ತ್ವರೆ ಮಾಡಿ, ಏರ್ ಇಂಡಿಯಾದಲ್ಲಿ 706 ರು ನೀಡಿ ಪ್ರಯಾಣಿಸಿ!
ನವದೆಹಲಿ, ಜೂನ್ 18 : ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ, ಮುಂಗಾರು ಋತುವಿಗೆ 'ಸಾವನ್ ಸ್ಪೆಷಲ್' ಎಂಬ ಹೊಸ ಆಫರ್ ನೀಡುತ್ತಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾ ಕಂಪನಿಯನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಮಾತುಕತೆ ನಡೆಯುತ್ತಿದೆ. ಇನ್ನೊಂದೆಡೆ ಆಫರ್ ಗಳನ್ನು ನೀಡಲಾಗುತ್ತಿದೆ.
ಈ ರಿಯಾಯಿತಿ ದರದ ಕೊಡುಗೆಯಂತೆ ವಿಮಾನ ಪ್ರಯಾಣ ದರಗಳು ಕನಿಷ್ಟ 706 ರು ನಿಂದ ಆರಂಭವಾಗುತ್ತವೆ. ಟಿಕೆಟ್ ಮಾರಾಟ ಜೂನ್ 21ರ ವರೆಗೆ ಇರುತ್ತದೆ.

ಜುಲೈ 1ರಿಂದ ಸೆಪ್ಟೆಂಬರ್ 20ರ ನಡುವಿನ ಅವಧಿಯಲ್ಲಿ ಪ್ರಯಾಣ ಮಾಡಬಹುದು. ಈ ವಿಶೇಷ ರಿಯಾಯಿತಿ ದರದ ಪ್ರಯಾಣವು ಆಯ್ದ ಕೆಲವು ದೇಶಿಯ ಮಾರ್ಗಗಳಿಗೆ ಮಾತ್ರ ಅನ್ವಯವಾಗುತ್ತದೆ.
#Amazing Fare starting INR 706/- only. No one can match. Fly with #AirIndia and start your own adventure. #SaavanSpecial #FlyAI pic.twitter.com/0ztAM7AA7Z
— Air India (@airindiain) June 17, 2017
ಏರ್ ಇಂಡಿಯಾದ ಸಾವನ್ ಸ್ಪೆಷಲ್ ಗೆ ಪೈಪೋಟಿ ನೀಡಲು ಸ್ಪೈಸ್ ಜೆಟ್ (ಸಮ್ಮರ್ ಸೇಲ್) ಟಿಕೆಟ್ ಬೆಲೆ 799 ರು (ತೆರಿಗೆ ಸೇರಿದಂತೆ), ಇಂಡಿಗೋ ಏರ್ 899 ರು, ಗೋ ಏರ್ 899 ರು, ವಿಸ್ತಾರ 849ರು ಕನಿಷ್ಟ ಪ್ರಯಾಣ ದರ ನಿಗದಿ ಮಾಡಿವೆ.
ಕಳೆದ ವರ್ಷಕ್ಕೆ ಹೋಲಿಸಿದರೆ ದೇಶಿ ವಿಮಾನಯಾನ ಕ್ಷೇತ್ರದಲ್ಲಿ ಪ್ರಯಾಣಿಕರ ಸಂಖ್ಯೆ ಶೇ 17.71ರಷ್ಟು ಏರಿಕೆ ಕಂಡಿದ್ದು, ಜನವರಿ -ಏಪ್ರಿಲ್ 2017 ಅವಧಿಯಲ್ಲಿ ಸುಮಾರು 364 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications