ಎಡಿಡಿ ಜೊತೆ ಯುಎಇ ಸಂಸ್ಥೆ ಒಪ್ಪಂದ, ಎಡಿಡಿಗೆ ಭೂಮಿ ಮಂಜೂರು
ಬೆಂಗಳೂರು, ಜೂನ್ 4: ಎಡಿಡಿ ಎಂಜಿನಿಯರಿಂಗ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ಮಾತೃ ಸಂಸ್ಥೆಯಾದ ಎಡಿಡಿ ಎಂಜಿನಿಯರಿಂಗ್ ಜಿಎಂಬಿಎಚ್ ಯುಎಇ ಮೂಲದ ರಕ್ಷಣಾ ಕ್ಷೇತ್ರದ ಉದ್ಯಮವಾದ ಎಡಿಜಿಇ ಗ್ರೂಪ್ ಪಿಜೆಜಿಇ ಜತೆಯಲ್ಲಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಿದೆ.
ರಕ್ಷಣಾ ವೈಮಾನಿಕ ಕ್ಷೇತ್ರದಲ್ಲಿನ ನಿರ್ವಹಣೆ, ದುರಸ್ತಿ ಮತ್ತು ಓವರ್ ಹೌಲ್ (ಎಂಆರ್ ಒ)ದ ಕಾರ್ಯಕ್ಷಮತೆಯನ್ನು ಸುಧಾರಣೆ ಮಾಡುವುದು ಮತ್ತು ಉತ್ಪಾದನೆಯನ್ನು ಹೆಚ್ಚಳ ಮಾಡುವ ನಿರ್ಣಾಯಕ ತಂತ್ರಜ್ಞಾನವನ್ನು ಹಂಚಿಕೊಳ್ಳುವ ಸಂಬಂಧ ಈ ಒಪ್ಪಂದ ಮಾಡಿಕೊಳ್ಳಲಾಗಿದೆ.
ಈ ಒಪ್ಪಂದವು ಎರಡು ವರ್ಷಗಳವರೆಗೆ ಜಾರಿಯಲ್ಲಿರಲಿದ್ದು, ಎಡಿಡಿ ಎಂಜಿನಿಯರಿಂಗ್ ಪರವಾಗಿ ನೊರ್ಬರ್ಟ್ ಕ್ರೆಲ್ಲರ್, ವರ್ನರ್ ಗ್ರೆಕ್ಸಾ, ಅಲೆಕ್ಸಾಂಡರ್ ಲೊಕ್ಟೆವ್ ಹಾಗೂ ಇಡಿಜಿಇ ಪರವಾಗಿ ಮೊಹ್ಮದ್ ಅಲ್ ರಶೀದ್ ಮತ್ತು ಇತರರು ಒಪ್ಪಂದಕ್ಕೆ ಸಹಿ ಹಾಕಿದರು.

ಎಡಿಜಿಇ ಒಂದು ಖಾಸಗಿ ಸಂಸ್ಥೆಯಾಗಿದ್ದು ಅಬು ಧಾಬಿಯಲ್ಲಿ ತನ್ನ ಕೇಂದ್ರ ಕಚೇರಿಯನ್ನು ಹೊಂದಿದೆ ಮತ್ತು ವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿದೆ.
ಎಡಿಡಿಗೆ ಭೂಮಿ ಮಂಜೂರು
ಎಡಿಡಿ ಎಂಜಿನಿಯರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ತನ್ನ ಉತ್ಪಾದನಾ ಘಟಕ ಸ್ಥಾಪನೆಗೆ ತುಮಕೂರು ಮಶಿನ್ ಟೂಲ್ಸ್ ಪಾರ್ಕ್ ನಲ್ಲಿ ಕೆಐಎಡಿಬಿ ಭೂಮಿಯನ್ನು ಮಂಜೂರು ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕಂಪನಿಯ ನಿರ್ದೇಶಕ ಗಿರೀಶ್ ಲಿಂಗಣ್ಣ ಅವರಿಗೆ ಕೆಐಎಡಿಬಿ ಅಧಿಕಾರಿಗಳು ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಿದರು. ಇದಲ್ಲದೇ, ಕಂಪನಿಯು ದೇವನಹಳ್ಳಿಯಲ್ಲಿನ ಏರೋಸ್ಪೇಸ್ ಪಾರ್ಕ್ ನಲ್ಲಿ ಭೂಮಿ ಮಂಜೂರಾತಿಗಾಗಿ ಕಾಯುತ್ತಿದೆ. ಸರ್ಕಾರದಿಂದ ಭೂಮಿಯನ್ನು ಪಡೆದುಕೊಳ್ಳಲು ಕಂಪನಿಯು ಕಳೆದ ಎರಡು ವರ್ಷಗಳಿಂದ ಹರಸಾಹಸಪಟ್ಟಿತ್ತು.

ಮೊದಲಿಗೆ ನೆಲಮಂಗಲ ಕೈಗಾರಿಕಾ ಪ್ರದೇಶದಲ್ಲಿ ಭೂಮಿ ನೀಡುವಂತೆ ಕೆಎಸ್ಎಸ್ಐಡಿಸಿಗೆ ಮನವಿ ಮಾಡಿತ್ತು. ಆದರೆ, ಕೆಎಸ್ಎಸ್ಐಡಿಸಿ ಈ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲೇ ಇಲ್ಲ. ಹಲವಾರು ಪ್ರಯತ್ನಗಳ ನಂತರ ಇದೊಂದು ರಾಷ್ಟ್ರೀಯ ಮಹತ್ವದ ಯೋಜನೆ ಆಗಿದೆ ಎಂಬುದನ್ನು ಪರಿಗಣಿಸಿದ ರಾಜ್ಯ ಸರ್ಕಾರದ ಅಧಿಕಾರಿಗಳು ಭೂಮಿಗಾಗಿ ಕೆಐಎಡಿಬಿಗೆ ಅರ್ಜಿ ಸಲ್ಲಿಸುವಂತೆ ಸಲಹೆ ಮಾಡಿದ್ದರು.
ತೇಜಸ್ ವಿಮಾನಕ್ಕೆ ಬಿಡಿಭಾಗ
ಎಡಿಡಿ ಎಂಜಿನಿಯರಿಂಗ್ ಎಚ್ಎಎಲ್ ತಯಾರಿಸುವ ತೇಜಸ್ ಯುದ್ಧ ವಿಮಾನ ಮತ್ತು ಇದರ ಇನ್ನಿತರೆ ವರ್ಗಗಳಿಗೆ ಕಟ್ಟಿಂಗ್ ಟೂಲ್ ಸಲೂಶನ್ಸ್ ಅನ್ನು ಪೂರೈಕೆ ಮಾಡಲಿದೆ.

ಎಡಿಜಿಇ(ಎಡ್ಜ್) ಗ್ರೂಪ್ ಪಿಜೆಜಿಇ ಸಂಸ್ಥೆಯು 2019 ರಲ್ಲಿ ಆರಂಭವಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಈ ಸಂಸ್ಥೆಯ ಮಾಲೀಕತ್ವವನ್ನು ಎಮಿರಾಟಿ ಮೂಲದ ಉದ್ದಿಮೆಗಳು ಹೊಂದಿವೆ. ಸೇವಾವಲಯ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಿಗೆ ಈ ಸಂಸ್ಥೆಯು ಹೂಡಿಕೆ ಮಾಡುತ್ತದೆ. ಇದಕ್ಕೆ ರಾಜ್ಯ ಮಾಲೀಕತ್ವದ ಉದ್ದಿಮೆ (ಎಸ್ಒಇ) ಮಾನ್ಯತೆಯನ್ನು ನೀಡಲಾಗಿದೆ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications