೆ ಎಳೆದು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀದರ್ನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಘಟನೆ ನಡೆದಿದೆ.
ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಜೋರಾಗಿ ಕಿತ್ತಾಡಿದ್ದಾರೆ. ಮಕ್ಕಳು, ಮಹಿಳೆಯರು, ಗಂಡಸರು ತುಂಬಿದ್ದ ಬಸ್ನಲ್ಲಿ ಎಲ್ಲರ ಮುಂದೆ ಜೋರಾಗಿ ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದಾಡಿಕೊಂಡಿದ್ದಾರೆ. ಮಕ್ಕಳು ಭಯದಿಂದ ಜಗಳ ನೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಒಬ್ಬ ಯುವತಿ ಮೇಲೆ ಮೂರರಿಂದ ನಾಲ್ಕು ಜನ ಹಲ್ಲೆ ಮಾಡುತ್ತಿದ್ದಾರೆ. ಸೀಟಿನ ಮೇಲೆ ಕುಳಿದ್ದ ಯುವತಿ ಬಳಿ ಸೀಟು ನನ್ನದು ಎಂದು ಮತ್ತೊಬ್ಬ ಮಹಿಳೆ ಜಗಳಕ್ಕೆ ನಿಂತಿದ್ದಾರೆ. ನಾನು ಸೀಟು ಬಿಡಲ್ಲ ಎಂಬ ಮಾತಿಗೆ ಮಾತು ಬೆಳೆದು ಜಗಳ ದೊಡ್ಡದಾಗಿದೆ. ಬಳಿಕ ಚಪ್ಪಲಿ ತೆಗೆದುಕೊಂಡು ಹೊಡೆದಾಡುವ ಹಂತಕ್ಕೆ ಹೋಗಿದೆ.
ಬರೀ ಬೀಪ್ ಬೀಪ್ ಮಾತುಗಳ ಮೂಲಕ ಎಲ್ಲರೂ ಹೊಡೆದಾಡಿದ್ದಾರೆ, ನಿಂತಿದ್ದ ಮಹಿಳೆಯರು ಸೀಟಿನ ಮೇಲಿದ್ದ ಯುವತಿಯ ಬಟ್ಟೆ ಹಿಡಿದು ಹರಿದಿದ್ದಾರೆ. ಕೂದಲು ಹಿಡಿದುಕೊಂಡು ಎಲೆದಾಡಿದ್ದಾರೆ. ಬಳಿಕ ಅಲ್ಲೆ ಇದ್ದ ಪುರುಷರೊಬ್ಬರು ಇಬ್ಬರ ಜಗಳ ಬಿಡಿಸಿದ್ದಾರೆ. ವಿಡಿಯೋದಲ್ಲಿ ಯಾವುದೇ ಕಂಡಕ್ಟರ್ ಕಾಣಿಸಿಕೊಂಡಿಲ್ಲ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications