Bommanahalli elections: ಸತೀಶ್ ರೆಡ್ಡಿ ರೇಸ್ಗೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?
ಬೆಂಗಳೂರು, ಮಾರ್ಚ್, 26: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಿಸಿ ದಿನದಿಂದ ಏರುತ್ತಲೇ ಇದೆ. ಹಾಗೆಯೇ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ರಂಗು ಹೇಗಿದೆ ಎಂದು ತಿಳಿಯೋಣ ಬನ್ನಿ.
ಮೂರು ಬಾರಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿಯವರು ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ತಮ್ಮ ಮತಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದಿದ್ದಾರೆ. ಆದ್ದರಿಂದ ಈ ಬಾರಿ ಸತೀಶ್ ರೆಡ್ಡಿಗೆ ಗಾಳ ಹಾಕಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ.
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬೊಮ್ಮನಹಳ್ಳಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ.

ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಸತೀಶ್ ರೆಡ್ಡಿ
2018, ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿಯವರು ಜಯ ಗಳಿಸಿದ್ದರು. ಇವರ ವಿರುದ್ಧ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸುಷ್ಮಾ ರಾಜಗೋಪಾಲ ರೆಡ್ಡಿ 47,162 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗೆಯೇ ಬೊಮ್ಮನಹಳ್ಳಿ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಗುಜರಾತ್ ಮಾದರಿಯನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸುವ ಆಲೋಚನೆ ಭಾಗವಾಗಿ ಸತೀಶ್ ರೆಡ್ಡಿಯನ್ನು ಬಿಟಿಎಂ ಲೇಔಟ್ನಿಂದ ಅಖಾಡಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಸತೀಶ್ ರೆಡ್ಡಿಯವರು ಕ್ಷೇತ್ರ ಬಿಟ್ಟುಕೊಡಲು ತಾವು ಸಿದ್ಧವಿಲ್ಲ ಎನ್ನುವ ಸಂದೇಶವನ್ನು ರವಾನಿಸಿದ್ದು, ಈ ವಿಚಾರ ಸದ್ಯ ಬಿಜೆಪಿ ವಲಯದಲ್ಲಿ ಚರ್ಚೆ ಆಗುತ್ತಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
ಬಿಜೆಪಿಯ ಲೆಕ್ಕಾಚಾರವೇನು?
ಪಕ್ಕದಲ್ಲಿರುವ ಬಿಟಿಎಂ ಬಡಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರದ್ದೇ ಪ್ರಾಬಲ್ಯ ಇದೆ. ರಾಮಲಿಂಗಾರೆಡ್ಡಿ ಹಾಗೂ ಸತೀಶ್ ರೆಡ್ಡಿ ಇಬ್ಬರೂ ಪರಸ್ಪರ ಟೀಕೆ ಮಾಡದೆ ರಾಜಕೀಯ ಮಾಡಿಕೊಂಡು ಬಂದವರಾಗಿದ್ದಾರೆ. ಇದೀಗ ಇಬ್ಬರನ್ನೂ ಬಿಟಿಎಂ ಲೇಔಟ್ನಲ್ಲಿ ಪರಸ್ಪರ ಮುಖಾಮುಖಿ ಆಗಿಸಿದರೆ ಹೇಗೆ ಎನ್ನುವ ಚಿಂತೆ ಸತೀಶ್ ರೆಡ್ಡಿಯವರನ್ನು ಕಾಡುತ್ತಿದೆ.
ಸತೀಶ್ ರೆಡ್ಡಿ 2008ರಲ್ಲಿ ಹುಟ್ಟಿಕೊಂಡ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. ಅಷ್ಟೇ ಅಲ್ಲದೆ ಚುನಾವಣೆಯಿಂದ ಚುನಾವಣೆಗೂ ತಮ್ಮ ಮತಗಳಿಕೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಲೇ ಇದ್ದಾರೆ. ಕಳೆದ ಚುನಾವಣೆಯಲ್ಲಿ ಚಲಾಯಿಸಿದ ಮತಗಳಲ್ಲಿ ಅರ್ಧಕ್ಕೂ ಹೆಚ್ಚು ಮತಗಳು ಸತೀಶ್ ರೆಡ್ಡಿಯವರ ಪಾಲಾಗಿದ್ದವು.
Bommanahalli Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2008 | ಸತೀಶ್ ರೆಡ್ಡಿ ಎಂ (ಬಿಜೆಪಿ) | 62,993 | ಕುಪೇಂದ್ರ ರೆಡ್ಡಿ ಡಿ. (ಕಾಂಗ್ರೆಸ್) | 49,353 |
| 2013 | ಸತೀಶ್ ರೆಡ್ಡಿ ಎಂ (ಬಿಜೆಪಿ) | 86,552 | ನಾಗಭೂಷಣ ಸಿ. (ಕಾಂಗ್ರೆಸ್) | 60,700 |
| 20018 | ಸತೀಶ್ ರೆಡ್ಡಿ ಎಂ (ಬಿಜೆಪಿ) | 111,863 | ಸುಷ್ಮಾ ರಾಜಗೋಪಾಲ ರೆಡ್ಡಿ (ಕಾಂಗ್ರೆಸ್) | 64,701 |
ಕಾರ್ಯರೂಪಕ್ಕೆ ಬಾರದ ಆಶ್ವಾಸನೆಗಳು
ಬೊಮ್ಮನಹಳ್ಳಿಯಿಂದ ಬೇಗೂರು ರಸ್ತೆಯವರೆಗೆ ವಿಸ್ತರಣೆ ಕಾಮಗಾರಿ ಮಾಡಲಾಗುತ್ತದೆ ಎಂದು ಪ್ರತಿ ಚುನಾವಣೆ ಸಂದರ್ಭದಲ್ಲೂ ಆಶ್ವಾಸನೆಯನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇದುವರೆಗೂ ಇದು ಈಡೇರಿಲ್ಲ. ಇದನ್ನು ಕೇಳಿದರೆ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯ ನಡೆಯುತ್ತಿದೆ ಎಂದು ನೆಪವೊಡ್ಡಿತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಕ್ಷೇತ್ರದ ಜನರ ಆರೋಪವೇನು?
ಇನ್ನು ಎಚ್ಎಸ್ಆರ್ ಲೇಔಟ್ ಹೊರತುಪಡಿಸಿದ್ರೆ ಬೇರೆಡೆ ಹೇಳಿಕೊಳ್ಳುವಂತಹ ಒಂದು ಉದ್ಯಾನವಾಗಲಿ, ಆಟದ ಮೈದಾನದ ವ್ಯವಸ್ಥೆಯೇ ಇಲ್ಲದಂತಾಗಿದೆ. ಮತ್ತೊಂದೆಡೆ ಮಳೆ ಬಂದಂತಹ ಸಂದರ್ಭದಲ್ಲಿ ಎಚ್ಎಸ್ಆರ್ ಲೇಔಟ್ನಲ್ಲಿ ಕೆಲವು ಮನೆಗಳು ಜಲಾವೃತವಾಗುಗುತ್ತಿವೆ. ಆದರೂ ಕೂಡ ರಾಜಕಾಲುವೆ ಒತ್ತುವರಿ, ಒಂದೇ ನಿವೇಶನವನ್ನು ಕಲವರಿಗೆ ನೋಂದಣಿ ಮಾಡಿಕೊಳ್ಳುವಂತಹ ಭೂದಂಧೆಗೆ ಕಡಿವಾಣ ಹಾಕಬೇಕಿದೆ.
ಭೂದಾಖಲೆಗಳ ಡಿಜಿಟಲೀಕರಣ ಆದಾಗ, ಇಲ್ಲಿನ ಬಹುತೇಕ ಭೂದಾಖಲೆಯುಳ್ಳ ಎಂ.ಆರ್.ಪುಸ್ತಕಗಳನ್ನೇ ಸುಟ್ಟು ಹಾಕಿದ್ದಾರೆನ್ನುವ ಗಂಭೀರ ಆರೋಪ ಎದುರಾಗಿತ್ತು. ಇನ್ನೂ ಡಿಜಿಟಲೀಕರಣ ಆಗಿಲ್ಲ. ಇನ್ನು ಇಲ್ಲಿನ ಹಲವು ರಸ್ತೆಗಳು ಗುಂಡಿಮಯವಾಗಿವೆ. ಮತ್ತು ಬೇಸಿಗೆಯಲ್ಲಿ 1000-1500 ರೂಪಾಯಿ ಕೊಟ್ಟು ಟ್ಯಾಂಕರ್ ನೀರು ಹಾಕಿಸಿಕೊಳ್ಳುತ್ತಿದ್ದೇವೆ ಎನ್ನುವ ಅಸಮಾಧಾನ ಇಲ್ಲಿನ ಜನರದ್ದಾಗಿದೆ.
ಆದರೂ ಸತೀಶ್ ರೆಡ್ಡಿ ಕ್ಷೇತ್ರದಲ್ಲಿ ತಮ್ಮ ಪಕ್ಷದ ಯಾರನ್ನೂ ಬೆಳೆಯಲು ಬಿಟ್ಟಿಲ್ಲ. ಈ ಹಿಂದೆ ಉಪಮೇಯರ್ ಆಗಿದ್ದ ರಾಮ್ಮೋಹನ್ರಾಜು ಅವರನ್ನು ಕೂಡ ಬೆಳೆಯಲು ಅವಕಾಶ ನೀಡಲಿಲ್ಲ ಎಂದು ಕೆಲವು ಕಾರ್ಯಕರ್ತರು ಆರೋಪಿಸಿದ್ದಾರೆ. ಮತ್ತಿಂದೆಡೆ ಕಾಂಗ್ರೆಸ್ನಿಂದ ನನಗೇ ಟಿಕೆಟ್ ಸಿಗುವುದು ಖಚಿತ ಎನ್ನುವಂತೆ ಉಮಾಪತಿ ಶ್ರೀನಿವಾಸ ಗೌಡ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ.
ಇನ್ನು ಟಿ.ವಾಸುದೇವ ರೆಡ್ಡಿ, ಸಿ.ನಾಗಭೂಷಣ, ಕವಿತಾ ರೆಡ್ಡಿ, ಕೆ.ನಾರಾಯಣ ರಾಜು ಕೂಡ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದು, ಜೆಡಿಎಸ್ನಿಂದ ನಾರಾಯಣ ಎನ್ನುವವರು ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಈ ಬಾರಿ ಕ್ಷೇತ್ರದಲ್ಲಿ ಏನಾದರೂ ಮಾಡಿ ಬಿಜೆಪಿಯನ್ನು ಸೋಲಿಸಿ ತಾವು ಅಧಿಕಾರಕ್ಕೆ ಏರಬೇಕು ಎನ್ನುವ ಯೋಚನೆಯಲ್ಲಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು, 4,32,752 ಮತದಾರರಿದ್ದರೆ. ಇದರಲ್ಲಿ ಪರುಷರು 2,32,478, ಮಹಿಳೆಯರು 2,00,194 ಜನ ಇದ್ದರೆ, ಇತರೆ 71 ಜನ ಮತದಾರರಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications