ಭಾರತದ ಈ 8 ನಗರಗಳಲ್ಲಿ ಏರ್ಟೆಲ್ 5ಜಿ ಪ್ಲಸ್ ಸೇವೆ ಪ್ರಾರಂಭ
ನವದೆಹಲಿ, ಅಕ್ಟೋಬರ್ 07: ಭಾರ್ತಿ ಏರ್ಟೆಲ್ ಕಂಪನಿಯು ಗುರುವಾರ ಭಾರತದ ಎಂಟು ಪ್ರಮುಖ ನಗರಗಳಲ್ಲಿ 5G ಪ್ಲಸ್ ಸೇವೆಗಳನ್ನು ಪ್ರಾರಂಭಿಸಿದೆ. ಇದರ ಮಧ್ಯೆ ಗ್ರಾಹಕರಿಗೆ ಕಂಪನಿಯು ಖುಷಿಯ ಸುದ್ದಿಯೊಂದನ್ನು ನೀಡಿದೆ. ಸದ್ಯ ಅಸ್ತಿತ್ವದಲ್ಲಿರುವ ಏರ್ಟೆಲ್ 4G ಸಿಮ್ ಅನ್ನು ಬಳಸಿಕೊಂಡೇ ಈಗ 5G ಸೇವೆಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಬಳಕೆದಾರರು ಸಿಮ್ ಕಾರ್ಡ್ ಅನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಕಂಪನಿ ತಿಳಿಸಿದೆ.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಸಿಲಿಗುರಿ, ನಾಗ್ಪುರ ಮತ್ತು ವಾರಣಾಸಿ ನಗರಗಳಲ್ಲಿ ಗ್ರಾಹಕರು ಹಂತ ಹಂತವಾಗಿ ಏರ್ಟೆಲ್ 5G ಪ್ಲಸ್ ಸೇವೆಗಳನ್ನು ಆನಂದಿಸಲು ಪ್ರಾರಂಭಿಸುತ್ತಾರೆ ಎಂದು ಕಂಪನಿಯು ತಿಳಿಸಿದೆ. ತನ್ನ ನೆಟ್ವರ್ಕ್ ಅನ್ನು ನಿರ್ಮಿಸಲು ಮತ್ತು ಪ್ರಾರಂಭಿಸುವುದನ್ನು ಮುಂದುವರೆಸಲಿದೆ ಎಂದು ಕಂಪನಿ ತಿಳಿಸಿದೆ.
5ಜಿ ಪ್ಲಸ್ ಸೇವೆಯಿಂದ ಗ್ರಾಹಕರು ಪ್ರಸ್ತುತ ವೇಗಕ್ಕಿಂತ 20 ರಿಂದ 30 ಪಟ್ಟು ಹೆಚ್ಚಿನ ವೇಗವನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಇದರ ಜೊತೆಗೆ ಅದ್ಭುತ ಧ್ವನಿ ಅನುಭವ ಮತ್ತು ಸೂಪರ್-ಫಾಸ್ಟ್ ಕರೆ ಸಂಪರ್ಕವನ್ನು ನೀಡುತ್ತದೆ ಎಂದು ಕಂಪನಿಯು ಹೇಳಿದೆ.
5G ಸ್ಮಾರ್ಟ್ಫೋನ್ಗಳನ್ನು ಹೊಂದಿರುವ ಗ್ರಾಹಕರು ತಮ್ಮ ಅಸ್ತಿತ್ವದಲ್ಲಿರುವ ಡೇಟಾ ಯೋಜನೆಗಳಲ್ಲಿ ಹೆಚ್ಚಿನ ವೇಗದ ಏರ್ಟೆಲ್ 5G ಪ್ಲಸ್ ಸೇವೆಯನ್ನು ಆನಂದಿಸುತ್ತಾರೆ. "ಸದ್ಯಕ್ಕೆ 5G ಹ್ಯಾಂಡ್ಸೆಟ್ ಮತ್ತು ಸಿಮ್ ಅನ್ನು ಹೊಂದಿರುವ ಗ್ರಾಹಕರಿಗೆ ಈ ಸೇವೆಯು ಸುಲಭವಾಗಿ ಸಿಗಲಿದೆ. 4ಜಿ ಸಿಮ್ ಅನ್ನು ಹೊಂದಿರುವವರು ಸಹ ಯಾವುದೇ ರೀತಿ ಸಿಮ್ ಬದಲಾಯಿಸುವ ಅಗತ್ಯ ಇರುವುದಿಲ್ಲ," ಎಂದು ಭಾರ್ತಿ ಏರ್ಟೆಲ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಗೋಪಾಲ್ ವಿಟ್ಟಲ್ ಹೇಳಿದರು.
"ಏರ್ಟೆಲ್ 5G ಪ್ಲಸ್ ಅನ್ನು ಜನರು ಸಂವಹನ ಮಾಡುವ, ವಾಸಿಸುವ, ಕೆಲಸ ಮಾಡುವ, ಸಂಪರ್ಕಿಸುವ ಮತ್ತು ಮುಂಬರುವ ವರ್ಷಗಳಲ್ಲಿ ಆಡುವ ವಿಧಾನವನ್ನು ಮರು ವ್ಯಾಖ್ಯಾನಿಸಲು ಸಿದ್ಧವಾಗಿದೆ," ಎಂದು ವಿಟ್ಟಲ್ ತಿಳಿಸಿದ್ದಾರೆ.
ಏರ್ಟೆಲ್ 5G ಪ್ಲಸ್ ಹೆಚ್ಚು ಅಭಿವೃದ್ಧಿ ಹೊಂದಿದ ಪರಿಸರ ವ್ಯವಸ್ಥೆಯೊಂದಿಗೆ ವಿಶ್ವದಲ್ಲೇ ವ್ಯಾಪಕವಾದ ಸ್ವೀಕಾರವನ್ನು ಹೊಂದಿರುವ ತಂತ್ರಜ್ಞಾನದ ಮೇಲೆ ಕಾರ್ಯ ನಿರ್ವಹಿಸುತ್ತದೆ. ಇದು ಭಾರತದಲ್ಲಿನ ಎಲ್ಲಾ 5G ಸ್ಮಾರ್ಟ್ಫೋನ್ಗಳು ಏರ್ಟೆಲ್ ನೆಟ್ವರ್ಕ್ನಲ್ಲಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸುತ್ತದೆ.
ಏರ್ಟೆಲ್ 5G ಪ್ಲಸ್ ಹೈ-ಡೆಫಿನಿಷನ್ ವೀಡಿಯೊ ಸ್ಟ್ರೀಮಿಂಗ್, ಗೇಮಿಂಗ್, ಮಲ್ಟಿಪಲ್ ಚಾಟಿಂಗ್, ಫೋಟೋಗಳ ತ್ವರಿತ ಅಪ್ಲೋಡ್ ಮತ್ತು ಹೆಚ್ಚಿನವುಗಳಿಗೆ ಸೂಪರ್ಫಾಸ್ಟ್ ಪ್ರವೇಶವನ್ನು ಅನುಮತಿಸುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications