ಗೋಧಿ, ತೊಗರಿ ಬೇಳೆ ಮೇಲೆ ಶೇಕಡಾ 10ರಷ್ಟು ಆಮದು ಸುಂಕ
ಈ ಮೊದಲೂ ಗೋಧಿ, ತೊಗರಿ ಬೇಳೆಗೆ ಶೇ. 10ರಷ್ಟು ಆಮದು ಶುಲ್ಕ ವಿಧಿಸಲಾಗುತ್ತಿತ್ತು. ಆದರೆ, ಕಳೆದ ಡಿಸೆಂಬರ್ ನಲ್ಲಿ ದೇಶದಲ್ಲಿ ಗೋಧಿ ಹಾಗೂ ಬೇಳೆಯ ಬೆಲೆ ಹೆಚ್ಚಾಗಿದ್ದರಿಂದ ಆಮದು ಸುಂಕವನ್ನು ತೆಗೆದು ಹಾಕಿತ್ತು.
ನವದೆಹಲಿ, ಮಾರ್ಚ್ 28: ದಿನನಿತ್ಯದ ದಿನಸಿ ಸಾಮಾನುಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವುದರಿಂದ ಕಂಗಾಲಾಗಿರುವ ಜನರಿಗೆ ಈಗ ಯುಗಾದಿ ಮುನ್ನಾ ದಿನ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಇದರಿಂದಾಗಿ, ಗೋಧಿ ಹಾಗೂ ತೊಗರಿ ಬೇಳೆಯ ದರಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ವಿದೇಶಗಳಿಂದ ಆಮದಾಗುವ ಗೋಧಿ ಹಾಗೂ ತೊಗರಿ ಬೇಳೆಗೆ ಶೇ. 10ರಷ್ಟು ಆಮದು ಸುಂಕವನ್ನು ವಿಧಿಸಲು ಕೇಂದ್ರ ಸರ್ಕಾರ ಆದೇಶಿಸಿದ್ದು, ಮಾರ್ಚ್ 28ರಂದೇ ಈ ಆದೇಶ ಜಾರಿಗೆ ಬರಲಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಸಹಾಯಕ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಗೆ ಮಂಗಳವಾರ ತಿಳಿಸಿದ್ದಾರೆ.

ಈ ಮೊದಲೂ ಗೋಧಿ, ತೊಗರಿ ಬೇಳೆಗೆ ಶೇ. 10ರಷ್ಟು ಆಮದು ಶುಲ್ಕ ವಿಧಿಸಲಾಗುತ್ತಿತ್ತು. ಆದರೆ, ಕಳೆದ ಡಿಸೆಂಬರ್ ನಲ್ಲಿ ದೇಶದಲ್ಲಿ ಗೋಧಿ ಹಾಗೂ ಬೇಳೆಯ ಸಂಗ್ರಹ ಇಳಿಮುಖವಾಗಿ, ಬೆಲೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಆಮದು ಸುಂಕವನ್ನು ತೆಗೆದು ಹಾಕಿತ್ತು.
ಇದೀಗ, ದೇಶದಲ್ಲಿನ ಗೋದಾಮುಗಳಲ್ಲಿ ಗೋಧಿ ಹಾಗೂ ತೊಗರಿ ಬೇಳೆಯ ದಾಸ್ತಾನು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಪುನಃ ಸುಂಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸರ್ಕಾರದ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ.
ಜನರಿಗೆ ಹೊರೆ
ಸರ್ಕಾರದ ಈ ನಿರ್ಧಾರ ಜನರ ಮೇಲೆ ಹೊರೆಯಾಗಲಿರುವುದಂತೂ ಖಾತ್ರಿ ಎನ್ನಲಾಗಿದೆ. ಸದ್ಯಕ್ಕೀಗ, ಗೋಧಿ ಪ್ರತಿ ಕೆ.ಜಿ.ಗೆ 30ರಿಂದ 32 ರು. ಇದೆ. ತೊಗರಿ ಬೇಳೆ ಬೆಲೆ 85ರಿಂದ 93 ರು.ವರೆಗೆ ಇದೆ. ಇದೀಗ, ಆಮದು ಸುಂಕ ಹೆಚ್ಚಿಸಿದರೆ ಗ್ರಾಹಕರಿಗೆ ಬಿಸಿ ಬೀಳುವುದಂತೂ ಗ್ಯಾರಂಟಿ ಎನ್ನಲಾಗಿದೆ. ದಾಸ್ತಾನುದಾರರು ದೇಶೀಯವಾಗಲೀ, ವಿದೇಶೀಯಾಗಲೀ ತಮ್ಮಲ್ಲಿರುವ ಎಲ್ಲಾ ದಾಸ್ತಾನಿನ ಬೆಲೆಯನ್ನು ಹೆಚ್ಚಿಸುತ್ತಾರೆ. ಹಾಗಾದಲ್ಲಿ, ಅದು ದಾಸ್ತಾನುದಾರರನ್ನು ದಾಟಿ ವರ್ತಕರ ಮೂಲಕ ಸಾಗಿ ಗ್ರಾಹಕರ ಕೈ ಸೇರುವಷ್ಟರಲ್ಲಿ ಗೋಧಿ ಹಾಗೂ ತೊಗರಿ ಬೇಳೆಯ ಮೌಲ್ಯ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications