ಮಲ್ಯ, ನೀರವ್ ಸೇರಿ 51 ಮಂದಿ ಪರಾರಿ, 17 ಸಾವಿರ ಕೋಟಿ ಬಾಕಿ!
ನವದೆಹಲಿ, ಡಿಸೆಂಬರ್ 04: ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಸುಮಾರು 51 ಮಂದಿ ದೇಶದಿಂದ ಪರಾರಿಯಾಗಿದ್ದು, ಸರಿ ಸುಮಾರು 17, 900 ಕೋಟಿ ರು ಮೊತ್ತ ಬಾಕಿ ಪಾವತಿಸಬೇಕಿದೆ ಎಂದು ಸಂಸತ್ತಿನಲ್ಲಿ ತಿಳಿಸಲಾಗಿದೆ.
ವಿತ್ತ ಸಚಿವಾಲಯದ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಈ ಕುರಿತಂತೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿ, ವಿವಿಧ ರೀತಿಯಲ್ಲಿ ಆರ್ಥಿಕ ಅಪರಾಧ ಎಸಗಿ ದೇಶಭ್ರಷ್ಟ ಎನಿಸಿಕೊಂಡಿರುವವರ ಪಟ್ಟಿಯನ್ನು ನೀಡಿದರು.
ಕೇಂದ್ರ ತನಿಖಾ ಸಂಸ್ಥೆ ಸಿಬಿಐ ನೀಡಿರುವ ಮಾಹಿತಿ ಪ್ರಕಾರ 51 ಮಂದಿ ಮೇಲೆ 66ಕ್ಕೂ ಅಧಿಕ ಪ್ರಕರಣಾಗಳಿವೆ. ಭಾರತ ತೊರೆದು ಬೇರೆ ದೇಶಗಳಲ್ಲಿ ಆಶ್ರಮ ಪಡೆದುಕೊಂಡಿದ್ದಾರೆ. ಈ ಎಲ್ಲಾ ವ್ಯಕ್ತಿಗಳಿಂದ ಸರ್ಕಾರಕ್ಕೆ ಅಂದಾಜು 17,947.11 ಕೋಟಿ ರು ಬಾಕಿ ಮೊತ್ತ ಸಿಗಬೇಕಿದೆ ಎಂದು ಸಚಿವರು ಹೇಳಿದರು.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಅನುತ್ಪಾದಕ ಆಸ್ತಿಗಳನ್ನು ಗುರುತಿಸತೊಡಗಿದ್ದು, ನಷ್ಟದ ಮೊತ್ತವನ್ನು ಅಂದಾಜಿಸಲಾಗುತ್ತಿದೆ ಎಂದರು.
ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಈ ಎಲ್ಲಾ ಪರಾರಿಯಾದವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಭಾರತ ಹಾಗೂ ವಿದೇಶದ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟ ನಡೆಸಿವೆ. ಇದಲ್ಲದೆ ಕೇಂದ್ರ ಪರೋಕ್ಷ ತೆರಿಗೆ ಹಾಗೂ ಸುಂಕ ಬೋರ್ಡ್ ಕೂಡಾ 6 ಮಂದಿಯನ್ನು ಆರ್ಥಿಕ ಅಪರಾಧಿಗಳು ಎಂದು ಗುರುತಿಸಿದ್ದು, ದೇಶದಿಂದ ಅಕ್ರಮವಾಗಿ ಪರಾರಿಯಾಗಿದ್ದಾರೆ.
ವಿದೇಶದಿಂದ ಆರೋಪಿಗಳನ್ನು ಕರೆ ತರುವ ಪ್ರಕ್ರಿಯೆ ಜಾರಿಯಲ್ಲಿದ್ದು, ಹಲವರಿಗೆ ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಸಿಬಿಐಸಿಯಿಂದ ಎರಡು, ಜಾರಿ ನಿರ್ದೇಶನಾಲಯದಿಂದ 8 ಮಂದಿಯನ್ನು ಭಾರತಕ್ಕೆ ಕರೆ ತರಲು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications