ಮ್ಯಾಗಿ ನ್ಯೂಡಲ್ಸ್ ನಂತರ ಪಾಸ್ತಾಗೆ ನಿಷೇಧದ ಭೀತಿ!
ಬೆಂಗಳೂರು, ನ.28: ನೆಸ್ಲೆ ಸಂಸ್ಥೆಯ ಮ್ಯಾಗಿ ನಿಷೇಧದ ಭೀತಿಯಿಂದ ಇನ್ನೂ ಹೊರ ಬಂದಿಲ್ಲ. ಇದರ ಬೆನ್ನಲ್ಲೇ ನೆಸ್ಲೆ 'ಪಾಸ್ತಾ'ಕ್ಕೂ ಸಂಕಷ್ಟ ಎದುರಾಗಿದೆ. ಉತ್ತರ ಪ್ರದೇಶದ ಆಹಾರ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಟ್ಟ ಪಾಸ್ತಾದಲ್ಲಿ ಸೀಸದ ಅಂಶ ಇರುವುದು ಪತ್ತೆಯಾಗಿದೆ.
ಪಾಸ್ತಾದಲ್ಲಿ ಸೀಸದ ಅಂಶದ ಪ್ರಮಾಣ ಅಗತ್ಯಕ್ಕಿಂತ ಜಾಸ್ತಿ ಇದೆ. ಇದರಿಂದಾಗಿ ಉತ್ತರಪ್ರದೇಶದಲ್ಲಿ 'ಪಾಸ್ತಾ' ನಿಷೇಧಿಸುವ ಸಾಧ್ಯತೆಗಳು ಹೆಚ್ಚಿದೆ.
ರಾಜ್ಯ ಸರ್ಕಾರದ ನಿಯಮದ ಪ್ರಕಾರ 2.5 ಪಿಪಿಎಂನಷ್ಟು ಲೆಡ್ ಬಳಸಬಹುದು. ಆದರೆ, ಪಾಸ್ತಾದಲ್ಲಿ 6 ಪಿಪಿಎಂ ಲೆಡ್ ಅಂಶ ಬಳಕೆ ಮಾಡಲಾಗಿದೆ. ನೆಸ್ಲೆ ಡಿಸ್ಟ್ರಿಬ್ಯೂಟರ್ ಅವರಿಂದಲೇ ಸಂಗ್ರಹಿಸಿಕೊಳ್ಳಲಾದ ಸ್ಯಾಂಪಲ್ಗಳನ್ನು ಜೂನ್ 10ರಂದು ಲಕ್ನೋದ ಆಹಾರ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು ಎಂದು ಹಿರಿಯ ಅಧಿಕಾರಿ ಅರವಿಂದ್ ಯಾದವ್ ತಿಳಿಸಿದ್ದಾರೆ.

ಸಪ್ಟೆಂಬರ್ 2ರಂದೇ ಪರೀಕ್ಷೆಯ ವರದಿ ಬಂದಿದ್ದು, ಇದರಲ್ಲಿ ಸೀಸದ ಅಂಶ ಅಗತ್ಯಕ್ಕಿಂತ ಹೆಚ್ಚಿರುವುದು ಗೊತ್ತಾಗಿದೆ. ಈ ಬಗ್ಗೆ ಕಂಪನಿಗೆ ತಿಳಿಸಲಾಗಿದ್ದು, ಕಂಪನಿ ಯಾವುದೇ ಕ್ರಮಕೈಗೊಂಡಿರುವ ಬಗ್ಗೆ ತಿಳಿಸಿಲ್ಲ. ಬಳಿಕ ಅಕ್ಟೋಬರ್ 12ರಂದು ಕೋರ್ಟ್ನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.
ಪಾಸ್ತಾ ಸೇಫ್ : ಪಾಸ್ತಾದಲ್ಲಿ ಸೀಸದ ಅಂಶ ಹೆಚ್ಚಾಗಿರುವ ಬಗ್ಗೆ ಯಾವುದೇ ದೂರುಗಳು ಬಂದಿರಲಿಲ್ಲ.ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ. ಮಾಕ್ರೋನಿ ಪಾಸ್ತಾ ಶೇಕಡಾ 100ರಷ್ಟು ಆರೋಗ್ಯಕರವಾದ ಆಹಾರ ಎಂದು ನೆಸ್ಲೆ ಸಂಸ್ಥೆ ಸಮರ್ಥನೆ ನೀಡಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications