ದಸರಾ ಹಬ್ಬಕ್ಕೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಕೊಡುಗೆ ನೀಡಲಿದೆಯಾ ಕೇಂದ್ರ ಸರ್ಕಾರ?
ಕೇಂದ್ರ ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿರುವ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಮಯ ಹತ್ತಿರವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಶೇಕಡ 4 ರಷ್ಟು ಡಿಎ ಹೆಚ್ಚಳ ನೀಡಲಾಗುತ್ತದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಒಟ್ಟು 38 ಪ್ರತಿಶತ ಡಿಎ ಹೆಚ್ಚಳವಾದಂತಾಗುತ್ತದೆ.
ಇತ್ತೀಚಿನ ಹಣದುಬ್ಬರ ಡೇಟಾವನ್ನು ಆಧರಿಸಿ ಈ ಅಂಕಿಅಂಶವನ್ನು ನಿರೀಕ್ಷಿಸಲಾಗಿದೆ. ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕ (AICPI) 129 ಕ್ಕಿಂತ ಹೆಚ್ಚಿದೆ. ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕ ಡೇಟಾದ ಆಧಾರದ ಮೇಲೆ ತುಟ್ಟಿಭತ್ಯೆ ಹೆಚ್ಚಳವನ್ನು ನಿರ್ಧರಿಸಲಾಗುತ್ತದೆ ಮತ್ತು 2022 ರ ಜನವರಿಯಲ್ಲಿ ಕೇಂದ್ರ ಸರ್ಕಾರಿ ನೌಕರರು ಶೇಕಡ 3ರಷ್ಟು ತುಟ್ಟಿಭತ್ಯೆ ಹೆಚ್ಚಳ ಪಡೆದಿದ್ದರು. ಈಗ ಅದು ಶೇಕಡ 4ಕ್ಕೆ ಹೆಚ್ಚಾಗುತ್ತದೆ.
ನಿರೀಕ್ಷಿತ ಡಿಎ ಅಂಕಿಅಂಶವನ್ನು ಆಧರಿಸಿದ ಲೆಕ್ಕಾಚಾರಗಳ ಪ್ರಕಾರ, ರೂ 31,550 ರ ಮೂಲ ವೇತನ ಹೊಂದಿರುವ ಉದ್ಯೋಗಿಗಳು ವಾರ್ಷಿಕವಾಗಿ ರೂ 15,144 ಹೆಚ್ಚಳವನ್ನು ಪಡೆಯುತ್ತಾರೆ. ಮತ್ತೊಂದೆಡೆ, ಗರಿಷ್ಠ 56,900 ರೂಗಳ ಮೂಲ ವೇತನವು ವಾರ್ಷಿಕವಾಗಿ ರೂ 27,312 ಹೆಚ್ಚಳವನ್ನು ಪಡೆಯುತ್ತದೆ ಎಂದು ವರದಿಯಾಗಿದೆ.

ತುಟ್ಟಿಭತ್ಯೆ ಹೆಚ್ಚಳ ಘೋಷಣೆ ಯಾವಾಗ?
ಕೇಂದ್ರ ಉದ್ಯೋಗಿಗಳ ಕಾಯುವಿಕೆ ಮುಂದುವರಿದಿದ್ದು, ಮುಂದಿನ ಸುತ್ತಿನ ಕ್ಯಾಬಿನೆಟ್ ಸಭೆಗಳ ನಂತರ ಘೋಷಣೆ ಮಾಡಬಹುದೆಂದು ಇತ್ತೀಚಿನ ವರದಿಗಳು ಖಚಿತಪಡಿಸಿವೆ.
ಸೆಪ್ಟೆಂಬರ್ ಅಂತ್ಯದಲ್ಲಿ ನವರಾತ್ರಿಯ ಸಂಭ್ರಮ ಆರಂಭವಾಗಲಿದ್ದು, ಆ ವೇಳೆಗೆ ಅಧಿಕೃತ ಘೋಷಣೆ ಬರಬಹುದು. ಕೇಂದ್ರ ಸರ್ಕಾರಿ ನೌಕರರು ತಮ್ಮ ಸೆಪ್ಟೆಂಬರ್ ಪಾವತಿಗಳೊಂದಿಗೆ ಡಿಎ ಹೆಚ್ಚಳದ ಪ್ರಯೋಜನಗಳನ್ನು ಪಡೆಯಬಹುದು ಎಂದು ವರದಿಯಾಗಿದೆ.

ಡಿಎ ಬಾಕಿ ಬಿಡುಗಡೆ ಬಗ್ಗೆ ಕೇಂದ್ರದ ಸ್ಪಂದನೆ ಇಲ್ಲ
18 ತಿಂಗಳ ಅವಧಿಯ ಡಿಎ ಬಾಕಿ ಬಿಡುಗಡೆ ಮಾಡಬೇಕೆಂಬ ಕೇಂದ್ರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗೆ ಇನ್ನೂ ಯಾವುದೇ ಸ್ಪಂದನೆ ದೊರೆತಿಲ್ಲ. ಆದರೆ, ಕೇಂದ್ರ ನೌಕರರು ತಮ್ಮ ಬೇಡಿಕೆ ಮುಂದುವರೆಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಉಲ್ಬಣದ ಮಧ್ಯೆ ಜನವರಿ 2020 ಮತ್ತು ಜೂನ್ 2021 ರ ನಡುವೆ ತುಟ್ಟಿಭತ್ಯೆ ಹೆಚ್ಚಳವನ್ನು ಸ್ಥಗಿತಗೊಳಿಸಲಾಗಿದೆ. ಸ್ಥಗಿತಗೊಂಡ ಡಿಎ ಬಾಕಿ ನೀಡುವ ಬಗ್ಗೆ ಯಾವುದೇ ನಿಲುವು ಇಲ್ಲ ಎಂದು ಹೇಳಲಾಗಿದೆ.

ನೌಕರರಿಂದ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲೇಖ
ನೌಕರರು ತಮ್ಮ ನಿಲುವಿನಲ್ಲಿ ದೃಢವಾಗಿದ್ದಾರೆ. ಡಿಎ ಸ್ಥಗಿತ ಅವಧಿಯ ಬಾಕಿಯನ್ನು ಪರಿಗಣಿಸಬೇಕು ಎಂದು ಜೆಸಿಎಂ ರಾಷ್ಟ್ರೀಯ ಮಂಡಳಿ ಅಭಿಪ್ರಾಯಪಟ್ಟಿದೆ ಎಂದು ಸಿಬ್ಬಂದಿ ವಿಭಾಗ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಈ ಹಿಂದೆ ತಿಳಿಸಿದ್ದರು. ಸರಕಾರ ಸಂಧಾನದ ಮೂಲಕ ಇತ್ಯರ್ಥಕ್ಕೆ ಮುಂದಾಗಬೇಕು ಎಂಬುದು ನೌಕರರು ನಿರೀಕ್ಷೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ, ಜೆಸಿಎಂ ಕಾರ್ಯದರ್ಶಿ ಸರ್ಕಾರಕ್ಕೆ ಇತ್ತೀಚಿನ ಅಧಿಕೃತ ಪತ್ರದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಾರೆ. ಡಿಎ ವೇತನದ ಒಂದು ಭಾಗವಾಗಿದೆ ಮತ್ತು ವೇತನದಲ್ಲಿ ಯಾವುದೇ ವಿಳಂಬವು ಬಡ್ಡಿಯನ್ನು ಪಾವತಿಸಬೇಕಾಗುತ್ತದೆ ಮತ್ತು ಅದು ನೌಕರರ ಹಕ್ಕು ಎಂದು ಸೂಚಿಸಲಾಗಿದೆ. ಬಾಕಿ ಪಾವತಿ ವಿಧಾನದ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಲು ನೌಕರರ ಕಡೆಯವರು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳ?
7ನೇ ವೇತನ ಆಯೋಗದ ಪ್ರಕಾರ ತುಟ್ಟಿಭತ್ಯೆ(ಡಿಎ) ಶೇಕಡಾ 4 ರಷ್ಟು ಹೆಚ್ಚಾದರೆ ವೇತನದ ಲೆಕ್ಕಾಚಾರ ಹೀಗಿರಲಿದೆ. ಒಂದು ವೇಳೆ ನೌಕರನ ಮೂಲ ವೇತನ 56,900 ರುಪಾಯಿ ಆಗಿದ್ದರೆ ಪ್ರಸ್ತುತ ನೌಕರ 19,346 ರುಪಾಯಿ ತುಟ್ಟಿಭತ್ಯೆ ಪಡೆಯುತ್ತಿರುತ್ತಾರೆ. ಶೇಕಡ 4 ರಷ್ಟು ತುಟ್ಟಿಭತ್ಯೆ ಹೆಚ್ಚಳದ ನಂತರ 21,622 ರುಪಾಯಿ ಪಡೆಯಲಿದ್ದಾರೆ.
ಶೇಕಡಾ 4 ರಷ್ಟು ತುಟ್ಟಿಭತ್ಯೆ ಹೆಚ್ಚಳದಿಂದ ವೇತನ 2,276 ರೂಪಾಯಿ ಹೆಚ್ಚಳವಾಗಲಿದೆ. ವಾರ್ಷಿಕವಾಗಿ ವೇತನ 27,312 ರೂಪಾಯಿ ಹೆಚ್ಚಳವಾಗಲಿದೆ. ಸುಮಾರು 50 ಲಕ್ಷ ಕೇಂದ್ರ ಸರ್ಕಾರದ ನೌಕರರು ಪ್ರಯೋಜನ ಪಡೆಯಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications