ಸಿಂಡಿಕೇಟ್ ಬ್ಯಾಂಕಿನಲ್ಲಿ ಸಾವಿರಾರು ಕೋಟಿ ಅವ್ಯವಹಾರ ಬಯಲಿಗೆ!
ನವದೆಹಲಿ, ಮಾರ್ಚ್.09: ಸರ್ಕಾರಿ ಸ್ವಾಮ್ಯದ ಸಿಂಡಿಕೇಟ್ ಬ್ಯಾಂಕಿನಲ್ಲಿ ಸಾವಿರಾರು ಕೋಟಿ ರು ಅವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ರಾಜಸ್ಥಾನದ ಸಿಂಡಿಕೇಟ್ ಬ್ಯಾಂಕಿನ 386ಕ್ಕೂ ಅಧಿಕ ಖಾತೆಗಳನ್ನು ದುರ್ಬಳಕೆ ಮಾಡಿಕೊಂಡು ಸಾವಿರಾರು ಕೋಟಿ ರು ಲೂಟಿ ಮಾಡಲಾಗಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ಸಿಂಡಿಕೇಟ್ ಬ್ಯಾಂಕ್ನ 10 ಶಾಖೆಗಳು ಹಾಗೂ ಕೆಲವು ಬ್ಯಾಂಕ್ ನೌಕರರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ರಾಜಸ್ಥಾನದ ಮೂರು ಬ್ರ್ಯಾಂಚ್ ಗಳ 386 ಖಾತೆಗಳ ಹಣವನ್ನು ನಕಲಿ ಚೆಕ್, ಕ್ರೆಡಿಟ್ ಪತ್ರ ಹಾಗೂ ಎಲ್ ಐಸಿ ಪಾಲಿಸಿ ಮೂಲಕ ದುರ್ಬಳಕೆ ಮಾಡಲಾಗಿದೆ ಎಂದು ಸಿಬಿಐ ವಕ್ತಾರ ದೇವ್ಪ್ರೀತ್ ಸಿಂಗ್ ತಿಳಿಸಿದ್ದಾರೆ.[ವಂಚನೆ: ಸಿಂಡಿಕೇಟ್ ಬ್ಯಾಂಕ್ ಚೇರ್ಮನ್ ಬಂಧನ]

ದೆಹಲಿ ಎನ್ ಸಿಆರ್, ರಾಜಸ್ಥಾನದ ಜೈಪುರ ಹಾಗೂ ಉದಯ್ಪುರಗಳಲ್ಲಿ ಸಿಬಿಐ ದಾಳಿಗಳನ್ನು ನಡೆಸಿದೆ. ನಕಲಿ ಬಿಲ್ಗಳ ಬಳಕೆ ಹಾಗೂ ಅಸ್ತಿತ್ವದಲ್ಲೇ ಇಲ್ಲದಿರುವ ಜೀವವಿಮಾ ಪಾಲಿಸಿಗಳ ವಿರುದ್ಧ ಓವರ್ಡ್ರಾಫ್ಟ್ ಮಿತಿ ಹೇರಿಕೆ, ಈ ವಂಚನಾ ಹಗರಣದಲ್ಲಿ ಒಳಗೊಂಡಿವೆ. ಒಟ್ಟು 5 ಜನ ಕಾರ್ಯಕಾರಿ ಸದಸ್ಯರು, 4 ಜನ ಉದ್ಯಮಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ.
ಜೈಪುರ ಬ್ರಾಂಚಿನ ಪ್ರಧಾನ ವ್ಯವಸ್ಥಾಪಕ ಸತೀಶ್ ಕುಮಾರ್ ಗೋಯಲ್, ಪ್ರದೇಶ ಕಚೇರಿಯ ಡಿಜಿಎಂ ಸಂಜೀವ್ ಕುಮಾರ್, ಮತ್ತೊಂದು ಶಾಖೆಯ ಮುಖ್ಯ ಮ್ಯಾನೇಜರ್ ದೇಶ್ ರಾಜ್ ಮೀನಾ, ಆದರ್ಶ್ ಮಾನಚಂದ, ಅದ್ವೇಶ್ ತಿವಾರಿ ಎಂಬುವರ ಮೇಲೆ ಎಫ್ ಐಆರ್ ಹಾಕಲಾಗಿದೆ. ಸಿಂಡಿಕೇಟ್ ಬ್ಯಾಂಖ್ ಆರೋಪಿತ ಅಧಿಕಾರಿಗಳನ್ನು ಕರ್ತವ್ಯದಿಂದ ತೆಗೆದು ಹಾಕಿದೆ.[ಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ]
ಇವರ ಜೊತೆಗೆ ಉದಯ್ ಪುರ್ ನ ಸಿಎ ಭರತ್ ಬಂಬ್, ಉದ್ಯಮಿ ಪಿಯೂಷ್ ಜೈನ್ ಹಾಗೂ ವಿನೀತ್ ಜೈನ್, ಜೈಪುರದ ಉದ್ಯಮಿ ಶಂಕರ್ ಖಾಂಡೆಲ್ವಾಲ್ ಅವರ ವಿರುದ್ಧ ಕೂಡಾ ಎಫ್ ಐಆರ್ ದಾಖಲಾಗಿದೆ.
2011 ರಿಂದ 2016 ರ ತನಕ ಬೇನಾಮಿ ಹೆಸರಿನಲ್ಲಿ ಎಲ್ ಐಸಿ ಪಾಲಿಸಿ ಮಾಡಿಸಿ ಹಣ ಲೂಟಿ ಮಾಡಿದಾರೆ. ಈ ಅವ್ಯವಹಾರದಲ್ಲಿ ಇನ್ನೂ ಅನೇಕ ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಜಾರಿಯಲ್ಲಿದೆ (ಪಿಟಿಐ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications