2ಜಿ ಹಗರಣ ತೀರ್ಪು ಪ್ರಕಟ, ಟೆಲಿಕಾಂ ಕಂಪನಿ ಷೇರುಗಳು ಜಿಗಿತ
ಬೆಂಗಳೂರು, ಡಿಸೆಂಬರ್ 21: ಬಹುಕೋಟಿ 2ಜಿ ತರಂಗಗುಚ್ಛ ಹಂಚಿಕೆ ಪ್ರಕರಣದ ತೀರ್ಪು ಗುರುವಾರದಂದು ಪ್ರಕಟಗೊಂಡಿದೆ. ಅಂದಿನ ಟೆಲಿಕಾಂ ಸಚಿವ ಎ.ರಾಜಾ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಸುದ್ದಿ ಹಬ್ಬುತ್ತಿದ್ದಂತೆ ಷೇರುಪೇಟೆಯಲ್ಲಿ ಟೆಲಿಕಾಂ ಷೇರುಗಳ ಜಿಗಿತ ಕಂಡು ಬಂದಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾ. ಓ ಪಿ ಸೈನಿ ಅವರು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಗುರುವಾರದಂದು ಆದೇಶ ಹೊರಡಿಸುತ್ತಿದ್ದಂತೆ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕ ಎ. ರಾಜಾ, ಎಂ ಕರುಣಾನಿಧಿ ಅವರ ಪುತ್ರಿ ಕನ್ನಿಮೋಳಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ.

ಇತ್ತ ಷೇರುಪೇಟೆಯಲ್ಲಿ ಈ ಕಂಪನಿಗಳ ಷೇರುಗಳು ಏರಿಕೆ ಕಂಡವು: ಯುನಿಟೆಕ್ ಲಿಮಿಟೆಡ್ ಶೇ20 ರಷ್ಟು, ಡಿಬಿ ರಿಯಾಲ್ಟಿ ಲಿಮಿಟೆಡ್ ಶೇ 20, ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ಶೇ 13.37, ಸನ್ ಟಿವಿ ನೆಟ್ವರ್ಕ್ ಲಿಮಿಟೆಡ್ ಶೇ 6, ಐಡಿಯಾ ಸೆಲ್ಯುಲಾರ್ ಲಿಮಿಟೆಡ್ ಶೇ3 ಹಾಗೂ ಭಾರ್ತಿ ಏರ್ ಟೆಲ್ ಲಿಮಿಟೆಡ್ ಶೇ 0.2ರಷ್ಟು ಏರಿಕೆಯಾಗಿದೆ.
2008ರಲ್ಲಿ 122 ಲೈಸನ್ಸ್ ಗಳು ಹಂಚಿಕೆಯಾಗಿದ್ದು, ನಾರ್ವೆಯ ಟೆಲ್ನಾರ್ ಎಎಸ್ಎ, ಯುಎಇಯ ಎಟಿಸಲಾಟ್, ರಷ್ಯಾದ ಎಎಫ್ ಕೆ ಸಿಸ್ಟೆಮಾ ಕೂಡಾ ಫಲಾನುಭವಿಗಳಾಗಿವೆ. ಇದಲ್ಲದೆ ರಾಜಾ ಅವರಿಂದ ಸ್ವಾನ್ ಟೆಲಿಕಾಂ, ವಿಡಿಯೋಕಾನ್, ಎಸ್ ಟೆಲ್ ಹಾಗೂ ಏರ್ ಸೆಲ್ ಕಂಪನಿಗೂ ಲಾಭವಾಗಿದೆ.
ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ಅವರು 2ಜಿ ಹಗರಣದ ಮೊತ್ತ 1.76 ಲಕ್ಷ ಕೋಟಿ ರುಪಾಯಿ - ಎಂದು ವರದಿ ನೀಡಿದ್ದರು. ಆದರೆ, ಈ ಹಗರಣದಿಂದ ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟದ ಮೊತ್ತ 30,000 ಕೋಟಿ ರು ಎಂದು ಸಿಬಿಐ ವರದಿ ನೀಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications