ಬೆಂಗಳೂರಿನಿಂದ ವಿಶಾಖಪಟ್ಟಣ ಆಕಾಶ ಏರ್ನಿಂದ ನೇರ ವಿಮಾನಯಾನ
ಬೆಂಗಳೂರು, ನವೆಂಬರ್ 20: ಡಿಸೆಂಬರ್ 10ರಿಂದ ಬೆಂಗಳೂರಿನಿಂದ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ವಿಮಾನ ಸೇವೆಯನ್ನು ದೇಶಿಯ ವಿಮಾನ ಸಂಸ್ಥೆ ಆಕಾಶ್ ಏರ್ ಘೋಷಿಸಿದೆ. ಇದು ಈ ವರ್ಷದ ಆಗಸ್ಟ್ನಲ್ಲಿ ಪ್ರಾರಂಭವಾದಾಗಿನಿಂದ ಏರ್ಲೈನ್ನ 10ನೇ ತಾಣವಾಗಿದೆ.
ಆಕಾಶ್ ವಿಮಾನಯಾನ ಸಂಸ್ಥೆಯು ಇತ್ತೀಚೆಗೆ ನವೆಂಬರ್ 26ರಿಂದ ಪುಣೆ ಮತ್ತು ಬೆಂಗಳೂರನ್ನು ಎರಡು ದೈನಂದಿನ ವಿಮಾನ ಸೇವೆಗಳನ್ನು ಪ್ರಾರಂಭಿಸಿತ್ತು. ಈ ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಮಾನ ಸೇವೆ ಆರಂಭಿಸುವುದಾಗಿ ಕೇಳಿತ್ತು. ನಾಗರಿಕರ ಬೇಡಿಕೆ ಹೆಚ್ಚಾದ ಕಾರಣ ಡಿಸೆಂಬರ್ 17ರಿಂದ ಪ್ರಾರಂಭವಾಗುವುದ ಬೆಂಗಳೂರಿನಿಂದ ಅಹಮದಾಬಾದ್ಗೆ ವಿಮಾನಸೇವೆ ಆರಂಭಿಸುವುದಾಗಿ ಆಕಾಶ್ ಏರ್ ತಿಳಿಸಿದೆ.
ಆಕಾಶ ಏರ್ ಬೆಂಗಳೂರು ಹಾಗೂ ವಿಶಾಖಪಟ್ಟಣಂ ಮಾರ್ಗದಲ್ಲಿ ಎರಡು ದೈನಂದಿನ ವಿಮಾನಗಳನ್ನು ಪ್ರಾರಂಭಿಸಲಿದ್ದು, ಮೊದಲ ಆವರ್ತನವು ಡಿಸೆಂಬರ್ 10 ರಿಂದ ಮತ್ತು ಎರಡನೇ ಆವರ್ತನವು ಡಿಸೆಂಬರ್ 12 ರಿಂದ ಪ್ರಾರಂಭವಾಗುತ್ತದೆ ಎಂದು ಏರ್ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಈ ಸೇವೆಯೊಂದಿಗೆ ಮುಂಬೈ, ಅಹಮದಾಬಾದ್, ದೆಹಲಿ, ಚೆನ್ನೈ, ಕೊಚ್ಚಿ, ಗುವಾಹಟಿ ಪುಣೆ ಹಾಗೂ ವಿಶಾಖಪಟ್ಟಣಂ ಎಂಬ ಎಂಟು ನಗರಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ ಆಕಾಶ್ ಏರ್ ಈಗ 24 ಗಂಟೆಗಳ ತಡೆರಹಿತ ವಿಮಾನಗಳ ಸೇವೆಗಳನ್ನು ನೀಡುತ್ತಿದೆ. 10 ಸ್ಥಳಗಳಲ್ಲಿ ಎಂಟು ಬೆಂಗಳೂರಿನೊಂದಿಗೆ ಸಂಪರ್ಕ ಹೊಂದಿವೆ ಎಂದು ಅದು ಹೇಳಿದೆ.

ಅಕಾಶ್ ತನ್ನ ಕಾರ್ಯಾಚರಣೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ. ಡಿಸೆಂಬರ್ ಮಧ್ಯದ ವೇಳೆಗೆ 10 ನಗರಗಳಲ್ಲಿ ಒಟ್ಟು ಹದಿನಾಲ್ಕು ಮಾರ್ಗಗಳಲ್ಲಿ 450 ವೀಕ್ಲಿ ವಿಮಾನಗಳ ಸೇವೆಯನ್ನು ನೀಡುವ ನಿರೀಕ್ಷೆಯಿದೆ. ನಾವು ವಿಶಾಖಪಟ್ಟಣಂಗೆ ನಮ್ಮ ಸೇವೆಯನ್ನು ವಿಸ್ತರಿಸುತ್ತಿದ್ದು, ನಾಲ್ಕನೇ ಪ್ರಮುಖ ತಾಣವಾಗಿ ಪ್ರತಿದಿನ ಎರಡನೆ ಬಾರಿ ವಿಶಾಖಪಟ್ಟಣಂ ಹಾಗೂ ಬೆಂಗಳೂರು ನಡುವೆ ವಿಮಾನ ಸೇವೆ ಆರಂಭಿಸುತ್ತಿದ್ದೇವೆ.

ನಮ್ಮ ವಿಮಾನ ಸೇವೆಗಳ ಹೆಚ್ಚಳಕ್ಕೆ ವಿಶಾಖಪಟ್ಟಣಂಗೆ 2 ಬಾರಿ ವಿಮಾನ ಸೇವೆ ಪ್ರಾರಂಭಿಸುತ್ತಿದ್ದೇವೆ. ಇದರೊಂದಿಗೆ ಹೆಚ್ಚು ಬೇಡಿಕೆ ಇರುವ ಬೆಂಗಳೂರು ಅಹಮದಾಬಾದ್ ಹಾಗೂ ಬೆಂಗಳೂರು ಪುಣೆ ಮಾರ್ಗವಾಗಿ ತಲಾ ಒಂದು ವಿಮಾನಗಳನ್ನು ಆರಂಭಿಸಲಾಗುತ್ತಿದೆ ಎಂದು ಆಕಾಶ್ ಏರ್ನ ಸಹ ಸಂಸ್ಥಾಪಕ ಪ್ರವೀಣ್ ಅಯ್ಯರ್ ತಿಳಿಸಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications