ಏರ್ ಇಂಡಿಯಾ ವಿಮಾನ ಸಂಸ್ಥೆ ಹರಾಜು: ಕೊಳ್ಳುವವರೇ ಇಲ್ಲ!
ನವದೆಹಲಿ, ಮೇ 31: ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಹರಾಜು ಹಾಕಲು ಸರ್ಕಾರ ಮುಂದಾಗಿದೆ. ಆದರೆ, ಅದನ್ನು ಬಿಡ್ ಮಾಡಲು ಯಾರೂ ಆಸಕ್ತಿ ತೋರಿಸಿಲ್ಲ.
ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಡ್ ಮಾಡಲು ಯಾರೂ ಸಹ ಮುಂದೆ ಬಂದಿಲ್ಲ ಎಂಬುದನ್ನು ನಾಗರಿಕ ವಿಮಾನಯಾನ ಸಚಿವಾಲಯ ಗುರುವಾರ ತಿಳಿಸಿದೆ.
ಏರ್ ಇಂಡಿಯಾ ಖರೀದಿಯ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಿಡ್ಡರ್ಗಳು ತಮ್ಮ ಆಸಕ್ತಿಯನ್ನು ತಿಳಿಸಲು (ಇಒಎಲ್) ಗುರುವಾರ ಸಂಜೆ 5 ಗಂಟೆಯವರೆಗೆ ಸಮಯ ನೀಡಲಾಗಿತ್ತು. ಆದರೆ, ಯಾವ ಬಿಡ್ಡರ್ಗಳೂ ಇಒಎಲ್ ಸಲ್ಲಿಕೆ ಮಾಡಲಿಲ್ಲ.
ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆಯನ್ನು ಖರೀದಿ ಪ್ರಕ್ರಿಯೆಗೆ ಮೇ 30ರ ವರೆಗೂ ಯಾವುದೇ ಬಿಡ್ ಬಂದಿಲ್ಲ ಎಂದು ವಿಮಾನಯಾನ ಕಾರ್ಯದರ್ಶಿ ಆರ್.ಎನ್. ಚೌಬೆ ತಿಳಿಸಿದ್ದಾರೆ.

ಏರ್ ಇಂಡಿಯಾಕ್ಕೆ ಇದುವರೆಗೂ ಯಾವುದೇ ಬಿಡ್ ಬಂದಿಲ್ಲ. ಇಒಎಲ್ ಸಲ್ಲಿಸಲು ನೀಡಿದ್ದ ಗಡುವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಬಿಡ್ಗಳ ಸಲ್ಲಿಕೆಗೆ ನೀಡಲಾಗಿದ್ದ ಗಡುವನ್ನು ಈಗಾಗಲೇ ಮೇ 14ರಿಂದ 31ರವರೆಗೆ ವಿಸ್ತರಣೆ ಮಾಡಲಾಗಿತ್ತು.
ಏರ್ ಇಂಡಿಯಾದಿಂದ ಸಾವಿರಾರು ಕೋಟಿ ನಷ್ಟವಾಗುತ್ತಿದ್ದು, ಸಂಸ್ಥೆ ಸಾಲದಲ್ಲಿದೆ. ಸರ್ಕಾರವು ಇದರ ಮೇಲಿನ ಶೇ 76ರಷ್ಟು ಬಂಡವಾಳವನ್ನು ಹಿಂದಕ್ಕೆ ಪಡೆದುಕೊಳ್ಳಲು ಉದ್ದೇಶಿಸಿದೆ.
ಸರ್ಕಾರವು ಷರತ್ತುಗಳನ್ನು ಬಹಿರಂಗಪಡಿಸಿದ ಬಳಿಕ ಯಾವ ಕಂಪೆನಿಯೂ ಬಿಡ್ ಸಲ್ಲಿಸಲು ಆಸಕ್ತಿ ತೋರಿಸಿಲ್ಲ. ಜೆಟ್ ಏರ್ವೇಸ್ ಮತ್ತು ಇಂಡಿಗೋ ಸಂಸ್ಥೆಗಳು ಈಗಾಗಲೇ ಕಣದಿಂದ ಹಿಂದಕ್ಕೆ ಸರಿದಿವೆ.
ಬಿಡ್ಡಿಂಗ್ ಮೊತ್ತದ ಆಧಾರದ ಮೇಲೆ ಸಂಸ್ಥೆಯನ್ನು ಮಾರಾಟ ಮಾಡುವುದೋ ಅಥವಾ ಬಿಡುವುದೋ ಎಂಬುದನ್ನು ನಿರ್ಧರಿಸಲಾಗುವುದು ಎಂದು ಚೌಬೆ ಅವರು ತಿಳಿಸಿದ್ದರು.
ಎರಡು ಹಂತಗಳಲ್ಲಿ ಬಿಡ್ಡಿಂಗ್ ನಡೆಯಲಿದೆ. ಮೊದಲು ಬಿಡ್ಡಿಂಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಬೇಕು. ಅದರಲ್ಲಿ ಯಶಸ್ವಿಯಾದವರಿಗೆ ಆರ್ಥಿಕ ಬಿಡ್ ಸಲ್ಲಿಸಲು ಹೇಳಲಾಗುತ್ತದೆ. ಮಾರಾಟಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲವಿದೆ. ಆದರೆ, ನಮಗೆ ಅಗತ್ಯವಿರುವಷ್ಟು ಹಣ ಬಾರದಿದ್ದರೆ, ಮಾರಾಟವನ್ನು ನಡೆಸಬೇಕೇ ಅಥವಾ ಬೇಡವೇ ಎಂಬುದನ್ನು ಬಳಿಕ ನಿರ್ಧರಿಸುತ್ತೇವೆ ಎಂದು ಹೇಳಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications