ಕೇಂದ್ರ ಸರ್ಕಾರದಿಂದ ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಸಾಧ್ಯತೆ, ಲೆಕ್ಕಾಚಾರ ಹೇಗೆ?
ನವದೆಹಲಿ, ಅಕ್ಟೋಬರ್ 13: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಶೇಕಡಾ 4ರಷ್ಟು ತುಟ್ಟಿಭತ್ಯೆ ಹೆಚ್ಚಳವನ್ನು ಘೋಷಿಸಬಹುದು ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲವಾದರೂ ಒಮ್ಮೆ ಹೆಚ್ಚಳ ಘೋಷಣೆಯಾದರೆ, ಜುಲೈ 1 ರಿಂದ ಇದು ಜಾರಿಯಾಗುವ ಸಾಧ್ಯತೆಯಿದೆ. ಬಹುನಿರೀಕ್ಷಿತ ಘೋಷಣೆ ಅಕ್ಟೋಬರ್ನಲ್ಲಿ ಬರಲಿದೆ ಎಂದು ಭಾವಿಸಲಾಗಿದೆ. ಶೇಕಡಾ 4 ರಷ್ಟು ಡಿಎ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರಿಗೆ ಭಾರಿ ವೇತನ ಹೆಚ್ಚಳ ಆಗಲಿದೆ. ಪ್ರಸ್ತುತ ಇರುವ ಡಿಎ 42 ರಿಂದ ಹೆಚ್ಳವು 46 ಕ್ಕೆ ಇರುತ್ತದೆ ಎಂದು ತಿಳಿದು ಬಂದಿದೆ.

ಡಿಎ ಹೇಗೆ ಲೆಕ್ಕ ಹಾಕಲಾಗುತ್ತದೆ?
ಮೂಲ ವೇತನದ ಶೇಕಡಾವಾರು ಪ್ರಕಾರ ಡಿಎ ಅನ್ನು ಲೆಕ್ಕಹಾಕಲಾಗುತ್ತದೆ. ಕೇಂದ್ರ ಸರ್ಕಾರಿ ನೌಕರ ವೇತನವನ್ನು ಲೆಕ್ಕಾಚಾರ ಮಾಡಲು ಸೂತ್ರವು ತುಟ್ಟಿಭತ್ಯೆ ಶೇಕಡಾ = ((AICPI (BASE ವರ್ಷ 2001=100) ಕಳೆದ 12 ತಿಂಗಳುಗಳ ಸರಾಸರಿ -115.76) / 115.76)* 100 ಆಗಿರುತ್ತದೆ.
ಎಷ್ಟು ಸಂಬಳ ಹೆಚ್ಚಾಗುತ್ತದೆ?
18,000 ರೂ.ಗಳ ಕನಿಷ್ಠ ಮೂಲ ವೇತನ ಹೊಂದಿರುವ ಉದ್ಯೋಗಿಗೆ ಪ್ರಸ್ತುತ 42 ಶೇಕಡಾ ಡಿಎ 7,560 ರೂಪಾಯಿಗಳ ಮಾಸಿಕ ಹೆಚ್ಚಳವನ್ನು ಪಾವತಿಸಲಾಗುತ್ತದೆ. ಒಮ್ಮೆ ಡಿಎ 46 ಪರ್ಸೆಂಟ್ ಹೆಚ್ಚಳವಾದರೆ ಈ ಮಾಸಿಕ ಹೆಚ್ಚಳವು ರೂ 8,640 ಕ್ಕೆ ಏರುತ್ತದೆ.
ಇತ್ತೀಚೆಗೆ ಕರ್ನಾಟಕ ಸರ್ಕಾರಿ ಸಚಿವಾಲಯದ ನೌಕರರ ಸಂಘವು ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ 7ನೇ ವೇತನ ಆಯೋಗಕ್ಕೆ ಮನವಿ ಸಲ್ಲಿಸಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ಅವರು 7ನೇ ವೇತನ ಆಯೋಗದ ಮುಖ್ಯಸ್ಥರಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿ ಪಿ ಬಿ ರಾಮಮೂರ್ತಿ, ನಿವೃತ್ತ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ ವನಹಳ್ಳಿ ಮತ್ತು ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸದಸ್ಯ-ಕಾರ್ಯದರ್ಶಿಗಳಾಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications