ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಕಲ್ಯಾಣ; ಉಪ ಚುನಾವಣಾ ಕಣಕ್ಕಿಳಿದ ಸ್ವಾಮೀಜಿ ಬಳಿ 45 ಕೆಜಿ ಚಿನ್ನ!

|
Google Oneindia Kannada News

ಬಸವಕಲ್ಯಾಣ, ಮಾರ್ಚ್ 25; ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಸ್ವಾಮೀಜಿಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಬಳಿ 45 ಕೆ. ಜಿ. ಚಿನ್ನ ಇರುವುದಾಗಿ ಅವರು ಘೋಷಣೆ ಮಾಡಿದ್ದಾರೆ.

ಬರಡೋಲಾದ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಹಿಂದೂಸ್ತಾನ್ ಜನತಾ ಪಕ್ಷದಿಂದ ಬಸವಕಲ್ಯಾಣ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ದೆಹಲಿ ಚುನಾವಣೆ; ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದ ಕನ್ನಡಿಗದೆಹಲಿ ಚುನಾವಣೆ; ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದ ಕನ್ನಡಿಗ

ಇದುವರೆಗೂ 25 ಚುನಾವಣೆಗಳಲ್ಲಿ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಸ್ಪರ್ಧಿಸಿದ್ದಾರೆ. ಈ ಹಿಂದೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿಯೂ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕಿಳಿದಿದ್ದರು.

ಬಸವಕಲ್ಯಾಣ ಉಪ ಚುನಾವಣೆ; ಯಡಿಯೂರಪ್ಪ ಸ್ಪಷ್ಟನೆ ಬಸವಕಲ್ಯಾಣ ಉಪ ಚುನಾವಣೆ; ಯಡಿಯೂರಪ್ಪ ಸ್ಪಷ್ಟನೆ

ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಗ್ರಾಮ ಪಂಚಾಯಿತಿ, ಲೋಕಸಭೆ, ರಾಜ್ಯಸಭೆ ಚುನಾವಣೆಗೂ ಸ್ಪರ್ಧಿಸಿ ಸೋಲುಕಂಡಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಗೋವಾ ವಿಧಾನಸಭೆ ಚುನಾವಣೆಯಲ್ಲೂ ಕಣಕ್ಕಿಳಿದಿದ್ದರು.

ಬಸವಕಲ್ಯಾಣ ಉಪ ಚುನಾವಣೆ; ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆಬಸವಕಲ್ಯಾಣ ಉಪ ಚುನಾವಣೆ; ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ

ವಿಜಯಪುರ ಜಿಲ್ಲೆಯವರು

ವಿಜಯಪುರ ಜಿಲ್ಲೆಯವರು

ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ವಿಜಯಪುರ ಜಿಲ್ಲೆಯ ಬರಡೋಲ ಮೂಲದವರು. ಧಾರವಾಡದಲ್ಲಿ ಬಿಕಾಂ ವ್ಯಾಸಂಗ ಮಾಡಿದ್ದಾರೆ. ಪತ್ನಿ ಕವಿತಾ ಬಳಿ 23 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 4 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳಿವೆ ಎಂದು ಅಫಿಡೆವಿಟ್ ಸಲ್ಲಿಕೆ ಮಾಡಿದ್ದಾರೆ.

26ನೇ ಬಾರಿ ಚುನಾವಣಾ ಕಣಕ್ಕೆ

26ನೇ ಬಾರಿ ಚುನಾವಣಾ ಕಣಕ್ಕೆ

ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಇದುವರೆಗೂ 25 ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಇದು ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ 26ನೇ ಚುನಾವಣೆಯಾಗಿದೆ. ಸ್ವಾಮೀಜಿಗಳ ಪೂರ್ವಶ್ರಮದ ಹೆಸರು ದೀಪಕ್. ಹಿಂದೂಸ್ತಾನ್ ಜನತಾ ಪಕ್ಷದಿಂದ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದಿದ್ದರು

ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದಿದ್ದರು

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದ್ದರು. ಯಾರೂ ಸಹ ಟಿಕೆಟ್ ನೀಡದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಮ್ ಆದ್ಮಿ ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದು ಸೋತಿದ್ದರು.

Recommended Video

ವ್ಯಂಗ್ಯ ಭರಿತ ಕಿರು ನಾಟಕ ಪ್ರದರ್ಶಿಸಿ ಆರೋಗ್ಯ ಸಚಿವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ | Oneindia Kannada
ಬೇರೆ-ಬೇರೆ ರಾಜ್ಯಗಳಲ್ಲಿ ಕಣಕ್ಕೆ

ಬೇರೆ-ಬೇರೆ ರಾಜ್ಯಗಳಲ್ಲಿ ಕಣಕ್ಕೆ

ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಹಲವಾರು ರಾಜ್ಯಗಳಲ್ಲಿಯೂ ಚುನಾವಣಾ ಕಣಕ್ಕಿಳಿಸಿದ್ದಾರೆ. ಗ್ರಾಮ ಪಂಚಾಯಿತಿ, ಲೋಕಸಭೆ, ರಾಜ್ಯಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಸ್ವಾಮೀಜಿಗಳು, ಮಹಾರಾಷ್ಟ್ರ, ಗುಜರಾತ್, ಗೋವಾ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ ಸೋಲು ಕಂಡಿದ್ದಾರೆ.

English summary
Venkateshwara Maha Swamiji field nomination for Bidar district Basavakalyan assembly seat by election. Swamiji resident of Chadchan village of Vijayapura. Swamiji announced he has 45 kg of gold.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X