ಸಿಡ್ನಿಯಿಂದ ನ್ಯೂಯಾರ್ಕ್ ತನಕ ಡಾಯ್ಚ ಬ್ಯಾಂಕ್ ನಿಂದ 18 ಸಾವಿರ ಉದ್ಯೋಗ ಕಡಿತ
ಜರ್ಮನಿಯ ದೊಡ್ಡ ಬ್ಯಾಂಕ್ ಆದ ಡಾಯ್ಚ ಬ್ಯಾಂಕ್ ಸಿಡ್ನಿಯಿಂದ ನ್ಯೂಯಾರ್ಕ್ ತನಕ ಹದಿನೆಂಟು ಸಾವಿರ ಉದ್ಯೋಗ ಕಡಿತ ಮಾಡಲು ಮುಂದಾಗಿದೆ. ವಿಶ್ವಾದ್ಯಂತ ಇರುವ ದಾಯಿಷ್ ಬ್ಯಾಂಕ್ ಶಾಖೆಗಳಲ್ಲಿ ತೊಂಬತ್ತೆರಡು ಸಾವಿರ ಸಿಬ್ಬಂದಿ ಇದ್ದಾರೆ. ಆ ಪೈಕಿ ಅಮೆರಿಕದ ವಾಲ್ ಸ್ಟ್ರೀಟ್ ನಲ್ಲಿ ಮೂವತ್ತೆಂಟೂವರೆ ಸಾವಿರ ಸಿಬ್ಬಂದಿ ಇದ್ದಾರೆ.
ಡಾಯ್ಚ ಬ್ಯಾಂಕ್ ನಿಂದ ಭಾನುವಾರ ಈ ವಿಚಾರ ತಿಳಿಸಿದ್ದು, ಗ್ಲೋಬಲ್ ಈಕ್ವಿಟೀಸ್ ಯೂನಿಟ್ ಮುಚ್ಚಲು ನಿರ್ಧಾರ ಮಾಡಲಾಗಿದೆ. ಇದರ ಜತೆಗೆ ಕೆಲವು ಸ್ಥಿರ ಆದಾಯ ಕಾರ್ಯ ಚಟುವಟಿಕೆಗಳನ್ನು ಸಹ ನಿಲ್ಲಿಸಲಿದೆ. ಅಮೆರಿಕದಲ್ಲಿ ಲಿಸ್ಟ್ ಆಗಿರುವ ಬ್ಯಾಂಕ್ ನ ಷೇರುಗಳು ಹಾಗೂ ಬಾಂಡ್ ಗಳು ಸಹ ಅನಿಶ್ಚಿತತೆಯ ಕಾರಣಕ್ಕೆ ಕುಸಿತ ಕಂಡಿವೆ.
ಡಾಯ್ಚ ಬ್ಯಾಂಕ್ ಭವಿಷ್ಯದಲ್ಲಿ ಉತ್ತಮ ಪ್ರಗತಿ ದಾಖಲಿಸುತ್ತದೆ ಎಂದು ಕೆಲವು ವಿಶ್ಲೇಷಕರು ಅಭಿಪ್ರಾಯ ಪಟ್ಟರೆ, ಆ ಅವಕಾಶ ಎಲ್ಲಿದೆ ಎಂಬುದಕ್ಕೆ ಉತ್ತರ ದೊರೆಯುತ್ತಿಲ್ಲ ಎಂದು ಕೆಲವು ವಿಶ್ಲೇಷಕರು ಹೇಳಿದ್ದಾರೆ. ಬ್ಯಾಂಕ್ ನ ಭವಿಷ್ಯದ ಕ್ರೆಡಿಟ್ ರೇಟಿಂಗ್ ಬಗ್ಗೆ ಮಾತನಾಡಿರುವ ರೇಟಿಂಗ್ ಏಜೆನ್ಸಿ ಫಿಚ್, ಭವಿಷ್ಯದ ಯೋಜನೆಗಳನ್ನು ಡಾಯ್ಚ ಬ್ಯಾಂಕ್ ಹೇಗೆ ಅನುಷ್ಠಾನಕ್ಕೆ ತರುತ್ತದೆ ಎಂಬುದರ ಮೇಲೆ ರೇಟಿಂಗ್ ಅವಲಂಬಿತ ಆಗಲಿದೆ ಎಂದಿದ್ದಾರೆ.

ಬ್ಯಾಂಕ್ ಗೆ ಮತ್ತೆ ಹೊಸ ರೂಪ ನೀಡಲು ದೊಡ್ಡ ಸಂಖ್ಯೆಯಲ್ಲಿ ಸಿಬ್ಬಂದಿ ಕಡಿತ, ಪ್ರಮುಖ ನಾಯಕತ್ವ ಬದಲಾವಣೆ ಬಹಳ ಮುಖ್ಯ ಎಂದು ಹೇಳಲಾಗಿದೆ. ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರುವುದೇ ಸವಾಲು ಎಂದು ಮೂಡೀಸ್ ರೇಟಿಂಗ್ ಏಜೆನ್ಸಿ ತಿಳಿಸಿದೆ.
ಈ ವಿಚಾರ ತಿಳಿಸಲು ಅಮೆರಿಕದ ವಾಲ್ ಸ್ಟ್ರೀಟ್ ನಲ್ಲಿ ಇರುವ ಬ್ಯಾಂಕ್ ನ ಕೆಫಟೇರಿಯಾಗೆ ನೂರಾರು ಸಂಖ್ಯೆಯ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಡಾಯ್ಚ ಬ್ಯಾಂಕ್, ತೀವ್ರ ಸ್ಪರ್ಧೆಯ ಭಾರ, ನಿಯಮಾವಳಿಗಳ ತನಿಖೆ ಹಾಗೂ ವ್ಯಾಜ್ಯದಲ್ಲಿ ಸಿಲುಕಿ ನಲುಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications