ಸೆಬಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ಸಹಾರಾ ಗ್ರೂಪ್
ನವದೆಹಲಿ, ಡಿಸೆಂಬರ್ 03: ಸಹಾರಾ ಸಂಘಟನೆಯ ಮುಖ್ಯಸ್ಥ ಸುಬ್ರೊತೊ ರಾಯ್ ಮತ್ತು ಅವರ ಎರಡು ಕಂಪೆನಿಗಳು 62,600 ಕೋಟಿ ರೂ. (8.4 ಬಿಲಿಯನ್ ಡಾಲರ್) ಠೇವಣಿ ಇಡಲು ಕೇಳಿದ್ದ ಸೆಬಿ ವಿರುದ್ಧ, ಸಹರಾ ಇಂಡಿಯಾ ಗ್ರೂಪ್ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.
ಸಹಾರಾ ಕಂಪನಿಯಿಂದ 62,600 ಕೋಟಿ ರೂಪಾಯಿ ಠೇವಣಿ ಕೇಳುತ್ತಿರುವ ಸೆಬಿ ಕ್ರಮ ಸರಿಯಿಲ್ಲ ಮತ್ತು ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ. ಸೆಬಿ ಸುಪ್ರೀಂಕೋರ್ಟ್ ನ ದಾರಿ ತಪ್ಪಿಸಿದೆ ಮತ್ತು ಸಹಾರಾ ವಿರುದ್ಧ ಸಾರ್ವಜನಿಕರಲ್ಲಿ ಆಕ್ರೋಶ ಮೂಡುವಂತೆ ಮಾಡಿದೆ ಎಂದು ಸಹಾರಾ ತನ್ನ ಅರ್ಜಿಯಲ್ಲಿ ಆಕ್ಷೇಪಿಸಿದೆ.
2012 ಮತ್ತು 2015 ರ ನ್ಯಾಯಾಲಯದ ಆದೇಶಗಳ ಪ್ರಕಾರ ಹೂಡಿಕೆದಾರರಿಂದ ಸಂಗ್ರಹಿಸಿದ ಸಂಪೂರ್ಣ ಮೊತ್ತವನ್ನು ಶೇ. 15ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ಠೇವಣಿ ಇಡಲು ಸಹಾರಾ ವಿಫಲವಾಗಿದೆ ಎಂದು ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.

ಆದರೆ ಸೆಬಿ ತನ್ನ ಲೆಕ್ಕಾಚಾರದಲ್ಲಿ ಬಡ್ಡಿ ಮೊತ್ತವನ್ನು ಕೂಡಾ ಸೇರಿಸಿದೆ ಎಂದು ಸಹಾರಾ ಆರೋಪಿಸಿದೆ. ''ಸೆಬಿ ಹಾಗೂ ಸಹಾರಾ ಮರುಪಾವತಿ ಖಾತೆಯಲ್ಲಿ ಇರಬೇಕಾದ 24,029.73 ಕೋಟಿ ರೂಪಾಯಿ ಬದಲಿಗೆ ಸದ್ಯ 22,500 ಕೋಟಿ ರೂಪಾಯಿ ಮಾತ್ರ ಇದೆ. ಆದ್ದರಿಂದ ಸಹಾರಾ ಕೇವಲ 1,529 ಕೋಟಿ ರೂ. ಪಾವತಿಸಬೇಕಿದೆ '' ಎಂದು ಹೇಳಿದೆ.
ಎಂಟು ವರ್ಷಗಳಿಗಿಂತ ಹೆಚ್ಚು ಕಾಲ ಕಳೆದರೂ, ಸೆಬಿ 3.03 ಕೋಟಿ ಹೂಡಿಕೆದಾರರ ಪರಿಶೀಲನೆ ಮತ್ತು ಮರುಪಾವತಿಯನ್ನು ನಡೆಸಿಲ್ಲ. ಇದು ಹೂಡಿಕೆದಾರರ ಹಿತಾಸಕ್ತಿ ಮತ್ತು ಸೆಬಿ-ಸಹಾರಾ ವಿವಾದ ಪರಿಹಾರಕ್ಕೆ ಮುಖ್ಯವಾಗಿದೆ ಎಂದು ಎರಡು ಕಂಪನಿಗಳು ತಿಳಿಸಿವೆ.
ಆದರೆ ಬಡ್ಡಿಯೊಂದಿಗೆ ಸಂಗ್ರಹಿಸಿದ ಸಂಪೂರ್ಣ ಮೊತ್ತವನ್ನು ಠೇವಣಿ ಮಾಡುವ ಬಗ್ಗೆ ನ್ಯಾಯಾಲಯವು ಹೊರಡಿಸಿದ ವಿವಿಧ ಆದೇಶಗಳನ್ನು ಸಂಸ್ಥೆಗಳಿಂದ "ಸಂಪೂರ್ಣ ಉಲ್ಲಂಘನೆ" ಯಾಗಿವೆ ಎಂದು ಸೆಬಿ ಹೇಳಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications