Breaking; ಆಕಾಶ್ ಅಂಬಾನಿ ರಿಲಾಯನ್ಸ್ ಜಿಯೋಗೆ ಹೊಸ ಛೇರ್ಮನ್
ಮುಂಬೈ, ಜೂನ್ 27; ರಿಲಾಯನ್ಸ್ ಜಿಯೋಗೆ ಹೊಸ ಸಾರಥಿ ನೇಮಕವಾಗಿದೆ. ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ನೂತನ ಛೇರ್ಮನ್ ಎಂದು ಮಂಗಳವಾರ ಘೋಷಣೆ ಮಾಡಲಾಗಿದೆ.
ಮುಖೇಶ್ ಅಂಬಾನಿ ರಿಲಾಯನ್ಸ್ ಜಿಯೋ ನಿರ್ದೇಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆಕಾಶ್ ಅಂಬಾನಿ ರಿಲಾಯನ್ಸ್ ಜಿಯೋ ನೂತನ ಛೇರ್ಮನ್ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಕಾಶ್ ಅಂಬಾನಿ ರಿಲಾಯನ್ಸ್ ಜಿಯೋ ನಾನ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿದ್ದರು. ಈಗ ನೂತನ ಛೇರ್ಮನ್ ಆಗಿ ಆಯ್ಕೆಗೊಂಡಿದ್ದಾರೆ. ಆದರೆ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ನ ಅಧ್ಯಕ್ಷರಾಗಿ ಮುಕೇಶ್ ಅಂಬಾನಿ ಮುಂದುವರಿಯಲಿದ್ದಾರೆ.

ಮುಖೇಶ್ ಅಂಬಾನಿ ಜೂನ್ 27ರಿಂದಲೇ ಜಾರಿಗೆ ಬರುವಂತೆ ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಕಜ್ ಮೋಹನ್ ಪವಾರ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಅಧಿಕಾರವಹಿಸಿಕೊಂಡಿದ್ದಾರೆ.
ಮುಂದಿನ 5 ವರ್ಷಗಳ ಕಾಲ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಪಂಕಜ್ ಪವಾರ್ ನೇಮಕ ಮಾಡಲಾಗಿದೆ. ಹೆಚ್ಚುವರಿ ನಿರ್ದೇಶಕರಾದ ರಮೀಂದರ್ ಸಿಂಗ್ ಗುಜ್ರಾಲ್ ಮತ್ತು ಕೆ. ವಿ. ಚೌಧರಿ ಮುಂದೆ ಸ್ವತಂತ್ರ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರ ನೇಮಕಾತಿಯೂ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ.
ಜೂನ್ 27ರಂದು ನಡೆದ ರಿಲಾಯನ್ಸ್ ಜಿಯೋ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ರಿಲಾಯನ್ಸ್ ಜಿಯೋನಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ.
ಅಕಾಶ್ ಅಂಬಾನಿ ಪರಿಚಯ; ಮುಖೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್ ಅಂಬಾನಿ ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ಮುಖೇಶ್ ಅಂಬಾನಿ ಪರವಾಗಿ ಕಂಪನಿಯ ವಹಿವಾಟುಗಳನ್ನು ನಿರ್ವಹಿಸುತ್ತಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ಅಂಬಾನಿ ನೀಡಿದ ರಾಜೀನಾಮೆಯನ್ನೂ ಮಂಡಳಿ ಅಂಗೀಕರಿಸಿದೆ. ಬಳಿಕ ಈ ಹೊಸ ನೇಮಕವು ನಡೆದಿದೆ. ಆದರೆ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ನ ಅಧ್ಯಕ್ಷರಾಗಿ ಮುಕೇಶ್ ಅಂಬಾನಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.
ಆಕಾಶ್ ಅಂಬಾನಿ ಜಿಯೋದ 4ಜಿ ವ್ಯವಸ್ಥೆಯನ್ನು ನಿರ್ಮಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 2020ರಲ್ಲಿ ಪ್ರಪಂಚದಾದ್ಯಂತದ ದೊಡ್ಡ ತಂತ್ರಜ್ಞಾನ ಕಂಪನಿಗಳು ಜಿಯೋದಲ್ಲಿ ಹೂಡಿಕೆ ಮಾಡಿದ್ದನ್ನು ನೆನಪಿಸಿಕೊಳ್ಳಬಹುದು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications