ಡಿಸೆಂಬರ್ 26ರಂದು 10 ಲಕ್ಷ ಸಿಬ್ಬಂದಿಯಿಂದ ಪ್ರತಿಭಟನೆ, ಏಕೆ?
ಮುಂಬೈ, ಡಿಸೆಂಬರ್ 24: ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಮತ್ತು ದೇನಾ ಬ್ಯಾಂಕ್ ವಿಲೀನ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್(UFBU) ಡಿಸೆಂಬರ್ 26ರಂದು ಬಂದ್, ಮೆರವಣಿಗೆ ಹಮ್ಮಿಕೊಂಡಿದೆ.
UFBUನ ಒಂಭತ್ತು ಒಕ್ಕೂಟ ಸೇರಿದಂತೆ ಆಲ್ ಇಂಡಿಯಾ ಬ್ಯಾಂಕ್ ಸಿಬ್ಬಂದಿ, ನೌಕರರ ಒಕ್ಕೂಟದ 10 ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಬ್ಯಾಂಕುಗಳ ವೀಲಿನದ ಬಳಿಕ ಗ್ರಾಹಕರಿಗೆ ಗೊಂದಲ ಉಂಟಾಗಲಿದೆ. ಜನ ಧನ್, ಮುದ್ರಾ, ವಿಮೆ, ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಸ್ಥಿತಿ ಗತಿ ಬಗ್ಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ, ಈ ವಿಲೀನದಿಂದ ಬ್ಯಾಂಕ್ ಹಾಗೂ ಗ್ರಾಹಕರಿಬ್ಬರಿಗೂ ಅನುಕೂಲಕ್ಕಿಂತ ತೊಂದರೆಯನ್ನು ಉಂಟು ಮಾಡಲಿದೆ.

ಈ ವಿಲೀನ ಪ್ರಕ್ರಿಯೆಯಿಂದ ಬ್ಯಾಡ್ ಲೋನ್ ಸಮಸ್ಯೆಯು ನಿವಾರಣೆ ಆಗುವುದಿಲ್ಲ ಮತ್ತು ದೊಡ್ಡ ಬ್ಯಾಂಕ್ ಗಳನ್ನು ಸೃಷ್ಟಿ ಮಾಡುವುದು ಯಾರಿಗೂ ಒಳಿತಲ್ಲ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ ಅಭಿಪ್ರಾಯ ಪಟ್ಟಿದೆ.
ಸೆಪ್ಟಂಬರ್ ತಿಂಗಳಲ್ಲಿ ಸಾರ್ವಜನಿಕ ವಲಯದ ಮೂರು ಬ್ಯಾಂಕುಗಳನ್ನು ವಿಲೀನಗೊಳಿಸುವುದಾಗಿ, ಕೇಂದ್ರ ಸರಕಾರ ಪ್ರಕಟಿಸಿತ್ತು. ಈ ವಿಲೀನದ ಬಳಿಕ ಎಸ್ಬಿಐ, ಐಸಿಐಸಿಐ ನಂತರ ಮೂರನೇ ಅತಿದೊಡ್ಡ ಬ್ಯಾಂಕಿಂಗ್ ಜಾಲ ಸೃಷ್ಟಿಯಾಗಲಿದೆ.
ಕರ್ನಾಟಕದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯಾ ಬ್ಯಾಂಕ್ ಅನ್ನು ಇತರ ಬ್ಯಾಂಕ್ ಜೊತೆ ವಿಲೀನಗೊಳಿಸುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಮುಂದೇನು ಎಂಬುದು ಸ್ಪಷ್ಟವಿಲ್ಲ: ವಿಲೀನದ ಬಳಿಕ ಬ್ಯಾಂಕಿಗೆ ಹೊಸ ಹೆಸರು ಇಡಬಹುದಾದರೂ ಲೋಗೋ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಅಂದಾಜು ವಿಜಯ ಬ್ಯಾಂಕ್ ನ ಐನೂರು ಶಾಖೆಗಳನ್ನು ಮುಚ್ಚಬಹುದು. ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಕ್ಕೆ ದಕ್ಷಿಣ ಭಾರತದಲ್ಲಿ ಇರುವ ಶಾಖೆಗಳು ಕಡಿಮೆ.
ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್ ಜತೆಗೆ ವಿಜಯ ಬ್ಯಾಂಕ್ ವಿಲೀನ ಆದ ನಂತರವೂ ತನ್ನದೇ ಅಸ್ಮಿತೆ ಉಳಿಸಿಕೊಳ್ಳಲಿದೆ ಎಂದು ಕಾರ್ಯನಿರ್ವಹಣಾ ನಿರ್ದೇಶಕ ಹಾಗೂ ಸಿಇಒ ಆಗಿರುವ ಶಂಕರ್ ನಾರಾಯಣನ್ ಹೇಳಿದ್ದಾರೆ.
ಡಿಸೆಂಬರ್ ತಿಂಗಳ ಅಂತ್ಯಕ್ಕೆ ವಿಲೀನ ಪ್ರಕ್ರಿಯೆ ಅಂತ್ಯಗೊಳಿಸಿ, ಸಂಸತ್ತಿನಲ್ಲಿ(ಜನವರಿ 8ಕ್ಕೆ ಚಳಿಗಾಲದ ಅಧಿವೇಶನ ಮುಕ್ತಾಯ) ಮಂಡಿಸಿ, ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications