ಜಿಎಸ್ ಟಿ ದರ ಮುದ್ರಿಸದಿದ್ದರೆ ತಯಾರಕರಿಗೆ ಜೈಲು!
ಜಿಎಸ್ ಟಿ ಅನ್ವಯಿಸುವ ಎಲ್ಲಾ ಸಾಮಗ್ರಿಗಳ ಮೇಲೆ ಬೆಲೆ ಮುದ್ರಿಸುವಂತೆ ಕೇಂದ್ರ ಸರ್ಕಾರದ ಆದೇಶ. ದೇಶದ ಎಲ್ಲಾ ತಯಾರಕರಿಗೆ, ಮಾರಾಟಗಾರರಿಗೆ ಆದೇಶ. ತಪ್ಪಿದರೆ ಜೈಲು ಶಿಕ್ಷೆ ಸೇರಿದಂತೆ ಹಲವಾರು ಕಾನೂನು ಕ್ರಮಗಳಿಗೆ ಒಳಪಡಿಸುವ ಎಚ್ಚರಿಕೆ.
ನವದೆಹಲಿ, ಜುಲೈ 7: ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆ ಜಾರಿಗೊಂಡ ನಂತರ ಸರಕುಗಳ ಮೇಲೆ ಪರಿಷ್ಕೃತ ದರ ಎಂದು ಮುದ್ರಿಸಲೇಬೇಕು ಎಂದು ಕೇಂದ್ರ ಸರ್ಕಾರ ತಾಕೀತು ಮಾಡಿದೆ.
ಹೊಸದಾಗಿ ಜಾರಿಗೆ ಬಂದಿರುವ ತೆರಿಗೆ ವ್ಯವಸ್ಥೆಯು ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕೆನ್ನುವ ನಿಟ್ಟಿನಲ್ಲಿ ಗ್ರಾಹಕರ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ಇದರ ಬೆನ್ನಲ್ಲೇ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ, ಪ್ರತಿಯೊಂದು ಉತ್ಪನ್ನಗಳ ಮೇಲೂ ಜಿಎಸ್ ಟಿ ಅನ್ವಯ ಪರಿಷ್ಕೃತ ದರವನ್ನು ಮುದ್ರಿಸಬೇಕು. ಇಲ್ಲವಾದರೆ, ಜೈಲು ಶಿಕ್ಷೆಯಂಥ ಗಂಭೀರ ಕ್ರಮ ಕೈಗೊಳ್ಳಬೇಕಾಗಬಹುದು ಎಂದು ಅದು ಹೇಳಿದೆ.

ಪ್ರತ್ಯೇಕ ಮುದ್ರಣ
ಕಾನೂನುಬದ್ಧ ಮಾಪನ ಕಾಯ್ದೆ 2009ರ ಅಧಿನಿಯಮದ ಪ್ರಕಾರ, ಸಂಸ್ಕರಿಸಲ್ಪಟ್ಟ ಅಥವಾ ಪ್ಯಾಕ್ ಮಾಡಲ್ಪಟ್ಟ ಸರಕುಗಳ ಮೇಲೆ ಗರಿಷ್ಠ ಮಾರಾಟ ದರವನ್ನು (ಎಂಆರ್ಪಿ) ನಮೂದಿಸಬೇಕು. ಈಗ ಜಿಎಸ್ ಟಿ ಬಂದ ಮೇಲೆ ಹಳೆಯ ಹಾಗೂ ಹೊಸ ದರಗಳನ್ನು ಮುದ್ರಿಸಬೇಕಾಗುತ್ತದೆ.

ಹೊಸ ಲೇಬಲ್ ಹಾಕಬೇಕು ಎಂದ ಸರ್ಕಾರ
ಮೂಲ ಎಂಆರ್ಪಿ ಮೇಲೆ ಹೊಸ ದರ ಮುದ್ರಿಸಬಾರದು. ಎರಡನ್ನೂ ಪ್ರತ್ಯೇಕವಾಗಿ ಗುರುತಿಸುವಂತೆ ಹೊಸ ಲೇಬಲ್ ಗಳನ್ನೇ ಮುದ್ರಿಸಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

ನಿಯಮ ತಪ್ಪಿದರೆ ಜೈಲು
ಜಿಎಸ್ಟಿ ಫಲವಾಗಿ ಬೆಲೆ ಕುಸಿತದ ಮರೆ ಮಾಚಿ ಸಾಮಗ್ರಿಗಳನ್ನು ಹೆಚ್ಚು ದರಗಳಿಗೆ ಮಾರುವ ವರ್ತಕರ ವಿರುದ್ಧ ಉಗ್ರ ಕೈಗೊಳ್ಳುವುದಾಗಿಯೂ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಮೋಸ ತಪ್ಪಿಸಲು ಸರ್ಕಾರದ ಕ್ರಮ
ಜನರ ನಿತ್ಯ ಜೀವನಕ್ಕೆ ಉಪಯೋಗವಾಗುವಂಥ ದಿನಬಳಕೆಯ ವಸ್ತುಗಳನ್ನು ಹಾಗೂ ಸರಕು ಸಾಮಗ್ರಿಗಳ ಮೇಲಿನ ತೆರಿಗೆಯನ್ನು ಜಿಎಸ್ ಟಿ ಅಡಿಯಲ್ಲಿ ಇಳಿಸಲಾಗಿದೆ. ಇದರ ಪ್ರಯೋಜನ ನೇರವಾಗಿ ಜನರಿಗೆ ಸಿಗಬೇಕೆಂಬುದು ಸರ್ಕಾರದ ಉದ್ದೇಶ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications