ಬ್ಯಾಂಕ್ ವಿಲೀನ ವಿರೋಧಿಸಿ, ಅಕ್ಟೋಬರ್ 22ರಂದು ಮುಷ್ಕರಕ್ಕೆ ಕರೆ
ನವದೆಹಲಿ, ಅಕ್ಟೋಬರ್ 20: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿಲೀನವನ್ನು ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ ಎಂದು ಬ್ಯಾಂಕ್ ಒಕ್ಕೂಟಗಳು ಭಾನುವಾರದಂದು ಖಚಿತಪಡಿಸಿವೆ.
ದೇಶದ 10 ಪ್ರಮುಖ ಬ್ಯಾಂಕ್ ಗಳನ್ನು ವಿಲೀನ ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದ್ದು, ನಾಲ್ಕು ಬ್ಯಾಂಕ್ ಗಳಾಗಲಿವೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ದೇಶದಲ್ಲಿ 12 ಸಾರ್ವಜನಿಕ ವಲಯದ ಬ್ಯಾಂಕ್ ಗಳು ಮಾತ್ರ ಕಾರ್ಯನಿರ್ವಹಿಸಲಿವೆ. 2017ರಲ್ಲಿ 27 ಸಾರ್ವಜನಿಕ ವಲಯ ಬ್ಯಾಂಕ್ ಗಳಿದ್ದವು.
All India Bank Employees Association (AIBEA) and Bank Employees Federation of India (BEFI) have called an all-India bank strike on October 22 in protest against the mergers of 10 public sector banks.
— ANI (@ANI) October 20, 2019
ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ಮುಷ್ಕರ ನಡೆಯುವ ಸಾಧ್ಯತೆಯಿತ್ತು. ಆದರೆ ಕೇಂದ್ರ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ನೀಡಿದ ಭರವಸೆ ಮೇರೆಗೆ ಎರಡು ದಿನಗಳ ಬಂದ್ ಮುಂದೂಡಲಾಗಿತ್ತು.

ಆದರೆ, ಈಗ ಅಕ್ಟೋಬರ್ 22ರಂದು ಮುಷ್ಕರಕ್ಕೆ ಮತ್ತೊಮ್ಮೆ ಕರೆ ನೀಡಲಾಗಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ(AIBOC), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(AIIBOA), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(INBOC), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆ(NOBO)ಯ ವತಿಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕೇಂದ್ರ ಸರ್ಕಾರವು ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದೀಪಲ್ ಕುಮಾರ್ ಶರ್ಮಾ ಘೋಷಿಸಿದ್ದಾರೆ.
ಈ ಹಿಂದೆ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ವಿಲೀನದ ಬಳಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿಲ್ಲ, ಹೀಗಾಗಿ, ಈಗ 10 ಬ್ಯಾಂಕ್ ವಿಲೀನದ ಬಳಿಕ ಹೊರ ಹೊಮ್ಮುವ 4 ಬ್ಯಾಂಕ್ ಗಳ ಉದ್ಯೋಗಿಗಳು ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಭೀತಿ ಬೇಡ" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications