Airtel Recharge Offer: ಏರ್ಟೆಲ್ ಗ್ರಾಹಕರಿಗೆ ಗುಡ್ನ್ಯೂಸ್: ಇಲ್ಲಿದೆ ಅಗ್ಗದ ಸ್ಪೆಷಲ್ ಆಫರ್
ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪನಿಯಾಗಿ ಏರ್ ಟೆಲ್ ಸಂಸ್ಥೆ ಬೆಳೆದು ನಿಂತಿದೆ. ಮೊಬೈಲ್ ಮಯವಾಗಿರುವ ಈ ಜಗತ್ತಿನಲ್ಲಿ ಅದರಲ್ಲೂ ಭಾರತದಲ್ಲಿ ಸಿಮ್ ಎಂದರೆ ಏರ್ಟೆಲ್ ಎನ್ನುವ ಹೆಸರು ಮೊದಲು ಜನರ ಬಾಯಲ್ಲಿ ಬರುವ ಮಟ್ಟಿಗೆ ಏರ್ಟೆಲ್ ಸಂಸ್ಥೆ ತನ್ನ ಜನಪ್ರಿಯತೆ ಹೆಚ್ಚಿಸಿಕೊಂಡಿದೆ. ಭಾರತದಲ್ಲಿ ಗ್ರಾಹಕರ ನಂಬಿಕೆಗೆ ಅರ್ಹವಾದ ಸಿಮ್ಗಳಲ್ಲಿ ಕೆಲವೇ ಕೆಲವು ಆಯ್ಕೆಗಳಿರುವುದರಿಂದ ಬಹುತೇಕರು ಏರ್ಟೆಲ್ ನೆಟ್ವರ್ಕ್ಅನ್ನೇ ಬಳಸುತ್ತಿದ್ದಾರೆ.
ಬಳಕೆದಾರರ ಸಂಖ್ಯೆ ಹೆಚ್ಚಿದಂತೆ ದರ ಏರಿಕೆ ಸಮಾನ್ಯ. ಆದರೆ ಇತ್ತೀಚಿಗೆ ಏರ್ಟೆಲ್ ರೀಚಾರ್ಜ್ ಬೆಲೆಯನ್ನು ಏಕಾಏಕಿ ಹೆಚ್ಚಿಸಲಾಗಿತ್ತು. ಈ ಡಿಜಿಟಲ್ ಯುಗದಲ್ಲಿ ಮೊಬೈಲ್ ಹಾಗೂ ನೆಟ್ವರ್ಕ್ ಅತ್ಯಗತ್ಯವಾದ ಕಾರಣ ಜನ ರೀಚಾರ್ಜ್ ಬೆಲೆ ಏರಿಕೆಯನ್ನು ಹೆಚ್ಚಾಗಿ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಬದಲಿಗೆ ತಿಂಗಳ ರೀಚಾರ್ಜ್ ಖಾಲಿಯಾಗುತ್ತಿದ್ದಂತೆ ಹೊಸ ರೀಚಾರ್ಜ್ ಮಾಡಿಯೇ ಮಾಡುತ್ತಾರೆ.

ಇತ್ತೀಚಿಗಷ್ಟೇ ದರ ಏರಿಕೆ ಮಾಡಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ ಏರ್ಟೆಲ್ ಇದೀಗ ತಮ್ಮ ಗ್ರಾಹಕರಿಗಾಗಿ ಸಿಹಿ ಸುದ್ದಿಯನ್ನು ನೀಡಿದ್ದು, ಏರ್ಟೆಲ್ ತನ್ನ ಗ್ರಾಹಕರಿಗೆ ಜಾಕ್ ಪಾಟ್ ಆಫರ್ ನೀಡಿದೆ. ಅಗ್ಗದ ಬೆಲೆಯಲ್ಲಿ ದೀರ್ಘಾವಧಿಯ ಯೋಜನೆಯನ್ನು ಏರ್ಟೆಲ್ ಗ್ರಾಹಕರಿಕೆ ನೀಡುತ್ತಿದ್ದು, ಏರ್ಟೆಲ್ ಬಳಕೆದಾರರು ಈ ಆಫರ್ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಏರ್ಟೆಲ್ ಗ್ರಾಹಕರಿಗೆ ನೀಡಿರುವ ಹೊಸ ಆಫರ್ ವಿವರ ಇಲ್ಲಿದೆ.
ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಸೂಚನೆಯಂತೆ ಏರ್ಟೆಲ್ ಇತ್ತೀಚಿಗೆ ಅಗ್ಗದ ಬೆಲೆಯ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಆಫರ್ ಮೂಲಕ ಏರ್ಟೆಲ್ 84 ದಿನಗಳ ದೀರ್ಘಾವಧಿ ಯೋಜನೆಯನ್ನು ಗ್ರಾಹಕರಿಗೆ ಪರಿಚಯಿಸಿದೆ. ಕೇವಲ 469 ರೂಪಾಯಿಗೆ 84 ದಿನಗಳ ದೀರ್ಘಾವಧಿ ಸೇವೆ ಸಿಗಲಿದೆ.
ಏರ್ಟೆಲ್ನ ಈ ಹೊಸ ರಿಚಾರ್ಜ್ ಯೋಜನೆಯಯಲ್ಲಿ ಒಟ್ಟು 900 ಉಚಿತ ಎಸ್ಎಮ್ಎಸ್ ಸೌಲಭ್ಯ ಇರಲಿದ್ದು, ಸ್ಥಳೀಯ ಮತ್ತು ಎಸ್ಟಿಡಿ ಕರೆಗಳು ಸಂಪೂರ್ಣವಾಗಿ ಉಚಿತವಾಗಿರಲಿದೆ. ಈ ಯೋಜನೆಯಲ್ಲಿ ಏರ್ಟೆಲ್ ಇಂಟರ್ನೆಟ್ ಸೌಲಭ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಇನ್ನು ಈ ಪ್ಲಾನ್ನಲ್ಲಿ ರಿಚಾರ್ಜ್ ಮಾಡುವ ಗ್ರಾಹಕರಿಗೆ ಉಚಿತ ಹೆಲೋಟ್ಯೂನ್ ಸೇವೆ ಸಹ ಸಿಗಲಿದೆ. ಇದು ದೀರ್ಘಾವಧಿಯ ಯೋಜನೆಯಾಗಿರುವುದರಿಂದ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯ ಬಳಸುವ ಗ್ರಾಹಕರಿಗೆ ಇದು ಬಜೆಟ್ ಫ್ರೆಂಡ್ಲಿ ಯೋಜನೆಯಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications